ರಾಮನಗರ: ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಹಿಂಗಾರು ಮಳೆಯಾಗಿದ್ದು, ಈ ಭಾಗದ ರೈತರು ಹರ್ಷಗೊಂಡಿದ್ದಾರೆ. ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿರುವ ಹಿನ್ನೆಲೆ ಪ್ರಮುಖವಾಗಿ ರಾಗಿ, ಭತ್ತದ ಬೆಳೆಗಳಲ್ಲಿ ಉತ್ತಮ ಫಸಲನ್ನು ನಿರೀಕ್ಷಿಸಲಾಗಿದೆ.
ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ತಿಂಗಳಿಂದ ಉತ್ತಮ ಮಳೆಯಾಗಿದ್ದು, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಕ್ಷೇತ್ರದಲ್ಲಿ ಸಾಕಷ್ಟು ಮಳೆಯಾಗಿದೆ. ಆಗಸ್ಟ್ನಿಂದ ಅಕ್ಟೋಬರ್ವರೆಗೆ 447 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇಲ್ಲಿಯವೆರೆಗೆ 450 ಮಿ.ಮೀ. ಮಳೆಯಾಗುವ ಮೂಲಕ ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಮಾಡುವುದಕ್ಕೆ ಅನುಕೂಲವಾಗಿದೆ. ಈ ಬಗ್ಗೆ ಮಾತನಾಡಿರುವ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಜುಲೈ ತಿಂಗಳಲ್ಲಿ ಮಳೆಯ ಕೊರತೆ ಎದುರಾಗಿತ್ತು. ಆದರೆ ನಂತರದ ದಿನಗಳಲ್ಲಿ ಎಲ್ಲವೂ ಸರಿ ಹೋಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಮಳೆಯಾಗಿರುವ ಸರಾಸರಿ:
ರಾಮನಗರ - 82%
ಚನ್ನಪಟ್ಟಣ - 78%
ಕನಕಪುರ - 75%
ಮಾಗಡಿ - 86%
ರಾಮನಗರ ಜಿಲ್ಲೆಯಲ್ಲಿ ರಾಗಿ ಮತ್ತು ಭತ್ತದ ಬಿತ್ತನೆ ಪ್ರಮಾಣ:
ಒಟ್ಟು - 1.14 ಲಕ್ಷ ಹೆಕ್ಟೇರ್ ರಾಗಿ ಬಿತ್ತನೆ ಗುರಿ ಇತ್ತು, ಸದ್ಯಕ್ಕೆ 90.771 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ
ಅಂದರೆ ಜಿಲ್ಲೆಯಲ್ಲಿ ಒಟ್ಟು ಶೇ. 80ರಷ್ಟು ರಾಗಿ ಬಿತ್ತನೆ ಕಾರ್ಯ ನಡೆದಿದೆ.
ಭತ್ತ ಒಟ್ಟು - 5.600 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಬೇಕಿತ್ತು. ಈವರೆಗೆ ಭತ್ತ - 4.251 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ.