ETV Bharat / state

ಡಿಕೆಶಿ ಅರ್ಜಿ ಹಾಕಿ ರಾಜ್ಯ ಸುತ್ತೋಕೆ ಆಗುವುದಿಲ್ಲ: ಸಿಪಿ ಯೋಗೇಶ್ವರ್​

author img

By

Published : Apr 12, 2023, 7:15 PM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಕ್ಷೇತ್ರದಿಂದ ಟಿಕೆಟ್​ ಘೋಷಣೆಯಾಗಿದ್ದು, ಈ ಹಿನ್ನೆಲೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

cp-yogeshwar-press-conference-after-announcement-of-ticket
ಡಿಕೆಶಿ ಅರ್ಜಿ ಹಾಕಿ ರಾಜ್ಯ ಸುತ್ತೋಕೆ ಆಗುವುದಿಲ್ಲ: ಸಿಪಿ ಯೋಗೇಶ್ವರ್​

ರಾಮನಗರ: "ನನಗೆ ಟಿಕೆಟ್ ಕೊಡುವ ವಿಶ್ವಾಸ ಇತ್ತು. ಅದರಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ವರಿಷ್ಠರು ನನ್ನ ಹೆಸರು ಸೂಚಿಸಿದ್ದಾರೆ. ನನಗೆ ಚನ್ನಪಟ್ಟಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು ಹೋರಾಟಕ್ಕೆ ಸಿದ್ಧವಾಗಿದ್ದೇನೆ" ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಪಟ್ಟಿ ಬಿಡುಗಡೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, "ನಮ್ಮ ಪಕ್ಷ ಬೇರೆ ಬೇರೆ ರಾಜ್ಯಗಳಲ್ಲಿ‌ ಹಲವು ಪ್ರಯೋಗ ಮಾಡಿ ಯಶಸ್ವಿಯಾಗಿದೆ. ನಮ್ಮ ಪಕ್ಷದ ವೈಶಿಷ್ಟ್ಯವೇ ಹಾಗೆ. ಹೊಸಬರಿಗೆ ಅವಕಾಶ ನೀಡುವ ಕೆಲಸ ಮಾಡಿದ್ದಾರೆ. ವಯಸ್ಸಿನ ಕಾರಣ ಅಥವಾ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್​ ನೀಡಿಲ್ಲ. ಆದರೆ, ಹಿರಿಯ ನಾಯಕರಿಗೆ ಪರ್ಯಾಯ ಅವಕಾಶಗಳಿವೆ" ಎಂದರು.

ಇನ್ನು ಕನಕಪುರದಿಂದ ಸಚಿವ ಆರ್ ಅಶೋಕ್​ಗೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿದ, "ಕೆಲವು ವಿರೋಧ ಪಕ್ಷದ ನಾಯಕರು ಕೆಲ ಕ್ಷೇತ್ರಗಳಲ್ಲಿ ವಿರೋಧ ಇಲ್ಲದಂತೆ ಮಾಡಿಕೊಂಡಿದ್ದರು. ಅದನ್ನ ತಪ್ಪಿಸಲು ನಮ್ಮ ಪಕ್ಷ ಈ ಹೊಸ ತಂತ್ರ ಬಳಸಿದೆ. ಡಿಕೆಶಿಗೆ ಎದುರಾಳಿಗಳೇ ಇಲ್ಲ ಅನ್ನೋ ಮಾತು ಇತ್ತು. ಅಲ್ಲಿಂದ ಜೆಡಿಎಸ್ ಅಭ್ಯರ್ಥಿಯೇ ಕಾಂಗ್ರೆಸ್​ಗೆ ಸೇರಿದ್ದರು. ಹಾಗಾಗಿ ಇಂತಹ ಕ್ಷೇತ್ರಗಳಲ್ಲಿ ಅವರ ವಿರುದ್ಧ ಬಲಿಷ್ಠ ನಾಯಕರನ್ನ ಹಾಕಿದ್ದಾರೆ. ವಿರೋಧಿಗಳನ್ನ ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ. ಒಂದಷ್ಟು ಹೊಸ ಪ್ರಯೋಗ ನಡೆದಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

"ಇದಲ್ಲದೇ ಮಂಡ್ಯದಲ್ಲಿ ನಾನೇ ಕರೆತಂದ ಇಬ್ಬರಿಗೆ ಟಿಕೆಟ್ ಸಿಕ್ಕಿದೆ. ಇಂಡವಾಳು ಸಚ್ಚಿದಾನಂದ ಹಾಗೂ ಅಶೋಕ್ ಜಯರಾಂಗೆ ಹೈಕಮಾಂಡ್​​ ಟಿಕೆಟ್​ ನೀಡಿದೆ. ರಾಮನಗರದಲ್ಲೂ ಇಬ್ಬರು ಹೊಸ ಮುಖಗಳಿಗೆ ಮಣೆಹಾಕಲಾಗಿದೆ. ರಾಮನಗರದಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಕನಕಪುರದಲ್ಲಿ ಗೆಲುವು ಸೋಲು ಆಮೇಲೆ. ಆದರೆ, ಪೈಪೋಟಿ ಇದ್ದೇ ಇರುತ್ತೆ. ಈಗ ಡಿಕೆ ಶಿವಕುಮಾರ್ ಕೇವಲ ಅರ್ಜಿ ಹಾಕಿ ರಾಜ್ಯ ಸುತ್ತೋಕೆ ಆಗುವುದಿಲ್ಲ. ಅವರೂ ಕ್ಷೇತ್ರದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ" ಎಂದರು.

ಹೆಚ್​​​ಡಿಕೆಗೆ ಸಿಪಿವೈ ಟಾಂಗ್: "ಈ ಚುನಾವಣೆಯಲ್ಲಿ ನನಗೆ ಯಾವುದೇ ಆತಂಕ ಇಲ್ಲ. ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಸಿರಿಯಸ್ ಆಗಿ ತೆಗೆದುಕೊಂಡಿಲ್ಲ. ನಮ್ಮ ತಾಲೂಕಿನಲ್ಲಿ ಒಕ್ಕಲಿಗ ಮತದಾರಿಗೆ ಪ್ರತಿಷ್ಠ ಇದೆ. ನಾವು ನಾಮಿನೇಷನ್ ಹಾಕಿದರೆ ಸಾಕು ಗೆಲ್ಲುತ್ತೇವೆ ಎಂದು ಅಂದುಕೊಳ್ಳುತ್ತಾರೆ. ನಮದೆಲ್ಲ ನಮ್ಮ ದುಡಿಮೆಯಿಂದ ಬರುವಂತಹ ಓಟುಗಳಾಗಿವೆ. ನಮ್ಮ ತಾಲೂಕಿನಲ್ಲಿ ಪ್ರತಿಯೊಬ್ಬ ಮತದಾರರು ಪ್ರಬುದ್ಧರಾಗಿದ್ದಾರೆ. ಅಭಿವೃದ್ಧಿ ಮಾಡಿದರೆ ಮಾತ್ರ ಜನ ಮತ ಹಾಕುತ್ತಾರೆ" ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಟಾಂಗ್​​ ಕೊಟ್ಟರು.

ರಾಜಕೀಯ ರಣರಂಗದಲ್ಲಿ ಚದುರಂಗದ ಆಟ- ಡಿಕೆ ಸುರೇಶ್​: ಇನ್ನು ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ಆರ್.ಅಶೋಕ್ ಅವರಿಗೆ ಟಿಕೆಟ್ ನೀಡಿದ ವಿಚಾರವಾಗಿ ಸಂಸದ ಡಿಕೆ ಸುರೇಶ್ ಮಾತನಾಡಿ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಆರ್.ಅಶೋಕ್ ಅವರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಅವರ ಪಕ್ಷದ ಆದೇಶದ ಮೇರೆಗೆ ಅವರು ಸ್ಪರ್ಧೆ ಮಾಡಿರಬಹುದು. ಏನಾಗುತ್ತೋ ನೋಡೊಣ, ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮ ಬಳಿ ನಡೆಯೊದಿಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಇದು ಕನಕಪುರಕ್ಕೆ ಹೊಸದಲ್ಲ. ಮೇ.10ರಂದು ಜನತೆ ಇದಕ್ಕೆ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರನ್ನ ಕಟ್ಟಿ ಹಾಕುತ್ತಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಇಲ್ಲಿ ಯಾರನ್ನೂ ಕಟ್ಟಾಕೊಕಾಗಲ್ಲ. ಯಾರಿಗೆ ಏನು ಮಾಡಬೇಕು ಎಂದು ಕನಕಪುರದ ಜನತೆಗೆ ಗೊತ್ತಿದೆ. ಇಲ್ಲಿ ಯಾರಿಗೂ ತೊಂದರೆ ಮಾಡುವುದಕ್ಕೆ ಆಗುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಇಲ್ಲಿ ಅರ್ಜಿ ಹಾಕಿ ಬಳಿಕ ರಾಜ್ಯ ಪ್ರವಾಸ ಮಾಡುತ್ತಾರೆ ಅಷ್ಟೇ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಇದನ್ನೂ ಓದಿ: ತಮ್ಮೇಶ್ ಗೌಡ ಗೆಲ್ಲದಿದ್ದರೆ ನನ್ನ ಮರ್ಯಾದೆ ಉಳಿಯಲ್ಲ, ತಲೆ ಎತ್ತಿ ಓಡಾಡೋಕ್ಕಾಗಲ್ಲ: ಬಿಎಸ್​ವೈ

ರಾಮನಗರ: "ನನಗೆ ಟಿಕೆಟ್ ಕೊಡುವ ವಿಶ್ವಾಸ ಇತ್ತು. ಅದರಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ವರಿಷ್ಠರು ನನ್ನ ಹೆಸರು ಸೂಚಿಸಿದ್ದಾರೆ. ನನಗೆ ಚನ್ನಪಟ್ಟಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು ಹೋರಾಟಕ್ಕೆ ಸಿದ್ಧವಾಗಿದ್ದೇನೆ" ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಪಟ್ಟಿ ಬಿಡುಗಡೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, "ನಮ್ಮ ಪಕ್ಷ ಬೇರೆ ಬೇರೆ ರಾಜ್ಯಗಳಲ್ಲಿ‌ ಹಲವು ಪ್ರಯೋಗ ಮಾಡಿ ಯಶಸ್ವಿಯಾಗಿದೆ. ನಮ್ಮ ಪಕ್ಷದ ವೈಶಿಷ್ಟ್ಯವೇ ಹಾಗೆ. ಹೊಸಬರಿಗೆ ಅವಕಾಶ ನೀಡುವ ಕೆಲಸ ಮಾಡಿದ್ದಾರೆ. ವಯಸ್ಸಿನ ಕಾರಣ ಅಥವಾ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್​ ನೀಡಿಲ್ಲ. ಆದರೆ, ಹಿರಿಯ ನಾಯಕರಿಗೆ ಪರ್ಯಾಯ ಅವಕಾಶಗಳಿವೆ" ಎಂದರು.

ಇನ್ನು ಕನಕಪುರದಿಂದ ಸಚಿವ ಆರ್ ಅಶೋಕ್​ಗೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿದ, "ಕೆಲವು ವಿರೋಧ ಪಕ್ಷದ ನಾಯಕರು ಕೆಲ ಕ್ಷೇತ್ರಗಳಲ್ಲಿ ವಿರೋಧ ಇಲ್ಲದಂತೆ ಮಾಡಿಕೊಂಡಿದ್ದರು. ಅದನ್ನ ತಪ್ಪಿಸಲು ನಮ್ಮ ಪಕ್ಷ ಈ ಹೊಸ ತಂತ್ರ ಬಳಸಿದೆ. ಡಿಕೆಶಿಗೆ ಎದುರಾಳಿಗಳೇ ಇಲ್ಲ ಅನ್ನೋ ಮಾತು ಇತ್ತು. ಅಲ್ಲಿಂದ ಜೆಡಿಎಸ್ ಅಭ್ಯರ್ಥಿಯೇ ಕಾಂಗ್ರೆಸ್​ಗೆ ಸೇರಿದ್ದರು. ಹಾಗಾಗಿ ಇಂತಹ ಕ್ಷೇತ್ರಗಳಲ್ಲಿ ಅವರ ವಿರುದ್ಧ ಬಲಿಷ್ಠ ನಾಯಕರನ್ನ ಹಾಕಿದ್ದಾರೆ. ವಿರೋಧಿಗಳನ್ನ ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ. ಒಂದಷ್ಟು ಹೊಸ ಪ್ರಯೋಗ ನಡೆದಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

"ಇದಲ್ಲದೇ ಮಂಡ್ಯದಲ್ಲಿ ನಾನೇ ಕರೆತಂದ ಇಬ್ಬರಿಗೆ ಟಿಕೆಟ್ ಸಿಕ್ಕಿದೆ. ಇಂಡವಾಳು ಸಚ್ಚಿದಾನಂದ ಹಾಗೂ ಅಶೋಕ್ ಜಯರಾಂಗೆ ಹೈಕಮಾಂಡ್​​ ಟಿಕೆಟ್​ ನೀಡಿದೆ. ರಾಮನಗರದಲ್ಲೂ ಇಬ್ಬರು ಹೊಸ ಮುಖಗಳಿಗೆ ಮಣೆಹಾಕಲಾಗಿದೆ. ರಾಮನಗರದಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಕನಕಪುರದಲ್ಲಿ ಗೆಲುವು ಸೋಲು ಆಮೇಲೆ. ಆದರೆ, ಪೈಪೋಟಿ ಇದ್ದೇ ಇರುತ್ತೆ. ಈಗ ಡಿಕೆ ಶಿವಕುಮಾರ್ ಕೇವಲ ಅರ್ಜಿ ಹಾಕಿ ರಾಜ್ಯ ಸುತ್ತೋಕೆ ಆಗುವುದಿಲ್ಲ. ಅವರೂ ಕ್ಷೇತ್ರದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ" ಎಂದರು.

ಹೆಚ್​​​ಡಿಕೆಗೆ ಸಿಪಿವೈ ಟಾಂಗ್: "ಈ ಚುನಾವಣೆಯಲ್ಲಿ ನನಗೆ ಯಾವುದೇ ಆತಂಕ ಇಲ್ಲ. ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಸಿರಿಯಸ್ ಆಗಿ ತೆಗೆದುಕೊಂಡಿಲ್ಲ. ನಮ್ಮ ತಾಲೂಕಿನಲ್ಲಿ ಒಕ್ಕಲಿಗ ಮತದಾರಿಗೆ ಪ್ರತಿಷ್ಠ ಇದೆ. ನಾವು ನಾಮಿನೇಷನ್ ಹಾಕಿದರೆ ಸಾಕು ಗೆಲ್ಲುತ್ತೇವೆ ಎಂದು ಅಂದುಕೊಳ್ಳುತ್ತಾರೆ. ನಮದೆಲ್ಲ ನಮ್ಮ ದುಡಿಮೆಯಿಂದ ಬರುವಂತಹ ಓಟುಗಳಾಗಿವೆ. ನಮ್ಮ ತಾಲೂಕಿನಲ್ಲಿ ಪ್ರತಿಯೊಬ್ಬ ಮತದಾರರು ಪ್ರಬುದ್ಧರಾಗಿದ್ದಾರೆ. ಅಭಿವೃದ್ಧಿ ಮಾಡಿದರೆ ಮಾತ್ರ ಜನ ಮತ ಹಾಕುತ್ತಾರೆ" ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಟಾಂಗ್​​ ಕೊಟ್ಟರು.

ರಾಜಕೀಯ ರಣರಂಗದಲ್ಲಿ ಚದುರಂಗದ ಆಟ- ಡಿಕೆ ಸುರೇಶ್​: ಇನ್ನು ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ಆರ್.ಅಶೋಕ್ ಅವರಿಗೆ ಟಿಕೆಟ್ ನೀಡಿದ ವಿಚಾರವಾಗಿ ಸಂಸದ ಡಿಕೆ ಸುರೇಶ್ ಮಾತನಾಡಿ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಆರ್.ಅಶೋಕ್ ಅವರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಅವರ ಪಕ್ಷದ ಆದೇಶದ ಮೇರೆಗೆ ಅವರು ಸ್ಪರ್ಧೆ ಮಾಡಿರಬಹುದು. ಏನಾಗುತ್ತೋ ನೋಡೊಣ, ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮ ಬಳಿ ನಡೆಯೊದಿಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಇದು ಕನಕಪುರಕ್ಕೆ ಹೊಸದಲ್ಲ. ಮೇ.10ರಂದು ಜನತೆ ಇದಕ್ಕೆ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರನ್ನ ಕಟ್ಟಿ ಹಾಕುತ್ತಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಇಲ್ಲಿ ಯಾರನ್ನೂ ಕಟ್ಟಾಕೊಕಾಗಲ್ಲ. ಯಾರಿಗೆ ಏನು ಮಾಡಬೇಕು ಎಂದು ಕನಕಪುರದ ಜನತೆಗೆ ಗೊತ್ತಿದೆ. ಇಲ್ಲಿ ಯಾರಿಗೂ ತೊಂದರೆ ಮಾಡುವುದಕ್ಕೆ ಆಗುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಇಲ್ಲಿ ಅರ್ಜಿ ಹಾಕಿ ಬಳಿಕ ರಾಜ್ಯ ಪ್ರವಾಸ ಮಾಡುತ್ತಾರೆ ಅಷ್ಟೇ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಇದನ್ನೂ ಓದಿ: ತಮ್ಮೇಶ್ ಗೌಡ ಗೆಲ್ಲದಿದ್ದರೆ ನನ್ನ ಮರ್ಯಾದೆ ಉಳಿಯಲ್ಲ, ತಲೆ ಎತ್ತಿ ಓಡಾಡೋಕ್ಕಾಗಲ್ಲ: ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.