ETV Bharat / state

ನನ್ನ ಬಳಿ ಇನ್ನಷ್ಟು ಹಗರಣದ ಸಿಡಿ ಇವೆ; ದಿನೇಶ್ ಕಲ್ಲಹಳ್ಳಿ ಬಾಂಬ್

ನನಗೆ ಈಗಾಗಲೇ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ಬಗ್ಗೆ ನಾನು ರಾಮನಗರ ಎಸ್ಪಿಗೆ ದೂರು ನೀಡುತ್ತಿದ್ದೇನೆ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.

author img

By

Published : Mar 3, 2021, 5:45 PM IST

Updated : Mar 3, 2021, 8:45 PM IST

denesh-kallalli
ದಿನೇಶ್ ಕಲ್ಲಳ್ಳಿ

ರಾಮನಗರ: ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ನಾನು ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ಇಡೀ ಪ್ರಕರಣದ ಸಂಬಂಧ ಸಂಪೂರ್ಣವಾಗಿ ತನಿಖೆಯಾಗಬೇಕು ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ಕನಕಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಾನು ಪೊಲೀಸ್ ಆಯುಕ್ತರಿಗೆ ಸಿಡಿಯನ್ನು ನೀಡಿದ್ದೇನೆ. ಆ ಸಿಡಿಯಲ್ಲಿ ಸತ್ಯಾಂಶ ಇರುವುದರಿಂದ ನೈತಿಕತೆಯಲ್ಲಿ ಸಿಎಂ ರಾಜೀನಾಮೆ ಪಡೆದಿದ್ದಾರೆ ಎಂದರು.

ದಿನೇಶ್ ಕಲ್ಲಳ್ಳಿ
ಈ ಪ್ರಕರಣ ಗಂಭೀರತೆಯಿಂದ ಕೂಡಿದ್ದು, ಸಚಿವ ಸಂಪುಟದಲ್ಲಿ ಇಂಥವರು ಇರುವುದು ಬೇಡ, ರಾಜೀನಾಮೆ ಪಡೆಯಿರಿ ಅಂತಾ ಹೇಳಿದ್ದೆ. ಅದರಂತೆ ‌ಸಿಎಂ ರಾಜೀನಾಮೆ ಪಡೆದಿದ್ದಾರೆ ಎಂದಿದ್ದಾರೆ.
ಇನ್ನಷ್ಟು ಹಗರಣ ಇದೆ - ಹೊಸ ಬಾಂಬ್

ರಮೇಶ್ ಜಾರಕಿಹೊಳಿ ತನಿಖೆಯ ಮೇಲೆ ಪ್ರಭಾವ ಬೀರಲ್ಲ ಅಂತಾ ಅಂದುಕೊಂಡಿದ್ದೇನೆ. ನಾನು ಉಚ್ಚನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುತ್ತೇನೆ. ನನ್ನ ಹೋರಾಟ ಮುಂದುವರೆಯುತ್ತದೆ. ನಾನು ಕಾನೂನು ಪರವಾಗಿ ಹೋರಾಟ ಮಾಡುತ್ತೇನೆ. ಇನ್ನೂ ಕೂಡ ಬಹಳ ಅಕ್ರಮಗಳು ಇವೆ, ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು.

ಇಂತಹ ಗಂಭೀರ ಪ್ರಕರಣಗಳು ಮತ್ತಷ್ಟು ನನ್ನ ಬಳಿ ಇವೆ. ಕೆಲವು ಪ್ರಭಾವಿ ನಾಯಕರು ಹಾಗೂ ಸಚಿವ ಸಂಪುಟದಲ್ಲಿರುವವರದ್ದು ಸೇರಿದೆ. ಮುಂದೆ ಇದರ ಬಗ್ಗೆ ಮಾತನಾಡುತ್ತೇನೆ ಎಂದ ಅವರು, ನನಗೆ ಈಗಾಗಲೇ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ಬಗ್ಗೆ ರಾಮನಗರ ಎಸ್ಪಿಗೆ ದೂರು ನೀಡುತ್ತಿದ್ದೇನೆ ಎಂದಿದ್ದಾರೆ.

ರಾಮನಗರ: ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ನಾನು ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ಇಡೀ ಪ್ರಕರಣದ ಸಂಬಂಧ ಸಂಪೂರ್ಣವಾಗಿ ತನಿಖೆಯಾಗಬೇಕು ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಜಿಲ್ಲೆಯ ಕನಕಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಾನು ಪೊಲೀಸ್ ಆಯುಕ್ತರಿಗೆ ಸಿಡಿಯನ್ನು ನೀಡಿದ್ದೇನೆ. ಆ ಸಿಡಿಯಲ್ಲಿ ಸತ್ಯಾಂಶ ಇರುವುದರಿಂದ ನೈತಿಕತೆಯಲ್ಲಿ ಸಿಎಂ ರಾಜೀನಾಮೆ ಪಡೆದಿದ್ದಾರೆ ಎಂದರು.

ದಿನೇಶ್ ಕಲ್ಲಳ್ಳಿ
ಈ ಪ್ರಕರಣ ಗಂಭೀರತೆಯಿಂದ ಕೂಡಿದ್ದು, ಸಚಿವ ಸಂಪುಟದಲ್ಲಿ ಇಂಥವರು ಇರುವುದು ಬೇಡ, ರಾಜೀನಾಮೆ ಪಡೆಯಿರಿ ಅಂತಾ ಹೇಳಿದ್ದೆ. ಅದರಂತೆ ‌ಸಿಎಂ ರಾಜೀನಾಮೆ ಪಡೆದಿದ್ದಾರೆ ಎಂದಿದ್ದಾರೆ.
ಇನ್ನಷ್ಟು ಹಗರಣ ಇದೆ - ಹೊಸ ಬಾಂಬ್

ರಮೇಶ್ ಜಾರಕಿಹೊಳಿ ತನಿಖೆಯ ಮೇಲೆ ಪ್ರಭಾವ ಬೀರಲ್ಲ ಅಂತಾ ಅಂದುಕೊಂಡಿದ್ದೇನೆ. ನಾನು ಉಚ್ಚನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುತ್ತೇನೆ. ನನ್ನ ಹೋರಾಟ ಮುಂದುವರೆಯುತ್ತದೆ. ನಾನು ಕಾನೂನು ಪರವಾಗಿ ಹೋರಾಟ ಮಾಡುತ್ತೇನೆ. ಇನ್ನೂ ಕೂಡ ಬಹಳ ಅಕ್ರಮಗಳು ಇವೆ, ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು.

ಇಂತಹ ಗಂಭೀರ ಪ್ರಕರಣಗಳು ಮತ್ತಷ್ಟು ನನ್ನ ಬಳಿ ಇವೆ. ಕೆಲವು ಪ್ರಭಾವಿ ನಾಯಕರು ಹಾಗೂ ಸಚಿವ ಸಂಪುಟದಲ್ಲಿರುವವರದ್ದು ಸೇರಿದೆ. ಮುಂದೆ ಇದರ ಬಗ್ಗೆ ಮಾತನಾಡುತ್ತೇನೆ ಎಂದ ಅವರು, ನನಗೆ ಈಗಾಗಲೇ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ಬಗ್ಗೆ ರಾಮನಗರ ಎಸ್ಪಿಗೆ ದೂರು ನೀಡುತ್ತಿದ್ದೇನೆ ಎಂದಿದ್ದಾರೆ.

Last Updated : Mar 3, 2021, 8:45 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.