ETV Bharat / state

ಸಿದ್ದರಾಮಯ್ಯ ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಲಿ : ಸಚಿವ ಅಶ್ವತ್ಥ್ ನಾರಾಯಣ

author img

By

Published : May 31, 2022, 1:12 PM IST

ಆರ್​ಎಸ್​ಎಸ್​ ಸಂಘಟನೆ ವಿರುದ್ಧ ಟ್ವೀಟ್​ ಮೂಲಕ ಸಿದ್ದರಾಮಯ್ಯ ಮತ್ತೆ ಹರಿಹಾಯ್ದಿದ್ದಾರೆ. ಆರ್​ಎಸ್​ಎಸ್​ ನನ್ನ ಪ್ರಶ್ನೆಗೆ ಉತ್ತರಿಸಲಾಗದೆ ಬಿಜೆಪಿಯವರನ್ನು ಮುಂದೆ ಬಿಟ್ಟಿದೆ ಎಂದು ವ್ಯಂಗ್ಯದ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಸಚಿವ ಅಶ್ವತ್ಥ್‌ ನಾರಾಯಣ ಅವರು ಸಿದ್ದರಾಮಯ್ಯ ಅವರಿಗೆ ಟಾಂಗ್​ ನೀಡಿದ್ದಾರೆ..

Minister Ashwattha Narayana talked to press
ಸಚಿವ ಅಶ್ವತ್ಥ ನಾರಾಯಣ ಮಾಧ್ಯಮದೊಂದಿಗೆ ಮಾತನಾಡಿದರು.

ರಾಮನಗರ : ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಎಂಬ ಬಿರುದು ಪಡೆದವರು. ಸಿದ್ದರಾಮಯ್ಯ ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಲಿ ಎಂದು ಆಸ್​ಎಸ್​ಎಸ್​ ನಾಯಕರ ಬಗ್ಗೆ ಹೇಳಿಕೆ ಕೊಟ್ರೆ ಬಿಜೆಪಿ ನಾಯಕರು ಉತ್ತರ ನೀಡ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಯ ವಿರುದ್ದ ಸಚಿವ ಅಶ್ವತ್ಥ್ ನಾರಾಯಣ್ ವಾಗ್ಧಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಸಂಬದ್ದವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಓಲೈಕೆ ರಾಜಕೀಯ ಮಾಡ್ತಿದ್ದಾರೆ. ನಾನು ಆರ್​ಎಸ್​ಎಸ್​ನಿಂದ ಬಂದವನೇ, ಬಿಜಿಪಿ ಪಕ್ಷದಲ್ಲಿ ಇದ್ದೇನೆ.

ಆರ್​ಎಸ್​ಎಸ್​ನಲ್ಲಿ‌ ಎಲ್ಲಾ ಜಾತಿಯವರು ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರ 5 ವರ್ಷದ ಆಡಳಿತ ನೋಡಿದ್ದೇವೆ. ಅವರ ವಾಚ್, ಶೂ, ಕನ್ನಡಕದ ಬಗ್ಗೆ ಅಕೌಂಟೆಬಿಲಿಟಿ‌ ಇದ್ಯಾ..? 5 ವರ್ಷ ನಿದ್ದೆ ಮಾಡಿ ನಿದ್ದರಾಮಯ್ಯ ಆಗಿದ್ದಾರೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿರುವುದು..

ಇನ್ನು ಸಿದ್ದರಾಮಯ್ಯ ಆಡಳಿತದಲ್ಲಿ ಎಷ್ಟು ಅಕ್ರಮಗಳು ನಡೆದಿವೆ. ಮರಳು‌ ದಂಧೆ, ಅರ್ಕಾವತಿ ಬಡಾವಣೆ, ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಸೇರಿದಂತೆ ಎಲ್ಲಾ ಕಡೆ ಹಗರಣಗಳೇ ಇವೆ. ಕಡುಬಡತನದಿಂದ ಬಂದ ಅವರು ಪ್ರಾಮಾಣಿಕ, ದಕ್ಷತೆ ಬಿಟ್ಟು ಭ್ರಷ್ಟಾಚಾರದ ಕೂಪವನ್ನೇ ಮಾಡಿದ್ದಾರೆ.

ಸಿಎಂ ಆಗಿ ಅಧಿಕಾರ ಅನುಭವಿಸಿ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು. ಸಿದ್ದರಾಮಯ್ಯ ರಾಜಕೀಯ ರುಚಿ ನೋಡಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಬೇಕು ಎಂದು ಇದೇ ವೇಳೆ ಸಚಿವ ಅಶ್ವತ್ಥ್ ನಾರಾಯಣ ತಿಳಿಸಿದರು.

ಇದನ್ನೂ ಓದಿ: ನನ್ನ ಪ್ರಶ್ನೆಗೆ ಉತ್ತರಿಸಲಾಗದ ಆರ್​ಎಸ್​ಎಸ್​ ಬಿಜೆಪಿಗರನ್ನು ಛೂ ಬಿಟ್ಟಿದೆ: ಸಿದ್ದರಾಮಯ್ಯ

ರಾಮನಗರ : ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆರಾಮಯ್ಯ ಎಂಬ ಬಿರುದು ಪಡೆದವರು. ಸಿದ್ದರಾಮಯ್ಯ ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಲಿ ಎಂದು ಆಸ್​ಎಸ್​ಎಸ್​ ನಾಯಕರ ಬಗ್ಗೆ ಹೇಳಿಕೆ ಕೊಟ್ರೆ ಬಿಜೆಪಿ ನಾಯಕರು ಉತ್ತರ ನೀಡ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಯ ವಿರುದ್ದ ಸಚಿವ ಅಶ್ವತ್ಥ್ ನಾರಾಯಣ್ ವಾಗ್ಧಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಸಂಬದ್ದವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಓಲೈಕೆ ರಾಜಕೀಯ ಮಾಡ್ತಿದ್ದಾರೆ. ನಾನು ಆರ್​ಎಸ್​ಎಸ್​ನಿಂದ ಬಂದವನೇ, ಬಿಜಿಪಿ ಪಕ್ಷದಲ್ಲಿ ಇದ್ದೇನೆ.

ಆರ್​ಎಸ್​ಎಸ್​ನಲ್ಲಿ‌ ಎಲ್ಲಾ ಜಾತಿಯವರು ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರ 5 ವರ್ಷದ ಆಡಳಿತ ನೋಡಿದ್ದೇವೆ. ಅವರ ವಾಚ್, ಶೂ, ಕನ್ನಡಕದ ಬಗ್ಗೆ ಅಕೌಂಟೆಬಿಲಿಟಿ‌ ಇದ್ಯಾ..? 5 ವರ್ಷ ನಿದ್ದೆ ಮಾಡಿ ನಿದ್ದರಾಮಯ್ಯ ಆಗಿದ್ದಾರೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿರುವುದು..

ಇನ್ನು ಸಿದ್ದರಾಮಯ್ಯ ಆಡಳಿತದಲ್ಲಿ ಎಷ್ಟು ಅಕ್ರಮಗಳು ನಡೆದಿವೆ. ಮರಳು‌ ದಂಧೆ, ಅರ್ಕಾವತಿ ಬಡಾವಣೆ, ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಸೇರಿದಂತೆ ಎಲ್ಲಾ ಕಡೆ ಹಗರಣಗಳೇ ಇವೆ. ಕಡುಬಡತನದಿಂದ ಬಂದ ಅವರು ಪ್ರಾಮಾಣಿಕ, ದಕ್ಷತೆ ಬಿಟ್ಟು ಭ್ರಷ್ಟಾಚಾರದ ಕೂಪವನ್ನೇ ಮಾಡಿದ್ದಾರೆ.

ಸಿಎಂ ಆಗಿ ಅಧಿಕಾರ ಅನುಭವಿಸಿ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದರು. ಸಿದ್ದರಾಮಯ್ಯ ರಾಜಕೀಯ ರುಚಿ ನೋಡಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಬಿಟ್ಟು ಸನ್ಯಾಸತ್ವ ಸ್ವೀಕರಿಸಬೇಕು ಎಂದು ಇದೇ ವೇಳೆ ಸಚಿವ ಅಶ್ವತ್ಥ್ ನಾರಾಯಣ ತಿಳಿಸಿದರು.

ಇದನ್ನೂ ಓದಿ: ನನ್ನ ಪ್ರಶ್ನೆಗೆ ಉತ್ತರಿಸಲಾಗದ ಆರ್​ಎಸ್​ಎಸ್​ ಬಿಜೆಪಿಗರನ್ನು ಛೂ ಬಿಟ್ಟಿದೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.