ETV Bharat / state

ಜನರು ಪ್ರಾದೇಶಿಕ ಪಕ್ಷಗಳ ಕಡೆ ಒಲವು ತೋರಿಸುತ್ತಿದ್ದಾರೆ : ಹೆಚ್​ ಡಿ ಕುಮಾರಸ್ವಾಮಿ - Former CMHD Kumaraswamy Tong to DK Brothers

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಚರ್ಚೆ ಮಾಡುವವರು ಇಲ್ಲದಂತಾಗಿದೆ. ಬಿಜೆಪಿಯ 25 ಸಂಸದರಿದ್ದರೂ ಕನ್ನಡಕ್ಕೆ ಧಕ್ಕೆ ಆಗುತ್ತಿದೆ. ಸುದೀರ್ಘ ಚರ್ಚೆ ಆಗಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಂದೊಡ್ಡಿದೆ ಎಂದು ಮಾಜಿ ಸಿಎಂ ಹೆಚ್​ಡಿಕೆ ಕಿಡಿಕಾರಿದ್ದಾರೆ..

h-d-kumaraswamy
ಹೆಚ್​ ಡಿ ಕುಮಾರಸ್ವಾಮಿ
author img

By

Published : Jun 25, 2021, 8:48 PM IST

Updated : Jun 25, 2021, 9:24 PM IST

ರಾಮನಗರ : ಇಡೀ ದೇಶದಲ್ಲಿ ಜನರು ಪ್ರಾದೇಶಿಕ ಪಕ್ಷಗಳ ಕಡೆ ಒಲವು ತೋರಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ - ಬಿಜೆಪಿಗೆ ಈಗ ಒಲವಿದೆ. ಇನ್ನುಳಿದ ಎಲ್ಲಾ ಕಡೆ ಈ ಎರಡೂ ಪಕ್ಷಗಳನ್ನ ತಿರಸ್ಕಾರ ಮಾಡಿದ್ದಾರೆ. 2023ರಲ್ಲಿ ಜನರು ಪ್ರಾದೇಶಿಕ ಪಕ್ಷಕ್ಕೆ ಒಲವು ತೋರಿಸುತ್ತಾರೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ

ಜಿಲ್ಲೆಯಲ್ಲಿ ಇಂದು ಚನ್ನಪಟ್ಟಣದ ಬೈರಪಟ್ಟಣ ಗ್ರಾಮದ ಬಳಿ ಇರುವ ಬೆಂಗಳೂರು ಡೈರಿಯ ಶಿಬಿರದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹೈಕಮಾಂಡ್ ನಮ್ಮ ರಾಜ್ಯವೇ ಆಗಬೇಕಂದ್ರೆ ಅದು ಪ್ರಾದೇಶಿಕ ಪಾರ್ಟಿಯಿಂದ ಮಾತ್ರ ಸಾಧ್ಯ. ಆಡಳಿತ ನಡೆಸೋದು ದೆಹಲಿಯ ಹೈಕಮಾಂಡ್‌ನಿಂದ ಅಲ್ಲ. ಕರ್ನಾಟಕದಿಂದಲೇ ಅಧಿಕಾರ ನಡೆಸಲಿ ಎಂಬ ನಿರ್ಧಾರ ಮಾಡ್ತಾರೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡ್ತೇವೆ ಎಂದರು.

ಇನ್ನು, ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ತೋರುವ ಧೋರಣೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು. ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಚರ್ಚೆ ಮಾಡುವವರು ಇಲ್ಲದಂತಾಗಿದೆ. ಬಿಜೆಪಿಯ 25 ಸಂಸದರಿದ್ದರೂ ಕನ್ನಡಕ್ಕೆ ಧಕ್ಕೆ ಆಗುತ್ತಿದೆ. ಸುದೀರ್ಘ ಚರ್ಚೆ ಆಗಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಂದೊಡ್ಡಿದೆ ಎಂದು ಕಿಡಿಕಾರಿದ್ದಾರೆ.

ಡಿ ಕೆ ಬ್ರದರ್ಸ್​ಗೆ ಮಾಜಿ‌ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟಾಂಗ್ : ಹಾರೋಹಳ್ಳಿ ತಾಲೂಕು ಅಸ್ತಿತ್ವಕ್ಕೆ ಬಾರದ ಹಿನ್ನೆಲೆ ನಾನು ಸಿಎಂ ಆಗಿದ್ದಾಗ ಹಾರೋಹಳ್ಳಿಯನ್ನ ನೂತನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದ್ದೆ. ಆದರೆ, ಕನಕಪುರದಲ್ಲಿ ನಡೆಯುವ ರಾಜಕೀಯವೇ ಬೇರೆ ಇದೆ. ರಾಮನಗರ-ಚನ್ನಪಟ್ಟಣದಲ್ಲಿ ನಡೆಯುವ ರಾಜಕೀಯ ಬೇರೆ ಇದೆ. ಕನಕಪುರದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ ರಾಜಕೀಯ ನಡೆಯುತ್ತೆ. ಅದಕ್ಕಾಗಿಯೇ ಅದೆಲ್ಲವೂ ಮುಕ್ತವಾಗಬೇಕು ಎಂದು ಹಾರೋಹಳ್ಳಿಯನ್ನ ನೂತನ ತಾಲೂಕು ಮಾಡಿದ್ದೆ.

ಆದರೆ, ಅದು ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ‌. ಈ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ನಡೆಸಿದ್ದೇನೆ. ತಡವಾಗಿದೆ, ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಕ್ಷೇತ್ರ ಮರುವಿಂಗಡಣೆಯಾದಾಗ ಹಾರೋಹಳ್ಳಿ-ಮರಳವಾಡಿ ಕನಕಪುರ ತಾಲೂಕಿಗೆ ಸೇರಿತು. ಆದರೆ, ಅಲ್ಲಿನ ಜನರು ರಾಮನಗರ ಕ್ಷೇತ್ರಕ್ಕೆ ಮತ ಹಾಕುತ್ತಾರೆ. ಆದಷ್ಟು ಬೇಗ ಆ ಸಮಸ್ಯೆ ಸಹ ಬಗೆಹರಿಯಲಿದೆ ಎಂದು ಇದೇ ವೇಳೆ ತಿಳಿಸಿದರು.

ಹೆಚ್​ ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ

ವಿಶೇಷ ಅಧಿವೇಶನ ಕರೆಯಲು ಹೆಚ್‌ಡಿಕೆ ಪತ್ರ : ಕೋವಿಡ್ ಸಂದರ್ಭದಲ್ಲಿ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ‌. ಈ ವಿಚಾರವಾಗಿ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ಕಾರ ಶಾಸಕರ ಅಭಿಪ್ರಾಯ ಕೇಳಬೇಕಿತ್ತು. ಸರ್ಕಾರದಿಂದ ಕೆಲ ಲೋಪದೋಷಗಳು ಆಗಿವೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕಿತ್ತು. ಆದರೆ, ಸರ್ಕಾರ ಈ ಬಗ್ಗೆ ಯಾವುದೇ ಕ್ರಮವಹಿಸಿಲ್ಲ. ರಾಜ್ಯದ ಆರೂವರೆ ಕೋಟಿ ಜನರು ತೆರಿಗೆ ಕಟ್ಟಿದ್ದಾರೆ. ಆ ತೆರಿಗೆ ಹಣದಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅದರಲ್ಲಿ ಆಗಿರುವ ಲೋಪದೋಷದ ಬಗ್ಗೆ ಚರ್ಚೆಯಾಗಬೇಕಿದೆ ಎಂದರು.

ಇದಲ್ಲದೆ ಪಕ್ಕದ ಮಹಾರಾಷ್ಟ್ರದಲ್ಲಿ ಎರಡು ದಿನ ಅಧಿವೇಶನ ಕರೆಯಲಾಗಿದೆ. ಆದರೆ, ಅಲ್ಲಿನ ಬಿಜೆಪಿ ಶಾಸಕರು ಎರಡು ದಿನ ಸಾಲಲ್ಲ ಎಂದಿದ್ದಾರೆ. ಇದು ರಾಷ್ಟ್ರೀಯ ಪಕ್ಷಗಳ ದ್ವಂದ್ವ ನಿಲುವುಗಳಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಓದಿ: ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ; ಡೆಲ್ಟಾ ಪ್ಲಸ್ ತಡೆಗೆ ಸರ್ಕಾರದ ಕ್ರಮ

ರಾಮನಗರ : ಇಡೀ ದೇಶದಲ್ಲಿ ಜನರು ಪ್ರಾದೇಶಿಕ ಪಕ್ಷಗಳ ಕಡೆ ಒಲವು ತೋರಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ - ಬಿಜೆಪಿಗೆ ಈಗ ಒಲವಿದೆ. ಇನ್ನುಳಿದ ಎಲ್ಲಾ ಕಡೆ ಈ ಎರಡೂ ಪಕ್ಷಗಳನ್ನ ತಿರಸ್ಕಾರ ಮಾಡಿದ್ದಾರೆ. 2023ರಲ್ಲಿ ಜನರು ಪ್ರಾದೇಶಿಕ ಪಕ್ಷಕ್ಕೆ ಒಲವು ತೋರಿಸುತ್ತಾರೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ

ಜಿಲ್ಲೆಯಲ್ಲಿ ಇಂದು ಚನ್ನಪಟ್ಟಣದ ಬೈರಪಟ್ಟಣ ಗ್ರಾಮದ ಬಳಿ ಇರುವ ಬೆಂಗಳೂರು ಡೈರಿಯ ಶಿಬಿರದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಹೈಕಮಾಂಡ್ ನಮ್ಮ ರಾಜ್ಯವೇ ಆಗಬೇಕಂದ್ರೆ ಅದು ಪ್ರಾದೇಶಿಕ ಪಾರ್ಟಿಯಿಂದ ಮಾತ್ರ ಸಾಧ್ಯ. ಆಡಳಿತ ನಡೆಸೋದು ದೆಹಲಿಯ ಹೈಕಮಾಂಡ್‌ನಿಂದ ಅಲ್ಲ. ಕರ್ನಾಟಕದಿಂದಲೇ ಅಧಿಕಾರ ನಡೆಸಲಿ ಎಂಬ ನಿರ್ಧಾರ ಮಾಡ್ತಾರೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡ್ತೇವೆ ಎಂದರು.

ಇನ್ನು, ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ತೋರುವ ಧೋರಣೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು. ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಚರ್ಚೆ ಮಾಡುವವರು ಇಲ್ಲದಂತಾಗಿದೆ. ಬಿಜೆಪಿಯ 25 ಸಂಸದರಿದ್ದರೂ ಕನ್ನಡಕ್ಕೆ ಧಕ್ಕೆ ಆಗುತ್ತಿದೆ. ಸುದೀರ್ಘ ಚರ್ಚೆ ಆಗಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಂದೊಡ್ಡಿದೆ ಎಂದು ಕಿಡಿಕಾರಿದ್ದಾರೆ.

ಡಿ ಕೆ ಬ್ರದರ್ಸ್​ಗೆ ಮಾಜಿ‌ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಟಾಂಗ್ : ಹಾರೋಹಳ್ಳಿ ತಾಲೂಕು ಅಸ್ತಿತ್ವಕ್ಕೆ ಬಾರದ ಹಿನ್ನೆಲೆ ನಾನು ಸಿಎಂ ಆಗಿದ್ದಾಗ ಹಾರೋಹಳ್ಳಿಯನ್ನ ನೂತನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದ್ದೆ. ಆದರೆ, ಕನಕಪುರದಲ್ಲಿ ನಡೆಯುವ ರಾಜಕೀಯವೇ ಬೇರೆ ಇದೆ. ರಾಮನಗರ-ಚನ್ನಪಟ್ಟಣದಲ್ಲಿ ನಡೆಯುವ ರಾಜಕೀಯ ಬೇರೆ ಇದೆ. ಕನಕಪುರದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ ರಾಜಕೀಯ ನಡೆಯುತ್ತೆ. ಅದಕ್ಕಾಗಿಯೇ ಅದೆಲ್ಲವೂ ಮುಕ್ತವಾಗಬೇಕು ಎಂದು ಹಾರೋಹಳ್ಳಿಯನ್ನ ನೂತನ ತಾಲೂಕು ಮಾಡಿದ್ದೆ.

ಆದರೆ, ಅದು ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ‌. ಈ ಬಗ್ಗೆ ಸರ್ಕಾರದ ಜೊತೆಗೆ ಚರ್ಚೆ ನಡೆಸಿದ್ದೇನೆ. ತಡವಾಗಿದೆ, ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಕ್ಷೇತ್ರ ಮರುವಿಂಗಡಣೆಯಾದಾಗ ಹಾರೋಹಳ್ಳಿ-ಮರಳವಾಡಿ ಕನಕಪುರ ತಾಲೂಕಿಗೆ ಸೇರಿತು. ಆದರೆ, ಅಲ್ಲಿನ ಜನರು ರಾಮನಗರ ಕ್ಷೇತ್ರಕ್ಕೆ ಮತ ಹಾಕುತ್ತಾರೆ. ಆದಷ್ಟು ಬೇಗ ಆ ಸಮಸ್ಯೆ ಸಹ ಬಗೆಹರಿಯಲಿದೆ ಎಂದು ಇದೇ ವೇಳೆ ತಿಳಿಸಿದರು.

ಹೆಚ್​ ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ

ವಿಶೇಷ ಅಧಿವೇಶನ ಕರೆಯಲು ಹೆಚ್‌ಡಿಕೆ ಪತ್ರ : ಕೋವಿಡ್ ಸಂದರ್ಭದಲ್ಲಿ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ‌. ಈ ವಿಚಾರವಾಗಿ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ಕಾರ ಶಾಸಕರ ಅಭಿಪ್ರಾಯ ಕೇಳಬೇಕಿತ್ತು. ಸರ್ಕಾರದಿಂದ ಕೆಲ ಲೋಪದೋಷಗಳು ಆಗಿವೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕಿತ್ತು. ಆದರೆ, ಸರ್ಕಾರ ಈ ಬಗ್ಗೆ ಯಾವುದೇ ಕ್ರಮವಹಿಸಿಲ್ಲ. ರಾಜ್ಯದ ಆರೂವರೆ ಕೋಟಿ ಜನರು ತೆರಿಗೆ ಕಟ್ಟಿದ್ದಾರೆ. ಆ ತೆರಿಗೆ ಹಣದಲ್ಲಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅದರಲ್ಲಿ ಆಗಿರುವ ಲೋಪದೋಷದ ಬಗ್ಗೆ ಚರ್ಚೆಯಾಗಬೇಕಿದೆ ಎಂದರು.

ಇದಲ್ಲದೆ ಪಕ್ಕದ ಮಹಾರಾಷ್ಟ್ರದಲ್ಲಿ ಎರಡು ದಿನ ಅಧಿವೇಶನ ಕರೆಯಲಾಗಿದೆ. ಆದರೆ, ಅಲ್ಲಿನ ಬಿಜೆಪಿ ಶಾಸಕರು ಎರಡು ದಿನ ಸಾಲಲ್ಲ ಎಂದಿದ್ದಾರೆ. ಇದು ರಾಷ್ಟ್ರೀಯ ಪಕ್ಷಗಳ ದ್ವಂದ್ವ ನಿಲುವುಗಳಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಓದಿ: ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ; ಡೆಲ್ಟಾ ಪ್ಲಸ್ ತಡೆಗೆ ಸರ್ಕಾರದ ಕ್ರಮ

Last Updated : Jun 25, 2021, 9:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.