ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಕೆಎಸ್ಆರ್​ಟಿಸಿ ಬಸ್​ - ರಾಮನಗರ ರಸ್ತೆ ಆಕ್ಸಿಡೆಂಟ್​

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್​ಟಿಸಿ ಬಸ್​ವೊಂದು ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದ ಘಟನೆ ನಡೆದಿದೆ.

ಕೆಎಸ್ಆರ್​ಟಿಸಿ ಬಸ್​  ,   KSRTC Bus
ಕೆಎಸ್ಆರ್​ಟಿಸಿ ಬಸ್​
author img

By

Published : Nov 26, 2021, 1:40 PM IST

ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಕೆಎಸ್ಆರ್​ಟಿಸಿ ಬಸ್​ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಬೊಮ್ಮನಾಯಕನಹಳ್ಳಿ ಗ್ರಾಮದಿಂದ ಚನ್ನಪಟ್ಟಣಕ್ಕೆ ಕೆಎಸ್ಆರ್​ಟಿಸಿ ಬಸ್​ ಬರುತ್ತಿದ್ದ ವೇಳೆ, ಬಸ್​ನ ಆಕ್ಸಲ್ ಕಟ್ ಆಗಿದೆ. ಬಸ್​ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ಜನರೇ ಎಚ್ಚರ: ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ!

ಸಾರಿಗೆ ಇಲಾಖೆ ಹಳೇ ಬಸ್​ಗಳನ್ನು ಬದಲಾಯಿಸಲು ವಿಫಲವಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಈ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಹಾಸ್ಯಾಸ್ಪದ ವಿಷಯ: ಸಿಎಂ ಬೊಮ್ಮಾಯಿ

ಚನ್ನಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಕೆಎಸ್ಆರ್​ಟಿಸಿ ಬಸ್​ ನುಗ್ಗಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಬೊಮ್ಮನಾಯಕನಹಳ್ಳಿ ಗ್ರಾಮದಿಂದ ಚನ್ನಪಟ್ಟಣಕ್ಕೆ ಕೆಎಸ್ಆರ್​ಟಿಸಿ ಬಸ್​ ಬರುತ್ತಿದ್ದ ವೇಳೆ, ಬಸ್​ನ ಆಕ್ಸಲ್ ಕಟ್ ಆಗಿದೆ. ಬಸ್​ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ: ಜನರೇ ಎಚ್ಚರ: ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ!

ಸಾರಿಗೆ ಇಲಾಖೆ ಹಳೇ ಬಸ್​ಗಳನ್ನು ಬದಲಾಯಿಸಲು ವಿಫಲವಾಗಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಈ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ರಾಜ್ಯಪಾಲರಿಗೆ ನೀಡಿರುವ ದೂರು ಹಾಸ್ಯಾಸ್ಪದ ವಿಷಯ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.