ETV Bharat / state

ಇದ್ರೀಷ್ ಪಾಷಾ ಪ್ರಕರಣ: ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ

author img

By

Published : Apr 10, 2023, 7:02 AM IST

Updated : Apr 10, 2023, 11:28 AM IST

ರಾಮನಗರದಲ್ಲಿ ನಡೆದ ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

idrish pasha
ಇದ್ರೀಷ್ ಪಾಷಾ ಕೊಲೆ ಪ್ರಕರಣ

ರಾಮನಗರ: ಕನಕಪುರ ತಾಲೂಕಿನ ಸಾತನೂರಿನ ಬಳಿ ನಡೆದ ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ಜೆ ಎಂ ಎಫ್​ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಭಾನುವಾರ ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲಾಯಿತು. ಬಳಿಕ, ಪೊಲೀಸರು ಆರೋಪಿಗಳನ್ನು ಕನಕಪುರ ಜೆ ಎಂ ಎಫ್​ ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಂತರ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದರು. ಈ ಹಿನ್ನೆಲೆ ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಏನಿದು ಪ್ರಕರಣ?: ಮಾರ್ಚ್​​ 31 ರಂದು ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ ಮತ್ತು ಅವರ ಟೀಂ ರಕ್ಷಣೆ ಮಾಡಿತ್ತು. ಆದರೆ, ಕ್ಯಾಂಟರ್ ವಾಹನದಲ್ಲಿದ್ದ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಜಾನುವಾರುಗಳನ್ನು ರಕ್ಷಿಸಿದ ಅನತಿ ದೂರದಲ್ಲಿಯೇ ಇದ್ರೀಷ್​ ಮೃತದೇಹ ಪತ್ತೆಯಾಗಿತ್ತು. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ ನಡೆಸಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿ ಸಾತನೂರು ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.

ಹುಬ್ಬಳ್ಳಿಯಲ್ಲಿ ಮಗುವಿನ ಕೊಲೆ ಮಾಡಿದ್ದವನ ಸೆರೆ: ಇದೇ ತಿಂಗಳ 2ನೇ ತಾರೀಖಿನಂದು ಎಂಟು ವರ್ಷದ ಬಾಲಕ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವಿನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಎಸ್ಕೇಪ್​ ಆಗಿದ್ದ ಆರೋಪಿಯನ್ನ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಾಲೆಗೆ ರಜೆ ಇದ್ದ ಕಾರಣ ಬಾಲಕ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಮನಿ ಕಾಲೋನಿಯ ಅಜ್ಜಿ ಮನೆಗೆಂದು ಬಂದಿದ್ದ. ರವಿ ಬಳ್ಳಾರಿ ಬಳಿ ಆ ಬಾಲಕ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಕೊಲೆ ಮಾಡಿ, ಮಿರ್ಚಿ ಗ್ರೌಂಡ್ ಕಂಟಿಯಲ್ಲಿ ಎಸೆದು ಹೋಗಿದ್ದ. ಬಳಿಕ ಬೆಂಡಿಗೇರಿ ಪೊಲೀಸರು ತನಿಖೆ ನಡೆಸಿ ಆರೋಪಿ ಬಂಧಿಸಿದ್ದರು.

ಇದನ್ನೂ ಓದಿ: ಅಟ್ಟಪಾಡಿ ಮಧು ಕೊಲೆ ಪ್ರಕರಣ: 13 ಅಪರಾಧಿಗಳಿಗೆ 7 ವರ್ಷ ಜೈಲು, ದಂಡ ವಿಧಿಸಿದ ವಿಶೇಷ ನ್ಯಾಯಾಲಯ

ಅಟ್ಟಪಾಡಿ ಮಧು ಕೊಲೆ ಪ್ರಕರಣ : ಇನ್ನು, ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿದ್ದ ಅಟ್ಟಪಾಡಿ ಮಧು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳನ್ನ ದೋಷಿಗಳೆಂದು ಏಪ್ರಿಲ್ 4 ರಂದು ಘೋಷಿಸಿದ್ದ ಮಣ್ಣಾರ್​ಕ್ಕಾಡ್​ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ನ್ಯಾಯಾಲಯ, ಏಪ್ರಿಲ್​ 5 ರಂದು 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು. ನ್ಯಾಯಾಧೀಶ ಕೆ ಎಂ ರತೀಶ್​​ ಕುಮಾರ್​ ತೀರ್ಪು ನೀಡಿದ್ದರು.

ರಾಮನಗರ: ಕನಕಪುರ ತಾಲೂಕಿನ ಸಾತನೂರಿನ ಬಳಿ ನಡೆದ ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ಜೆ ಎಂ ಎಫ್​ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಭಾನುವಾರ ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲಾಯಿತು. ಬಳಿಕ, ಪೊಲೀಸರು ಆರೋಪಿಗಳನ್ನು ಕನಕಪುರ ಜೆ ಎಂ ಎಫ್​ ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಂತರ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದರು. ಈ ಹಿನ್ನೆಲೆ ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಏನಿದು ಪ್ರಕರಣ?: ಮಾರ್ಚ್​​ 31 ರಂದು ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ ಮತ್ತು ಅವರ ಟೀಂ ರಕ್ಷಣೆ ಮಾಡಿತ್ತು. ಆದರೆ, ಕ್ಯಾಂಟರ್ ವಾಹನದಲ್ಲಿದ್ದ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಜಾನುವಾರುಗಳನ್ನು ರಕ್ಷಿಸಿದ ಅನತಿ ದೂರದಲ್ಲಿಯೇ ಇದ್ರೀಷ್​ ಮೃತದೇಹ ಪತ್ತೆಯಾಗಿತ್ತು. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ ನಡೆಸಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿ ಸಾತನೂರು ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.

ಹುಬ್ಬಳ್ಳಿಯಲ್ಲಿ ಮಗುವಿನ ಕೊಲೆ ಮಾಡಿದ್ದವನ ಸೆರೆ: ಇದೇ ತಿಂಗಳ 2ನೇ ತಾರೀಖಿನಂದು ಎಂಟು ವರ್ಷದ ಬಾಲಕ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವಿನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಎಸ್ಕೇಪ್​ ಆಗಿದ್ದ ಆರೋಪಿಯನ್ನ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಾಲೆಗೆ ರಜೆ ಇದ್ದ ಕಾರಣ ಬಾಲಕ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಮನಿ ಕಾಲೋನಿಯ ಅಜ್ಜಿ ಮನೆಗೆಂದು ಬಂದಿದ್ದ. ರವಿ ಬಳ್ಳಾರಿ ಬಳಿ ಆ ಬಾಲಕ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಕೊಲೆ ಮಾಡಿ, ಮಿರ್ಚಿ ಗ್ರೌಂಡ್ ಕಂಟಿಯಲ್ಲಿ ಎಸೆದು ಹೋಗಿದ್ದ. ಬಳಿಕ ಬೆಂಡಿಗೇರಿ ಪೊಲೀಸರು ತನಿಖೆ ನಡೆಸಿ ಆರೋಪಿ ಬಂಧಿಸಿದ್ದರು.

ಇದನ್ನೂ ಓದಿ: ಅಟ್ಟಪಾಡಿ ಮಧು ಕೊಲೆ ಪ್ರಕರಣ: 13 ಅಪರಾಧಿಗಳಿಗೆ 7 ವರ್ಷ ಜೈಲು, ದಂಡ ವಿಧಿಸಿದ ವಿಶೇಷ ನ್ಯಾಯಾಲಯ

ಅಟ್ಟಪಾಡಿ ಮಧು ಕೊಲೆ ಪ್ರಕರಣ : ಇನ್ನು, ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿದ್ದ ಅಟ್ಟಪಾಡಿ ಮಧು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳನ್ನ ದೋಷಿಗಳೆಂದು ಏಪ್ರಿಲ್ 4 ರಂದು ಘೋಷಿಸಿದ್ದ ಮಣ್ಣಾರ್​ಕ್ಕಾಡ್​ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಶೇಷ ನ್ಯಾಯಾಲಯ, ಏಪ್ರಿಲ್​ 5 ರಂದು 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು. ನ್ಯಾಯಾಧೀಶ ಕೆ ಎಂ ರತೀಶ್​​ ಕುಮಾರ್​ ತೀರ್ಪು ನೀಡಿದ್ದರು.

Last Updated : Apr 10, 2023, 11:28 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.