ETV Bharat / state

SSLC EXAM : ರಾಮನಗರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

author img

By

Published : Jul 18, 2021, 5:38 PM IST

Updated : Jul 18, 2021, 5:46 PM IST

ಕೋವಿಡ್ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ್ವರ, ಕೆಮ್ಮು, ನೆಗಡಿ ಅಂತಹ ಲಕ್ಷಣ ಕಂಡು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ..

ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​
ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ರಾಮನಗರ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ರಾಮನಗರ ಜಿಲ್ಲೆ ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ ಗೋಚರವಾಗುವ ರೀತಿ ಪ್ರದರ್ಶನವಾಗಬೇಕು. ಈ ಬಾರಿ ಪರೀಕ್ಷೆ ಒಎಂಆರ್ ಶೀಟ್​ನಲ್ಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​
ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಕೋವಿಡ್ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ್ವರ, ಕೆಮ್ಮು, ನೆಗಡಿ ಅಂತಹ ಲಕ್ಷಣ ಕಂಡು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಸಂಘ-ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಸಭೆ ನಡೆಸಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.

ಸುರಕ್ಷಾ ಕೇಂದ್ರ : ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುವುದು. ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪರೀಕ್ಷೆಯ ನಂತರ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ ಎಂದರು.

ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​
ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಕಳೆದ ಬಾರಿ 3310 ಇದ್ದ ಪರೀಕ್ಷಾ ಕೇಂದ್ರಗಳನ್ನು 4885 ಹಾಗೂ 48000 ಪರೀಕ್ಷಾ ಕೊಠಡಿಗಳನ್ನು 73064ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಅವರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಪರೀಕ್ಷಾ‌ ಪ್ರವೇಶ ಪತ್ರ ಸಿಗಲಿಲ್ಲ ಎಂದು ಬಂದಿರುವ ದೂರುಗಳನ್ನು ಬಿಇಒ ಹಂತದಲ್ಲೇ ಪರಿಹರಿಸಲಾಗಿದೆ. ಬಂದಿರುವ ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ. ಗ್ರೀಷ್ಮ ಎಂಬ ಬಾಲಕಿಗೆ ಸಂಬಂಧಿಸಿದಂತೆ ಇದ್ದ ದೂರಿನಲ್ಲಿ ತಾಂತ್ರಿಕ ಸಮಸ್ಯೆ ಇದ್ದು, ಬಾಲಕಿ 10ನೇ ತರಗತಿ ಪರೀಕ್ಷೆಗೆ ಅರ್ಜಿ ಸಹ ಸಲ್ಲಿಕೆಯಾಗಿರಲಿಲ್ಲ. ಬಾಲಕಿಗೆ ಧೈರ್ಯ ತುಂಬಿ ಆಗಸ್ಟ್​ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ ಎಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದರು.

ಹಾವೇರಿಯಲ್ಲಿ 30 ಬಾಲಕರು ಪರೀಕ್ಷಾ ಶುಲ್ಕ ಪಾವತಿಸಿದ್ದು, ಶಿಕ್ಷಕ ದುರುಪಯೋಗ ಪಡಿಸಿಕೊಂಡಿರುತ್ತಾರೆ. ಶಿಕ್ಷಕನನ್ನು ಅಮಾನತು ಮಾಡಿ, ಆಗಸ್ಟ್​ನಲ್ಲಿ ನಡೆಯುವ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು‌ ಅವಕಾಶ ನೀಡಲಾಗಿದೆ ಎಂದರು.

ರಾಮನಗರ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ರಾಮನಗರ ಜಿಲ್ಲೆ ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ ಗೋಚರವಾಗುವ ರೀತಿ ಪ್ರದರ್ಶನವಾಗಬೇಕು. ಈ ಬಾರಿ ಪರೀಕ್ಷೆ ಒಎಂಆರ್ ಶೀಟ್​ನಲ್ಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​
ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಕೋವಿಡ್ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ್ವರ, ಕೆಮ್ಮು, ನೆಗಡಿ ಅಂತಹ ಲಕ್ಷಣ ಕಂಡು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಸಂಘ-ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಸಭೆ ನಡೆಸಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.

ಸುರಕ್ಷಾ ಕೇಂದ್ರ : ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುವುದು. ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪರೀಕ್ಷೆಯ ನಂತರ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಿದ್ದಾರೆ ಎಂದರು.

ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​
ರಾಮನರದಲ್ಲಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​

ಕಳೆದ ಬಾರಿ 3310 ಇದ್ದ ಪರೀಕ್ಷಾ ಕೇಂದ್ರಗಳನ್ನು 4885 ಹಾಗೂ 48000 ಪರೀಕ್ಷಾ ಕೊಠಡಿಗಳನ್ನು 73064ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಅವರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಪರೀಕ್ಷಾ‌ ಪ್ರವೇಶ ಪತ್ರ ಸಿಗಲಿಲ್ಲ ಎಂದು ಬಂದಿರುವ ದೂರುಗಳನ್ನು ಬಿಇಒ ಹಂತದಲ್ಲೇ ಪರಿಹರಿಸಲಾಗಿದೆ. ಬಂದಿರುವ ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ. ಗ್ರೀಷ್ಮ ಎಂಬ ಬಾಲಕಿಗೆ ಸಂಬಂಧಿಸಿದಂತೆ ಇದ್ದ ದೂರಿನಲ್ಲಿ ತಾಂತ್ರಿಕ ಸಮಸ್ಯೆ ಇದ್ದು, ಬಾಲಕಿ 10ನೇ ತರಗತಿ ಪರೀಕ್ಷೆಗೆ ಅರ್ಜಿ ಸಹ ಸಲ್ಲಿಕೆಯಾಗಿರಲಿಲ್ಲ. ಬಾಲಕಿಗೆ ಧೈರ್ಯ ತುಂಬಿ ಆಗಸ್ಟ್​ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ ಎಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದರು.

ಹಾವೇರಿಯಲ್ಲಿ 30 ಬಾಲಕರು ಪರೀಕ್ಷಾ ಶುಲ್ಕ ಪಾವತಿಸಿದ್ದು, ಶಿಕ್ಷಕ ದುರುಪಯೋಗ ಪಡಿಸಿಕೊಂಡಿರುತ್ತಾರೆ. ಶಿಕ್ಷಕನನ್ನು ಅಮಾನತು ಮಾಡಿ, ಆಗಸ್ಟ್​ನಲ್ಲಿ ನಡೆಯುವ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು‌ ಅವಕಾಶ ನೀಡಲಾಗಿದೆ ಎಂದರು.

Last Updated : Jul 18, 2021, 5:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.