ETV Bharat / state

ಬಿಡದಿ ಈಗಲ್ ಟನ್ ರೆಸಾರ್ಟ್​ ವಿಲ್ಲಾ ಮಾಲೀಕರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

author img

By

Published : Feb 9, 2022, 8:21 PM IST

Updated : Feb 9, 2022, 9:57 PM IST

ಬಿಡದಿಯ ಈಗಲ್ ರೆಸಾರ್ಟ್​ನ ಸಿ ಬ್ಲಾಕ್​​ನಲ್ಲಿ ನಡೆದ ಜೋಡಿ ಕೊಲೆ ಪ್ರಕರಣ ಸಂಬಂಧ 24 ಗಂಟೆಯೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Ramanagara Police arrested two accused bidadi resort double murder case
ಬಿಡದಿ ಈಗಲ್ ಟನ್ ರೆಸಾರ್ಟ್​ ಡಬ್ಬಲ್​ ಮರ್ಡರ್​​ ಕೇಸ್​ ಆರೋಪಿಗಳ ಬಂಧನ

ರಾಮನಗರ: ಬಿಡದಿ ಬಳಿಯ ಖಾಸಗಿ ಈಗಲ್ ಟನ್ ರೆಸಾರ್ಟ್​ನಲ್ಲಿನ ವಿಲ್ಲಾದಲ್ಲಿ ನಡೆದ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಮಾಹಿತಿ ನೀಡಿದ ಎಸ್ಪಿ

ಜೋಗೇಂದ್ರ ಯಾದವ್ ಹಾಗೂ ರವೀಂದ್ರ ಯಾದವ್ ಬಂಧಿತ ಆರೋಪಿಗಳಾಗಿದ್ದು, ಬಿಡದಿಯ ಕೇತಿಗಾನಹಳ್ಳಿ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 47 ಸಾವಿರ ನಗದು ಪತ್ತೆಯಾಗಿದ್ದು, ಮತ್ತೊಬ್ಬ ಆರೋಪಿಯನ್ನು ಹಿಡಿಯಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಪಿ ಮೃತ ಆಶಾ ಹಾಗೂ ರಘು ರಾಜನ್ ಮನೆಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಜಿಲ್ಲೆ ಬಿಡದಿಯ ಈಗಲ್ ಟನ್ ರೆಸಾರ್ಟ್​​ನ ಖಾಸಗಿ ವಿಲ್ಲಾದಲ್ಲಿ‍ ದಂಪತಿಯ ಬರ್ಬರ ಹತ್ಯೆ ನಡೆದಿತ್ತು. ಗಂಡ - ಹೆಂಡತಿಯನ್ನು ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಸುತ್ತಿಗೆಯಲ್ಲಿ ಹೊಡೆದು ಕೊಲೆ ಮಾಡಲಾಗಿತ್ತು. ಆಶಾ (63), ರಘುರಾಜ್ (70) ಕೊಲೆಯಾದ ಮೃತ ದಂಪತಿಗಳಾಗಿದ್ದು, ರಘುರಾಜ್ ಮಾಜಿ ಏರ್ ಫೋರ್ಸ್ ಪೈಲಟ್‌ ಆಗಿದ್ದರು.

ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ವೃದ್ಧ ದಂಪತಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಡದಿಯ ಈಗಲ್ ಟನ್ ರೆಸಾರ್ಟ್​ನಲ್ಲಿನ ವಿಲ್ಲಾ ಮಾಲೀಕರ ಹತ್ಯೆ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಸ್ಥಳೀಯರು

ರಾಮನಗರ: ಬಿಡದಿ ಬಳಿಯ ಖಾಸಗಿ ಈಗಲ್ ಟನ್ ರೆಸಾರ್ಟ್​ನಲ್ಲಿನ ವಿಲ್ಲಾದಲ್ಲಿ ನಡೆದ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಮಾಹಿತಿ ನೀಡಿದ ಎಸ್ಪಿ

ಜೋಗೇಂದ್ರ ಯಾದವ್ ಹಾಗೂ ರವೀಂದ್ರ ಯಾದವ್ ಬಂಧಿತ ಆರೋಪಿಗಳಾಗಿದ್ದು, ಬಿಡದಿಯ ಕೇತಿಗಾನಹಳ್ಳಿ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 47 ಸಾವಿರ ನಗದು ಪತ್ತೆಯಾಗಿದ್ದು, ಮತ್ತೊಬ್ಬ ಆರೋಪಿಯನ್ನು ಹಿಡಿಯಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆರೋಪಿ ಮೃತ ಆಶಾ ಹಾಗೂ ರಘು ರಾಜನ್ ಮನೆಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಜಿಲ್ಲೆ ಬಿಡದಿಯ ಈಗಲ್ ಟನ್ ರೆಸಾರ್ಟ್​​ನ ಖಾಸಗಿ ವಿಲ್ಲಾದಲ್ಲಿ‍ ದಂಪತಿಯ ಬರ್ಬರ ಹತ್ಯೆ ನಡೆದಿತ್ತು. ಗಂಡ - ಹೆಂಡತಿಯನ್ನು ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಸುತ್ತಿಗೆಯಲ್ಲಿ ಹೊಡೆದು ಕೊಲೆ ಮಾಡಲಾಗಿತ್ತು. ಆಶಾ (63), ರಘುರಾಜ್ (70) ಕೊಲೆಯಾದ ಮೃತ ದಂಪತಿಗಳಾಗಿದ್ದು, ರಘುರಾಜ್ ಮಾಜಿ ಏರ್ ಫೋರ್ಸ್ ಪೈಲಟ್‌ ಆಗಿದ್ದರು.

ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ವೃದ್ಧ ದಂಪತಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಡದಿಯ ಈಗಲ್ ಟನ್ ರೆಸಾರ್ಟ್​ನಲ್ಲಿನ ವಿಲ್ಲಾ ಮಾಲೀಕರ ಹತ್ಯೆ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಸ್ಥಳೀಯರು

Last Updated : Feb 9, 2022, 9:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.