ರಾಮನಗರ: ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಕಳೆದ 3 ದಿನಗಳ ಹಿಂದೆ ವೃದ್ಧನೊಬ್ಬನಿಗೆ ಕೊರೊನಾ ದೃಢವಾಗಿತ್ತು. ಇದೀಗ ಆತನ ಮಗನಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಕಂದಾಯ ಭವನದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿನ ಕುಂಬಾರ ಬೀದಿ ನಿವಾಸಿ 23 ವರ್ಷದ ಯುವಕನಿಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಎಂಜಿ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.