ETV Bharat / state

ಆಗಸ್ಟ್​ 1 ರಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ

ದ್ವಿಚಕ್ರ, ತ್ರಿಚಕ್ರ ವಾಹನಗಳು ಸೇರಿದಂತೆ ಯಾವೆಲ್ಲಾ ವಾಹನಗಳಿಗೆ ನಿಷೇಧ..? ಇಲ್ಲಿದೆ ಮಾಹಿತಿ

author img

By

Published : Jul 25, 2023, 1:47 PM IST

Updated : Jul 25, 2023, 10:52 PM IST

auto bikes restricted on Dashpath highway
ಆಗಸ್ಟ್​ 1ರಿಂದ ದಶಪಥ ಹೆದ್ದಾರಿಯಲ್ಲಿ ಆಟೋ- ಬೈಕ್ ಸಂಚಾರಕ್ಕೆ ನಿರ್ಬಂಧ

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಬೈಕ್ ಹಾಗೂ ಆಟೋಗಳಿಗೆ ನಿರ್ಬಂಧ ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ದ್ವಿಚಕ್ರ ಹಾಗೂ ಮೂರು ಚಕ್ರದ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಈ ದಶಪಥ ಹೆದ್ದಾರಿಯಲ್ಲಿ 80 ಕಿಲೋ ಮೀಟರ್ ದಿಂದ 100 ಕಿಲೋಮೀಟರ್ ವರೆಗೆ ವೇಗಮಿತಿಯಲ್ಲಿ ಚಲಿಸಲು ಅವಕಾಶ ಇರುವುದರಿಂದ ಅಪಘಾತ ತಡೆಯುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ ಈ‌ ಕ್ರಮಕ್ಕೆ ಮುಂದಾಗಿದೆ. ಇದಲ್ಲದೆ ಈ ರಸ್ತೆಯಲ್ಲಿ ವೇಗಕ್ಕೆ ಹೊಂದಿಕೊಳ್ಳಲು ಹಾಗೂ ರಸ್ತೆ ಸುರಕ್ಷತೆಗೆ ಹೊಂದಿಕೊಳ್ಳದ ಕಾರಣ ದ್ವಿಚಕ್ರ ವಾಹನಗಳು ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್​ಗಳು ಸೇರಿದಂತೆ ಕೆಲವು ವಾಹನಗಳ ಮೇಲೆ ನಿಷೇಧ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಈ ಹೆದ್ದಾರಿಯಲ್ಲಿ ಯಾವ ವಾಹನಗಳಿಗೆ ನಿಷೇಧ ಗೊತ್ತಾ..!: ಮೋಟಾರ್ ಸೈಕಲ್​ಗಳು (ಸ್ಕೂಟರ್ ಹಾಗೂ ಇತರೆ ದ್ವಿಚಕ್ರ ವಾಹನಗಳು). ಮೂರು ಚಕ್ರದ ವಾಹನಗಳು (ಇ ಗಾಡಿಗಳು ಮತ್ತು ಇ ರಿಕ್ಷಾಗಳು). ಮೋಟಾರ್ ರಹಿತ ವಾಹನಗಳು. ಟ್ರೈಲರ್​ಗಳ ಸಹಿತ ಹಾಗೂ ರಹಿತವಾದ ವಿಶೇಷ ಟ್ರ್ಯಾಕ್ಟರ್​ಗಳು. ಮಲ್ಟಿ ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಹೀಗೆ ವೇಗ ಮಿತಿ ಕಡಿಮೆ ಇರುವ ವಾಹನಗಳಿಗೆ ದಶಪಥ ಹೆದ್ದಾರಿಯಲ್ಲಿ ಸಂಚರಿಸಲು‌ ಸಂಪೂರ್ಣ ನಿಷೇಧ ಹೇರಲಾಗಿದೆ. ಆಗಸ್ಟ್​ 1 ರಿಂದ ಈ ಹೆದ್ದಾರಿಯಲ್ಲಿ ದ್ವಿ ಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್ ಸೇರಿದಂತೆ ಕೆಲ ಲಘು ವಾಹನಗಳಿಗೆ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.

ಬೆಂಗಳೂರ- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು: ಬೆಂಗಳೂರು- ಮೈಸೂರು ಹೈವೇ ಉದ್ಘಾಟನೆಯಾದಂದಿನಿಂದಲೇ ಹೆದ್ದಾರಿಗೆ ಅಪಘಾತಗಳಿಂದಾಗಿ ಕಪ್ಪುಚುಕ್ಕೆ ಬಂದಿದೆ. ಹೆದ್ದಾರಿಯಲ್ಲಿ ಬ್ಯಾಕ್​ ಟು ಬ್ಯಾಕ್​ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿ ಕಾಮಗಾರಿ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಸಂಸದ ಪ್ರತಾಪ್​ ಸಿಂಹ ಅವರು ಕೂಡ ಮಾಧ್ಯಮಗೋಷ್ಟಿ ನಡೆಸಿ, ಅಪಘಾತಗಳಿಗೆ ಚಾಲಕರ ಅಜಾಗರೂಕತೆ ಕಾರಣವೇ ಹೊರತು ಹೆದ್ದಾರಿ ಕಾಮಗಾರಿ ಕಾರಣವಲ್ಲ ಎನ್ನುವ ಸ್ಪಷ್ಟನೆಯನ್ನೂ ಕೊಟ್ಟಿದ್ದರು. ಇದೀಗ ಹೆಚ್ಚುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ 120kmph ಸ್ಪೀಡ್​ನಲ್ಲಿ ಹೋಗುವ ಸವಾರರೇ ಎಚ್ಚರ! ಡ್ರೈವಿಂಗ್‌ ಲೈಸನ್ಸ್‌ ರದ್ದಾಗಬಹುದು!

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಬೈಕ್ ಹಾಗೂ ಆಟೋಗಳಿಗೆ ನಿರ್ಬಂಧ ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ದ್ವಿಚಕ್ರ ಹಾಗೂ ಮೂರು ಚಕ್ರದ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಈ ದಶಪಥ ಹೆದ್ದಾರಿಯಲ್ಲಿ 80 ಕಿಲೋ ಮೀಟರ್ ದಿಂದ 100 ಕಿಲೋಮೀಟರ್ ವರೆಗೆ ವೇಗಮಿತಿಯಲ್ಲಿ ಚಲಿಸಲು ಅವಕಾಶ ಇರುವುದರಿಂದ ಅಪಘಾತ ತಡೆಯುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ ಈ‌ ಕ್ರಮಕ್ಕೆ ಮುಂದಾಗಿದೆ. ಇದಲ್ಲದೆ ಈ ರಸ್ತೆಯಲ್ಲಿ ವೇಗಕ್ಕೆ ಹೊಂದಿಕೊಳ್ಳಲು ಹಾಗೂ ರಸ್ತೆ ಸುರಕ್ಷತೆಗೆ ಹೊಂದಿಕೊಳ್ಳದ ಕಾರಣ ದ್ವಿಚಕ್ರ ವಾಹನಗಳು ತ್ರಿಚಕ್ರ ವಾಹನಗಳು ಹಾಗೂ ಟ್ರ್ಯಾಕ್ಟರ್​ಗಳು ಸೇರಿದಂತೆ ಕೆಲವು ವಾಹನಗಳ ಮೇಲೆ ನಿಷೇಧ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಈ ಹೆದ್ದಾರಿಯಲ್ಲಿ ಯಾವ ವಾಹನಗಳಿಗೆ ನಿಷೇಧ ಗೊತ್ತಾ..!: ಮೋಟಾರ್ ಸೈಕಲ್​ಗಳು (ಸ್ಕೂಟರ್ ಹಾಗೂ ಇತರೆ ದ್ವಿಚಕ್ರ ವಾಹನಗಳು). ಮೂರು ಚಕ್ರದ ವಾಹನಗಳು (ಇ ಗಾಡಿಗಳು ಮತ್ತು ಇ ರಿಕ್ಷಾಗಳು). ಮೋಟಾರ್ ರಹಿತ ವಾಹನಗಳು. ಟ್ರೈಲರ್​ಗಳ ಸಹಿತ ಹಾಗೂ ರಹಿತವಾದ ವಿಶೇಷ ಟ್ರ್ಯಾಕ್ಟರ್​ಗಳು. ಮಲ್ಟಿ ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಹೀಗೆ ವೇಗ ಮಿತಿ ಕಡಿಮೆ ಇರುವ ವಾಹನಗಳಿಗೆ ದಶಪಥ ಹೆದ್ದಾರಿಯಲ್ಲಿ ಸಂಚರಿಸಲು‌ ಸಂಪೂರ್ಣ ನಿಷೇಧ ಹೇರಲಾಗಿದೆ. ಆಗಸ್ಟ್​ 1 ರಿಂದ ಈ ಹೆದ್ದಾರಿಯಲ್ಲಿ ದ್ವಿ ಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್ ಸೇರಿದಂತೆ ಕೆಲ ಲಘು ವಾಹನಗಳಿಗೆ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.

ಬೆಂಗಳೂರ- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು: ಬೆಂಗಳೂರು- ಮೈಸೂರು ಹೈವೇ ಉದ್ಘಾಟನೆಯಾದಂದಿನಿಂದಲೇ ಹೆದ್ದಾರಿಗೆ ಅಪಘಾತಗಳಿಂದಾಗಿ ಕಪ್ಪುಚುಕ್ಕೆ ಬಂದಿದೆ. ಹೆದ್ದಾರಿಯಲ್ಲಿ ಬ್ಯಾಕ್​ ಟು ಬ್ಯಾಕ್​ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿ ಕಾಮಗಾರಿ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಸಂಸದ ಪ್ರತಾಪ್​ ಸಿಂಹ ಅವರು ಕೂಡ ಮಾಧ್ಯಮಗೋಷ್ಟಿ ನಡೆಸಿ, ಅಪಘಾತಗಳಿಗೆ ಚಾಲಕರ ಅಜಾಗರೂಕತೆ ಕಾರಣವೇ ಹೊರತು ಹೆದ್ದಾರಿ ಕಾಮಗಾರಿ ಕಾರಣವಲ್ಲ ಎನ್ನುವ ಸ್ಪಷ್ಟನೆಯನ್ನೂ ಕೊಟ್ಟಿದ್ದರು. ಇದೀಗ ಹೆಚ್ಚುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ 120kmph ಸ್ಪೀಡ್​ನಲ್ಲಿ ಹೋಗುವ ಸವಾರರೇ ಎಚ್ಚರ! ಡ್ರೈವಿಂಗ್‌ ಲೈಸನ್ಸ್‌ ರದ್ದಾಗಬಹುದು!

Last Updated : Jul 25, 2023, 10:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.