ETV Bharat / state

ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ: ಡಿ.ಕೆ. ಶಿವಕುಮಾರ್

ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ ಎಂಬ ಖರ್ಗೆ ಮಾತಿಗೆ ಬೆಂಬಲಿಸಿ ನಮ್ಮದು ಸಾಮೂಹಿಕ ನಾಯಕತ್ವ. ನಾನು ಹಿಂದೆಯು ಹೇಳಿದ್ದೇನೆ. ಈಗಲು ಹೇಳುತ್ತಿದ್ದೇನೆ. ಮುಂದೆಯೂ ಹೇಳುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

author img

By

Published : Jul 23, 2022, 3:55 PM IST

Updated : Jul 23, 2022, 4:14 PM IST

d-k-shivakumar
ಡಿ.ಕೆ. ಶಿವಕುಮಾರ್

ರಾಮನಗರ : ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಭಾರಿ ಆ ಭಾರಿ ಅಂತಲ್ಲಾ. ನಮ್ಮದು ಯಾವಾಗಲೂ ಸಾಮೂಹಿಕ‌ ನಾಯಕತ್ವ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ ಎಂದು ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಹೇಳಿಗೆ ಡಿಕೆಶಿ ಧ್ವನಿಯಾಗಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ

ಅಧಿಕಾರಿಗಳು ಸಾರ್ವಜನಿಕರ ಕೆಲಸವನ್ನ ಸರಿಯಾಗಿ ಮಾಡುತ್ತಿಲ್ಲ. ಇದು ಕನಕಪುರಕ್ಕೂ ಹೊರತಾಗಿಲ್ಲ.‌ ಇದರಿಂದ ಕೆಡಿಪಿ ಸಭೆ ನಡೆಸಲಾಗುತ್ತಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ : ಕಾಂಗ್ರೆಸ್​ ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಡಿಕೆಶಿ ಖಡಕ್​ ಸಂದೇಶ

ರಾಮನಗರ : ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುವುದು. ಈ ಭಾರಿ ಆ ಭಾರಿ ಅಂತಲ್ಲಾ. ನಮ್ಮದು ಯಾವಾಗಲೂ ಸಾಮೂಹಿಕ‌ ನಾಯಕತ್ವ. ಮೊದಲು ಪಕ್ಷವನ್ನ ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲ ಎಂದು ರಾಜ್ಯಸಭೆ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಹೇಳಿಗೆ ಡಿಕೆಶಿ ಧ್ವನಿಯಾಗಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ

ಅಧಿಕಾರಿಗಳು ಸಾರ್ವಜನಿಕರ ಕೆಲಸವನ್ನ ಸರಿಯಾಗಿ ಮಾಡುತ್ತಿಲ್ಲ. ಇದು ಕನಕಪುರಕ್ಕೂ ಹೊರತಾಗಿಲ್ಲ.‌ ಇದರಿಂದ ಕೆಡಿಪಿ ಸಭೆ ನಡೆಸಲಾಗುತ್ತಿದೆ ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ : ಕಾಂಗ್ರೆಸ್​ ಅಧಿಕಾರಕ್ಕೆ ತರಲು ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಡಿಕೆಶಿ ಖಡಕ್​ ಸಂದೇಶ

Last Updated : Jul 23, 2022, 4:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.