ರಾಮನಗರ: ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಓರ್ವ ಇನ್ಸ್ಪೆಕ್ಟರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಇನ್ಸ್ಪೆಕ್ಟರ್ಗೆ ರಾಮನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೆ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ 12 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಇನ್ನುಳಿದಂತೆ ಅವರ ಸಂಪರ್ಕಕ್ಕೆ ಯಾರೆಲ್ಲಾ ಬಂದಿದ್ದರು ಎಂದು ಪತ್ತೆ ಹಚ್ಚಲಾಗುತ್ತಿದೆ.
ಇದೇ ಜೂನ್ 28ರಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದರು. ಆ ವೇಳೆ ಡಿಸಿಎಂಗೆ ಇನ್ಸ್ಪೆಕ್ಟರ್ ಅವರನ್ನ ಭದ್ರತೆಗೆ ನಿಯೋಜಿಸಲಾಗಿತ್ತು. ಇದೀಗ ಇನ್ಸ್ಪೆಕ್ಟರ್ಗೆ ಸೋಂಕು ದೃಢಪಟ್ಟಿದ್ದು, ಸಭೆಯಲ್ಲಿ ಭಾಗಿಯಾಗಿದ್ದವರೆಲ್ಲರಲ್ಲೂ ಆತಂಕ ಮನೆ ಮಾಡಿದೆ.
ಡಿಸಿಎಂ ಭಾಗಿಯಾಗಿದ್ದ ಸಭೆಯಲ್ಲಿ ಡಿಸಿ, ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು. ಸೋಂಕಿತ ವ್ಯಕ್ತಿಯ ಮತ್ತಷ್ಟು ಸಂಪರ್ಕಿತರನ್ನು ಜಿಲ್ಲಾಡಳಿತ ಪತ್ತೆ ಹಚ್ಚುತ್ತಿದೆ.