ETV Bharat / state

ಕಾವೇರಿ ನದಿ ದಾಟುವ ವೇಳೆ ದುರಂತ : ಹಲವು ಭಕ್ತರು ಕೊಚ್ಚಿಕೊಂಡು ಹೋಗಿರುವ ಶಂಕೆ

author img

By

Published : Feb 26, 2022, 11:14 AM IST

Updated : Feb 26, 2022, 1:35 PM IST

ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕಾಲ್ನಡಿಗೆಯ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ತೆರಳಿದ ಭಕ್ತರು ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕಾಸ್ಪದ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಹಲವು ಭಕ್ತರನ್ನು ರಕ್ಷಿಸಿದ್ದು, ಇನ್ನೂ ಹಲವವರು ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ.

devotees-drown-in-kaveri-river
ಕಾವೇರಿ ನದಿ ದಾಟುವ ವೇಳೆ ದುರಂತ

ರಾಮನಗರ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿರುವ ಶಂಕಾಸ್ಪದ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.

ರಾಮನಗರ ಜಿಲ್ಲೆ ಸೇರಿದಂತೆ ಬೆಂಗಳೂರಿನ ನಾನಾ ಭಾಗದಿಂದ ಸಾವಿರಾರು ಭಕ್ತರು ಮಹಾದೇಶ್ವರಸ್ವಾಮಿ ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿ, ಕನಕಪುರ, ದೊಡ್ಡ ಆಲಹಳ್ಳಿ, ಏಳಗಳ್ಳಿ, ಹೆಗ್ಗನೂರು, ಕುಪ್ಪೆದೊಡ್ಡಿ ಮಾರ್ಗವಾಗಿ ಸಂಗಮ ಬಳಿಯ ಬೊಮ್ಮಸಂದ್ರ ಬಳಿ ಕಾವೇರಿ ನದಿ ದಾಟಿಕೊಂಡು ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಹಲವು ವರ್ಷಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.

ಕಾವೇರಿ ನದಿ ದಾಟುವ ವೇಳೆ ದುರಂತ : ಹಲವು ಭಕ್ತರು ಕೊಚ್ಚಿಕೊಂಡು ಹೋಗಿರುವ ಶಂಕೆ

ಮಹಾದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ಆಗಮಿಸುವ ಸಾವಿರಾರು ಭಕ್ತರಿಗೆ ಅರಣ್ಯ ಇಲಾಖೆಯಿಂದ ಆಗಲಿ ಪೊಲೀಸ್ ಇಲಾಖೆ ಅಥವಾ ತಾಲೂಕು ಆಡಳಿತದಿಂದ ವತಿಯಿಂದ ನದಿ ದಾಟಲು ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದು ಈ ರೀತಿಯ ಅವಗಡ ಸಂಭವಿಸಲು ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ವೃದ್ಧೆಯೊಬ್ಬರ ಶವ ಕಾವೇರಿ ನದಿಯ ಬಳಿ ಪತ್ತೆಯಾಗಿದ್ದು, ಇನ್ನೂ ಹಲವು ಭಕ್ತರು ಬೊಮ್ಮಸಂದ್ರದ ಬಳಿ ಕಾವೇರಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂದು ಹೇಳಲಾಗ್ತಿದೆ.

ಓದಿ : ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿ

ರಾಮನಗರ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿರುವ ಶಂಕಾಸ್ಪದ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ.

ರಾಮನಗರ ಜಿಲ್ಲೆ ಸೇರಿದಂತೆ ಬೆಂಗಳೂರಿನ ನಾನಾ ಭಾಗದಿಂದ ಸಾವಿರಾರು ಭಕ್ತರು ಮಹಾದೇಶ್ವರಸ್ವಾಮಿ ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿ, ಕನಕಪುರ, ದೊಡ್ಡ ಆಲಹಳ್ಳಿ, ಏಳಗಳ್ಳಿ, ಹೆಗ್ಗನೂರು, ಕುಪ್ಪೆದೊಡ್ಡಿ ಮಾರ್ಗವಾಗಿ ಸಂಗಮ ಬಳಿಯ ಬೊಮ್ಮಸಂದ್ರ ಬಳಿ ಕಾವೇರಿ ನದಿ ದಾಟಿಕೊಂಡು ಮಹಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಹಲವು ವರ್ಷಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.

ಕಾವೇರಿ ನದಿ ದಾಟುವ ವೇಳೆ ದುರಂತ : ಹಲವು ಭಕ್ತರು ಕೊಚ್ಚಿಕೊಂಡು ಹೋಗಿರುವ ಶಂಕೆ

ಮಹಾದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ಆಗಮಿಸುವ ಸಾವಿರಾರು ಭಕ್ತರಿಗೆ ಅರಣ್ಯ ಇಲಾಖೆಯಿಂದ ಆಗಲಿ ಪೊಲೀಸ್ ಇಲಾಖೆ ಅಥವಾ ತಾಲೂಕು ಆಡಳಿತದಿಂದ ವತಿಯಿಂದ ನದಿ ದಾಟಲು ಯಾವುದೇ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದು ಈ ರೀತಿಯ ಅವಗಡ ಸಂಭವಿಸಲು ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ವೃದ್ಧೆಯೊಬ್ಬರ ಶವ ಕಾವೇರಿ ನದಿಯ ಬಳಿ ಪತ್ತೆಯಾಗಿದ್ದು, ಇನ್ನೂ ಹಲವು ಭಕ್ತರು ಬೊಮ್ಮಸಂದ್ರದ ಬಳಿ ಕಾವೇರಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂದು ಹೇಳಲಾಗ್ತಿದೆ.

ಓದಿ : ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿ

Last Updated : Feb 26, 2022, 1:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.