ETV Bharat / state

ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ ಲೌಕಿಕ ಜಗತ್ತಿಗೆ ಹಿಂತಿರುಗುತ್ತೇನೆ: ನಿತ್ಯಾನಂದ

author img

By

Published : May 12, 2022, 4:36 PM IST

ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದಾರೆ. ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬೆಲ್ಲ ವದಂತಿಗೆ ಕೈಲಾಸ ಪೀಠ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಹಾಕಲಾಗಿದೆ.

im-not-dead-still-alive-nithyananda-swamy-message-viral
ನಿತ್ಯಾನಂದ ಸ್ವಾಮೀಜಿ‌

ರಾಮನಗರ: ನಿತ್ಯಾನಂದ ಸ್ವಾಮೀಜಿ‌ ಮತ್ತೆ ಸುದ್ದಿಯಲ್ಲಿದ್ದಾರೆ. ಸ್ವಯಂಘೋಷಿತ ಕೈಲಾಸ ದೇಶದ ಸಂಸ್ಥಾಪಕ ಹಾಗೂ ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದಾರೆ. ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

im-not-dead-still-alive-nithyananda-swamy-message-viral
ನಿತ್ಯಾನಂದ ಕೈ ಬರಹ ಎನ್ನಲಾದ ಫೋಟೋ

ಈ ಬಗ್ಗೆ ನಿತ್ಯಾನಂದನ ಕೈಲಾಸ ಪೀಠದ್ದು ಎನ್ನಲಾದ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಹಾಕಲಾಗಿದೆ. ಅದರಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದ್ದು, ನಿತ್ಯಾನಂದ ಕೈ ಬರಹ ಎನ್ನಲಾದ ಫೋಟೋ ಕೂಡ ಇದೆ. ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ ಎಂದು ಬರೆಯಲಾಗಿದೆ‌.

im-not-dead-still-alive-nithyananda-swamy-message-viral
ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಿಕ್ರಿಯೆ

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಆದರೆ, ಅದೆಲ್ಲ ಸುಳ್ಳು. ಈಗಲೂ 20ಕ್ಕೂ ಹೆಚ್ಚು ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ, ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ಪೋಸ್ಟ್​ನಲ್ಲಿ ನಿತ್ಯಾನಂದ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ: ಅನುಮೋದನೆಗೆ ರಾಜ್ಯಪಾಲರಿಗೆ ರವಾನಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಮನಗರ: ನಿತ್ಯಾನಂದ ಸ್ವಾಮೀಜಿ‌ ಮತ್ತೆ ಸುದ್ದಿಯಲ್ಲಿದ್ದಾರೆ. ಸ್ವಯಂಘೋಷಿತ ಕೈಲಾಸ ದೇಶದ ಸಂಸ್ಥಾಪಕ ಹಾಗೂ ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದಾರೆ. ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

im-not-dead-still-alive-nithyananda-swamy-message-viral
ನಿತ್ಯಾನಂದ ಕೈ ಬರಹ ಎನ್ನಲಾದ ಫೋಟೋ

ಈ ಬಗ್ಗೆ ನಿತ್ಯಾನಂದನ ಕೈಲಾಸ ಪೀಠದ್ದು ಎನ್ನಲಾದ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಿಕ್ರಿಯಿಸಿ ಪೋಸ್ಟ್ ಹಾಕಲಾಗಿದೆ. ಅದರಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದ್ದು, ನಿತ್ಯಾನಂದ ಕೈ ಬರಹ ಎನ್ನಲಾದ ಫೋಟೋ ಕೂಡ ಇದೆ. ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ ಎಂದು ಬರೆಯಲಾಗಿದೆ‌.

im-not-dead-still-alive-nithyananda-swamy-message-viral
ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಿಕ್ರಿಯೆ

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಆದರೆ, ಅದೆಲ್ಲ ಸುಳ್ಳು. ಈಗಲೂ 20ಕ್ಕೂ ಹೆಚ್ಚು ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ, ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ಪೋಸ್ಟ್​ನಲ್ಲಿ ನಿತ್ಯಾನಂದ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆ: ಅನುಮೋದನೆಗೆ ರಾಜ್ಯಪಾಲರಿಗೆ ರವಾನಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.