ETV Bharat / state

ಡಿಕೆಶಿ ಅವರ ಖೆಡ್ಡಾವನ್ನು ಅವರೇ ತೋಡಿಕೊಂಡಿದ್ದಾರೆ: ಸಚಿವ ಅಶ್ವತ್ಥನಾರಾಯಣ ಲೇವಡಿ - Etv bharat kannada

ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸುವಂತೆ ಕಾಂಗ್ರೆಸ್‌ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ, ಈ ಬಗ್ಗೆ ಮಾತನಾಡಲು ಕಾಂಗ್ರೆಸ್​​ಗೆ ನೈತಿಕತೆ ಇಲ್ಲ. ಅವರ ತುಷ್ಟೀಕರಣ ರಾಜಕಾರಣವೇ ಇದಕ್ಕೆಲ್ಲ ಕಾರಣ ಎಂದು ಹೇಳಿದ್ದಾರೆ.

Dr. C.N. Ashwatthanarayan
ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ
author img

By

Published : Jul 29, 2022, 3:38 PM IST

Updated : Jul 29, 2022, 4:39 PM IST

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಅವರ ಖೆಡ್ಡಾ ತೋಡಿಕೊಂಡಿದ್ದಾರೆ. ನಾವೇನು‌ ಮಾಡುವ ಅಗತ್ಯ ಇಲ್ಲ. ಭ್ರಷ್ಟಾಚಾರ ಎಂಬುದು ಅವರ‌ ಸಂಸ್ಕೃತಿ. ಕನಕಪುರದಲ್ಲಿ ಖಂಡಿತ ಅದನ್ನು ಕ್ಲೀನ್ ಮಾಡುತ್ತೇವೆ. ಈ ಬಗ್ಗೆ ಅನುಮಾನ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸುವಂತೆ ಕಾಂಗ್ರೆಸ್‌ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮಾತನಾಡಲು ಕಾಂಗ್ರೆಸ್​​ಗೆ ನೈತಿಕತೆ ಇಲ್ಲ. ಅವರ ತುಷ್ಟೀಕರಣ ರಾಜಕಾರಣವೇ ಇದಕ್ಕೆಲ್ಲ ಕಾರಣ. ಅವರಿಗೂ ದೇಶದ್ರೋಹಿಗಳಿಗೂ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ. ಯಾವ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ ತನಿಖೆಗೆ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ ಕರ್ತವ್ಯ ಎಂದು ತಿಳಿಸಿದರು.

ಇದನ್ನೂ ಓದಿ: ಯಾರೇ ತಪ್ಪು ಮಾಡಿದ್ರೂ, ಸಿಎಂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಡಿಕೆಶಿ

ಬಿಜೆಪಿ ಕಾರ್ಯಕರ್ತರ ಆಕ್ರೋಶ ಈ ಸಂದರ್ಭದಲ್ಲಿ ಸಹಜ. ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಸರ್ಕಾರ ಹಾಗೂ ಗೃಹ ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇವೆ. ಯು.ಪಿ. ಮಾದರಿ ಅಲ್ಲ ಅದಕ್ಕಿಂತ ಐದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲಿ ಯಾವುದೇ ಮುಲಾಜಿಲ್ಲ ಎಂದರು.

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಅವರ ಖೆಡ್ಡಾ ತೋಡಿಕೊಂಡಿದ್ದಾರೆ. ನಾವೇನು‌ ಮಾಡುವ ಅಗತ್ಯ ಇಲ್ಲ. ಭ್ರಷ್ಟಾಚಾರ ಎಂಬುದು ಅವರ‌ ಸಂಸ್ಕೃತಿ. ಕನಕಪುರದಲ್ಲಿ ಖಂಡಿತ ಅದನ್ನು ಕ್ಲೀನ್ ಮಾಡುತ್ತೇವೆ. ಈ ಬಗ್ಗೆ ಅನುಮಾನ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಿಎಫ್‌ಐ, ಎಸ್‌ಡಿಪಿಐ ನಿಷೇಧಿಸುವಂತೆ ಕಾಂಗ್ರೆಸ್‌ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮಾತನಾಡಲು ಕಾಂಗ್ರೆಸ್​​ಗೆ ನೈತಿಕತೆ ಇಲ್ಲ. ಅವರ ತುಷ್ಟೀಕರಣ ರಾಜಕಾರಣವೇ ಇದಕ್ಕೆಲ್ಲ ಕಾರಣ. ಅವರಿಗೂ ದೇಶದ್ರೋಹಿಗಳಿಗೂ ವ್ಯತ್ಯಾಸ ಇಲ್ಲ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ. ಯಾವ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ ತನಿಖೆಗೆ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ ಕರ್ತವ್ಯ ಎಂದು ತಿಳಿಸಿದರು.

ಇದನ್ನೂ ಓದಿ: ಯಾರೇ ತಪ್ಪು ಮಾಡಿದ್ರೂ, ಸಿಎಂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಡಿಕೆಶಿ

ಬಿಜೆಪಿ ಕಾರ್ಯಕರ್ತರ ಆಕ್ರೋಶ ಈ ಸಂದರ್ಭದಲ್ಲಿ ಸಹಜ. ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಸರ್ಕಾರ ಹಾಗೂ ಗೃಹ ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇವೆ. ಯು.ಪಿ. ಮಾದರಿ ಅಲ್ಲ ಅದಕ್ಕಿಂತ ಐದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲಿ ಯಾವುದೇ ಮುಲಾಜಿಲ್ಲ ಎಂದರು.

Last Updated : Jul 29, 2022, 4:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.