ETV Bharat / state

ಜಿಲೆಟಿನ್​ ಸ್ಫೋಟ ಖಂಡಿಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ ವಾಟಾಳ್​ ನಾಗರಾಜ್​ - ವಾಟಳ್​ ನಾಗರಾಜ್​ ಕಿಡಿ,

ಜಿಲೆಟಿನ್​ ಸ್ಫೋಟವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು ಸಿಎಂ ರಾಜೀನಾಮೆಗೆ ವಾಟಾಳ್​ ನಾಗರಾಜ್​ ಆಗ್ರಹಿಸಿದರು.

gelatin blast, gelatin blast issue, gelatin blast news, Vatal Nagaraj angry, Vatal Nagaraj angry on CM Yediyurappa, ಜಿಲೆಟಿನ್​ ಸ್ಫೋಟ, ಜಿಲೆಟಿನ್​ ಸ್ಫೋಟ ಸುದ್ದಿ, ಜಿಲೆಟಿನ್​ ಸ್ಫೋಟ ವಿವಾದ, ವಾಟಳ್​ ನಾಗರಾಜ್​ ಕಿಡಿ, ಸಿಎಂ ಯಡಿಯೂರಪ್ಪ ಮೇಲೆ ವಾಟಳ್​ ನಾಗರಾಜ್​ ಕಿಡಿ,
ಸಿಎಂ ರಾಜೀನಾಮೆಗೆ ಆಗ್ರಹಿಸಿದ ವಾಟಾಳ್​ ನಾಗರಾಜ್​
author img

By

Published : Feb 25, 2021, 5:37 AM IST

ರಾಮನಗರ: ಚಿಕ್ಕಬಳ್ಳಾಪುರ, ಶಿವಮೊಗ್ಗದಲ್ಲಿ ಗಣಿಗಾರಿಕೆ ಸ್ಫೋಟವಾಗಿ 12 ಜನ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಕಠಿಣ ಕ್ರಮವಹಿಸುತ್ತೇವೆ ಎನ್ನುತ್ತಲೆ ಇದ್ದಾರೆ. ಇದುವರೆಗೂ ಕಠಿಣ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲರಾಗಿದ್ದಾರೆಂದು ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿದ ವಾಟಾಳ್​ ನಾಗರಾಜ್​

ಐಜೂರು ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಾತನಾಡಿದ ವಾಟಾಳ್​, ಸಿಎಂ ಒಂದು ಕಡೆ ಕ್ರಮ ಕೈಗೊಳ್ಳುತ್ತೇವೆ ಅಂದ್ರೆ, ಮತ್ತೊಂದೆಡೆ ಸಂಬಂಧಿಸಿದ ಸಚಿವರು ಸಿಐಡಿಗೆ ವಹಿಸುತ್ತೇವೆ ಎನ್ನುತ್ತಾರೆ. ಆದರೆ ಮೃತ ಕುಟುಂಬಕ್ಕೆ ನ್ಯಾಯ ಕೊಡಿಸೋರು ಯಾರು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಮೃತರಿಗೆ ರೇಟ್ ಫಿಕ್ಸ್ ಮಾಡಿದೆ. ಯಾರೇ ಸತ್ತರು 5 ಲಕ್ಷ ಪರಿಹಾರ ಕೊಡ್ತೇವೆಂದು ಹೇಳ್ತಾರೆ. ಹಾಗಾಗಿ ಇಂತಹ ಅಕ್ರಮಗಳಿಗೆ ತಡೆಯಿಲ್ಲದಂತೆ ಆಗಿದೆ. ಬಹುತೇಕ ರಾಜಕಾರಣಿಗಳು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಅವರದ್ದೇ ಭಾಗಿತ್ವ ಇದೆ. ಹಾಗಾಗಿ ಅಕ್ರಮ ಗಣಿಗಾರಿಕೆ ತಡೆಯಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಹೇಳಿದರು.

ಅಕ್ರಮ‌ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಾಗಲೇ ಸರ್ಕಾರ ರಾಜೀನಾಮೆ ಕೊಡಬೇಕಾಗಿತ್ತು. ಈ ಕೂಡಲೇ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಗಳಿಗೆ ಅಧಿಕಾರಿಗಳು ದಾಳಿ ನಡೆಸಿ ಸೂಕ್ತ ಕ್ರಮ‌ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಮನಗರ: ಚಿಕ್ಕಬಳ್ಳಾಪುರ, ಶಿವಮೊಗ್ಗದಲ್ಲಿ ಗಣಿಗಾರಿಕೆ ಸ್ಫೋಟವಾಗಿ 12 ಜನ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಕಠಿಣ ಕ್ರಮವಹಿಸುತ್ತೇವೆ ಎನ್ನುತ್ತಲೆ ಇದ್ದಾರೆ. ಇದುವರೆಗೂ ಕಠಿಣ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲರಾಗಿದ್ದಾರೆಂದು ವಾಟಾಳ್ ನಾಗರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿದ ವಾಟಾಳ್​ ನಾಗರಾಜ್​

ಐಜೂರು ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಾತನಾಡಿದ ವಾಟಾಳ್​, ಸಿಎಂ ಒಂದು ಕಡೆ ಕ್ರಮ ಕೈಗೊಳ್ಳುತ್ತೇವೆ ಅಂದ್ರೆ, ಮತ್ತೊಂದೆಡೆ ಸಂಬಂಧಿಸಿದ ಸಚಿವರು ಸಿಐಡಿಗೆ ವಹಿಸುತ್ತೇವೆ ಎನ್ನುತ್ತಾರೆ. ಆದರೆ ಮೃತ ಕುಟುಂಬಕ್ಕೆ ನ್ಯಾಯ ಕೊಡಿಸೋರು ಯಾರು ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಮೃತರಿಗೆ ರೇಟ್ ಫಿಕ್ಸ್ ಮಾಡಿದೆ. ಯಾರೇ ಸತ್ತರು 5 ಲಕ್ಷ ಪರಿಹಾರ ಕೊಡ್ತೇವೆಂದು ಹೇಳ್ತಾರೆ. ಹಾಗಾಗಿ ಇಂತಹ ಅಕ್ರಮಗಳಿಗೆ ತಡೆಯಿಲ್ಲದಂತೆ ಆಗಿದೆ. ಬಹುತೇಕ ರಾಜಕಾರಣಿಗಳು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಅವರದ್ದೇ ಭಾಗಿತ್ವ ಇದೆ. ಹಾಗಾಗಿ ಅಕ್ರಮ ಗಣಿಗಾರಿಕೆ ತಡೆಯಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದು ಹೇಳಿದರು.

ಅಕ್ರಮ‌ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಾಗಲೇ ಸರ್ಕಾರ ರಾಜೀನಾಮೆ ಕೊಡಬೇಕಾಗಿತ್ತು. ಈ ಕೂಡಲೇ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಗಳಿಗೆ ಅಧಿಕಾರಿಗಳು ದಾಳಿ ನಡೆಸಿ ಸೂಕ್ತ ಕ್ರಮ‌ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.