ETV Bharat / state

ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಕನಕಪುರದಲ್ಲಿ ಪ್ರತಿಭಟನೆ - Protest in Kanakapura

ಕನಕಪುರದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ವಿವಿಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ. ಪ್ರಮುಖ ಹಿಂದೂ ಮುಖಂಡರು ಪ್ರತಿಭಟನಾ ಭಾಷಣ ಮಾಡಲಿದ್ದಾರೆ. ಮುಂಜಾಗೃತ ಕ್ರಮವಾಗಿ ಕನಕಪುರದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ.

Protest in Kanakapura against the construction of a statue of Jesus
ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್​ ಬಂದೋ ಬಸ್ತ್​​
author img

By

Published : Jan 13, 2020, 10:59 AM IST

ರಾಮನಗರ : ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಹಾಗೂ ಆರ್.ಎಸ್.ಎಸ್ ಕಾರ್ಯಕರ್ತರಿಂದ ಕನಕಪುರ ಚಲೋ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್​ ಬಂದೋ ಬಸ್ತ್​​

11 ಗಂಟೆಗೆ ಕನಕಪುರದ ಅಯ್ಯಪ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಮಾವಣೆಗೊಳ್ಳಲಿರುವ ಪ್ರತಿಭಟನಾಕಾರರು. 11.30ಕ್ಕೆ ‌ ಪ್ರತಿಭಟನಾ ರ‍್ಯಾಲಿ ಆರಂಭಿಸಿ ಮೆರವಣಿಗೆ ಮೂಲಕ ಟಿ.ಬಿ ಸರ್ಕಲ್ ಬಳಿಗೆ ಬರಲಿದ್ದಾರೆ. ಬಳಿಕ ಮುಖಂಡರಿಂದ ಪ್ರತಿಭಟನಾ ಭಾಷಣ ನಡೆಯಲಿದ್ದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಕನಕಪುರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ.

ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ , ಬಿಜೆಪಿ ಮಾಧ್ಯಮ ವಕ್ತಾರ ಅಶ್ವತ್ ನಾರಾಯಣ್ ಭಾಗಿಯಾಗಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಮನಗರ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದ್ದು, ಸುಮಾರು ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಕೋಲಾರ, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಪ್ರತಿಭಟನೆ ವೇಳೆ ಶಾಂತಿ ಭಂಗ ಮಾಡಿದರೆ ಅಥವಾ ಕಾನೂನು ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಮನಗರ ಎಸ್ಪಿ ಡಾ.ಅನೂಪ್​ ಎ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ರಾಮನಗರ : ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಹಾಗೂ ಆರ್.ಎಸ್.ಎಸ್ ಕಾರ್ಯಕರ್ತರಿಂದ ಕನಕಪುರ ಚಲೋ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್​ ಬಂದೋ ಬಸ್ತ್​​

11 ಗಂಟೆಗೆ ಕನಕಪುರದ ಅಯ್ಯಪ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಮಾವಣೆಗೊಳ್ಳಲಿರುವ ಪ್ರತಿಭಟನಾಕಾರರು. 11.30ಕ್ಕೆ ‌ ಪ್ರತಿಭಟನಾ ರ‍್ಯಾಲಿ ಆರಂಭಿಸಿ ಮೆರವಣಿಗೆ ಮೂಲಕ ಟಿ.ಬಿ ಸರ್ಕಲ್ ಬಳಿಗೆ ಬರಲಿದ್ದಾರೆ. ಬಳಿಕ ಮುಖಂಡರಿಂದ ಪ್ರತಿಭಟನಾ ಭಾಷಣ ನಡೆಯಲಿದ್ದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಕನಕಪುರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ.

ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ , ಬಿಜೆಪಿ ಮಾಧ್ಯಮ ವಕ್ತಾರ ಅಶ್ವತ್ ನಾರಾಯಣ್ ಭಾಗಿಯಾಗಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಮನಗರ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದ್ದು, ಸುಮಾರು ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಕೋಲಾರ, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಪ್ರತಿಭಟನೆ ವೇಳೆ ಶಾಂತಿ ಭಂಗ ಮಾಡಿದರೆ ಅಥವಾ ಕಾನೂನು ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಮನಗರ ಎಸ್ಪಿ ಡಾ.ಅನೂಪ್​ ಎ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

Intro:Body:ರಾಮನಗರ : ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಹಾಗೂ ಆರ್.ಎಸ್.ಎಸ್ ಕಾರ್ಯಕರ್ತರಿಂದ ಕನಕಪುರ ಚಲೋ ಹಮ್ಮಿಕೊಳ್ಳಲಾಗಿದ್ದು. 11 ಗಂಟೆಯಿಂದ ಕನಕಪುರದ ಅಯ್ಯಪ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಮಾವಣೆಗೊಳ್ಳಲಿರುವ ಪ್ರತಿಭಟನಾಕಾರರು.
11.30‌ ಪ್ರತಿಭಟನಾ ರ್ಯಾಲಿ ಆರಂಭಿಸಿ ಮೆರವಣಿಗೆ ಮೂಲಕ ಟಿ.ಬಿ ಸರ್ಕಲ್ ಬಳಿ ಜಮಾವಣೆ. ಬಳಿಕ ಪ್ರತಿಭಟನೆಯಲ್ಲಿ ಭಾಗಿಯಾಗುವ ಮುಖಂಡರ ಭಾಷಣ ನಡೆಸಲಿದ್ದಾರೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಪ್ರಮುಖವಾಗಿ ಭಾಗವಹಿಸಲಿದ್ದಾರೆ.
ಅಲ್ಲಿಂದ‌ ನೇರವಾಗಿ ತಾಹಶೀಲ್ದಾರ್ ಕಚೇರಿಗೆ ಹೋಗಿ ಕನಕಪುರ ತಾಹಶೀಲ್ದಾರ್ ಗೆ ಮನವಿ ಸಲ್ಲಿಸಲಿದ್ದಾರೆ.
ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳಲಿರುವ ನಿರೀಕ್ಷೆಯಿದ್ದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ , ಮಾಧ್ಯಮ ವಕ್ತಾರ ಅಶ್ವತ್ ನಾರಾಯಣ್ ಭಾಗಿಯಾಗಲಿದ್ದಾರರ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಮನಗರ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದ್ದು ಅದಕ್ಕಾಗಿ ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಕೋಲಾರ, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದಲೂ ಕರೆಸಿ ನಿಯೋಜಿಸಲಾಗಿದೆ.
ಶಾಂತಿ ಭಂಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮದ ಎಚ್ಚರಿಕೆ‌ ನೀಡಿರುವ ರಾಮನಗರ ಎಸ್ಪಿ ಡಾ.ಅನೂಪ್ ಎ ಶೆಟ್ಟಿ ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಇಲ್ಲಿ ಶಾಂತಿಯುತ ಪ್ರತಿಭಟನೆಗಷ್ಟೇ ಅವಕಾಶ ಎಂದಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.