ETV Bharat / state

ಕಳ್ಳಕಾಕರ ರಕ್ಷಣೆಗೆ ಸರ್ಕಾರ ಮುಂದಾಗಿದೆ: ಹೆಚ್ ಡಿ ಕುಮಾರಸ್ವಾಮಿ ಟೀಕೆ

author img

By ETV Bharat Karnataka Team

Published : Nov 25, 2023, 10:52 AM IST

HDK on siddaramaiah govt: ಸಿದ್ದರಾಮಯ್ಯ ವಕೀಲರಾಗಿ, ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದ್ರೂ ಅವರ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

H.D. Kumaraswamy
ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ''ಕಳ್ಳಕಾಕರ ರಕ್ಷಣೆಗೆ ಈ ಸರ್ಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್​ನಲ್ಲಿ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ'' ಎಂದು ಪ್ರಶ್ನಿಸಿದರು.

''ಇಂಥ ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಸರ್ಕಾರ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ತಪ್ಪು. ಇವರು ಕಾನೂನನ್ನು ಧಿಕ್ಕರಿಸಿದ್ದಾರೆ. ಕಾನೂನಿಗಿಂತ ದೊಡ್ಡವರು ಎಂಬುದನ್ನು ಅವರು ಪ್ರದರ್ಶನ ಮಾಡಿಕೊಂಡಿದ್ದಾರೆ. ಬಡವರಿಗೆ ರಕ್ಷಣೆ ಇಲ್ಲ. ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರ ಪರವಾಗಿ ಸರ್ಕಾರ ಇದೆ ಎಂಬುದನ್ನು ನಿರೂಪಿಸಿದ್ದಾರೆ'' ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದರು.

ಸಂಪುಟ ಸಭೆಯಿಂದ ಹೊರಗುಳಿದ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಹೆಚ್​ಡಿಕೆ, ''ಡಿಸಿಎಂ ಎಂತಹ ದೊಡ್ಡತನ ತೋರಿಸಿದ್ದಾರೆ ಅಂದರೆ, ತಮ್ಮ ಕೇಸ್​ನ ವಿಚಾರ ಕ್ಯಾಬಿನೆಟ್​ನಲ್ಲಿ ಚರ್ಚೆ ಆಗುತ್ತದೆ ಎಂದು ಕ್ಯಾಬಿನೆಟ್ ಸಭೆಯಿಂದ ಹೊರಗೆ ಉಳಿದಿದ್ದರು. ಅವರು ಸಂಪುಟ ಸಭೆಗೂ ಹೋಗಿಲ್ಲ. ಅವರ ಸಹಕಾರಕ್ಕೆ ಅಭಿನಂದಿಸಲೇಬೇಕು'' ಎಂದು ಟಾಂಗ್ ನೀಡಿದರು. ''ಡಿಸಿಎಂ ಅವರು ಕಳೆದ 3 ದಿನಗಳ ಹಿಂದೆ ಹಿರಿಯ ವಕೀಲರ ಸಭೆ ಕರೆದು, ಈ ಕೇಸ್​ನಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಎಂದು ಚರ್ಚೆ ಮಾಡಿದ್ದಾರೆ. ಮೊನ್ನೆಯೇ ಈ ವಿಚಾರ ನನ್ನ ಗಮನಕ್ಕೆ ಬಂತು. ಸಂಪುಟ ಸಭೆಯ ತೀರ್ಮಾನ, ಈ ನಡವಳಿಕೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ವಿಚಾರವನ್ನು ಮುಂದಿನ ಸದನದಲ್ಲಿ ಚರ್ಚೆ ಮಾಡೋಣ ಎಂದರು.

ರಾಜ್ಯ ಸರ್ಕಾರದ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಅವರು, ''ಇಲ್ಲಿ ಒತ್ತಡದ ಪ್ರಶ್ನೆ ಅಲ್ಲ, ಸರ್ಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವುದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರ್ಕಾರಕ್ಕೆ ಛೀಮಾರಿ ಹಾಕಿದಂತೆ ಇದೆ. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗುವುದಿಲ್ಲ. ಅಕ್ರಮ ಆಸ್ತಿ ಕೇಸ್​ನ್ನು ಸಿಬಿಐನಿಂದ ವಾಪಸ್ ಪಡೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಹಿಂದಿನ ಸರ್ಕಾರವು ಸಿಬಿಐಗೆ ವಹಿಸಲು ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೆ, ಇವರು ಸ್ಪೀಕರ್ ಅವರಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಮಾತ್ರ. ತನಿಖೆ ಮುಂದುವರಿಸಿ ಎಂದು ಈಗಾಗಲೇ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದರೂ ಸಿಬಿಐನಿಂದ ಕೇಸ್ ವಾಪಸ್ ಪಡೆಯಲು ಆಗುತ್ತಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದರು.

''ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿದ್ದಾಗ, ಲೋಕಾಯುಕ್ತ ರದ್ದು ಮಾಡಿ, ಎಸಿಬಿ ರಚನೆ ಮಾಡಿ ಎಲ್ಲಾ ಅಕ್ರಮಗಳನ್ನು ಮುಚ್ಚಿ ಹಾಕಿದರು. ಇಂಥ ಕೆಲಸದಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆ ಇಡಲು ಹೊರಟಿದ್ದಾರೆ'' ಎಂದು ಕಿಡಿಕಾರಿದರು.

ಜಾತಿಗಣತಿ ಕುರಿತು ಹೆಚ್​ಡಿಕೆ ತರಾಟೆ: ''ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಜಾತಿ ಗಣತಿ ವರದಿಯನ್ನು ಸರ್ಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಈ ಸರ್ಕಾರರದ ಕೈಯಲ್ಲಿ ಏನೂ ಆಗಲ್ಲ'' ಎಂದರು.

''ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳಿದ್ದರು. ನಿಮ್ಮ ಸರ್ಕಾರ ಬಂದು 6 ತಿಂಗಳಾಗಿದೆ. ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ'' ಎಂದು ನೇರವಾಗಿ ಸಿದ್ದರಾಮಯ್ಯ ವಿರುದ್ಧ ಗರಂ ಆದರು.

ಇದನ್ನೂ ಓದಿ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ''ಕಳ್ಳಕಾಕರ ರಕ್ಷಣೆಗೆ ಈ ಸರ್ಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್​ನಲ್ಲಿ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ'' ಎಂದು ಪ್ರಶ್ನಿಸಿದರು.

''ಇಂಥ ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಸರ್ಕಾರ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ತಪ್ಪು. ಇವರು ಕಾನೂನನ್ನು ಧಿಕ್ಕರಿಸಿದ್ದಾರೆ. ಕಾನೂನಿಗಿಂತ ದೊಡ್ಡವರು ಎಂಬುದನ್ನು ಅವರು ಪ್ರದರ್ಶನ ಮಾಡಿಕೊಂಡಿದ್ದಾರೆ. ಬಡವರಿಗೆ ರಕ್ಷಣೆ ಇಲ್ಲ. ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರ ಪರವಾಗಿ ಸರ್ಕಾರ ಇದೆ ಎಂಬುದನ್ನು ನಿರೂಪಿಸಿದ್ದಾರೆ'' ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದರು.

ಸಂಪುಟ ಸಭೆಯಿಂದ ಹೊರಗುಳಿದ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಹೆಚ್​ಡಿಕೆ, ''ಡಿಸಿಎಂ ಎಂತಹ ದೊಡ್ಡತನ ತೋರಿಸಿದ್ದಾರೆ ಅಂದರೆ, ತಮ್ಮ ಕೇಸ್​ನ ವಿಚಾರ ಕ್ಯಾಬಿನೆಟ್​ನಲ್ಲಿ ಚರ್ಚೆ ಆಗುತ್ತದೆ ಎಂದು ಕ್ಯಾಬಿನೆಟ್ ಸಭೆಯಿಂದ ಹೊರಗೆ ಉಳಿದಿದ್ದರು. ಅವರು ಸಂಪುಟ ಸಭೆಗೂ ಹೋಗಿಲ್ಲ. ಅವರ ಸಹಕಾರಕ್ಕೆ ಅಭಿನಂದಿಸಲೇಬೇಕು'' ಎಂದು ಟಾಂಗ್ ನೀಡಿದರು. ''ಡಿಸಿಎಂ ಅವರು ಕಳೆದ 3 ದಿನಗಳ ಹಿಂದೆ ಹಿರಿಯ ವಕೀಲರ ಸಭೆ ಕರೆದು, ಈ ಕೇಸ್​ನಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಎಂದು ಚರ್ಚೆ ಮಾಡಿದ್ದಾರೆ. ಮೊನ್ನೆಯೇ ಈ ವಿಚಾರ ನನ್ನ ಗಮನಕ್ಕೆ ಬಂತು. ಸಂಪುಟ ಸಭೆಯ ತೀರ್ಮಾನ, ಈ ನಡವಳಿಕೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ವಿಚಾರವನ್ನು ಮುಂದಿನ ಸದನದಲ್ಲಿ ಚರ್ಚೆ ಮಾಡೋಣ ಎಂದರು.

ರಾಜ್ಯ ಸರ್ಕಾರದ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಅವರು, ''ಇಲ್ಲಿ ಒತ್ತಡದ ಪ್ರಶ್ನೆ ಅಲ್ಲ, ಸರ್ಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವುದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರ್ಕಾರಕ್ಕೆ ಛೀಮಾರಿ ಹಾಕಿದಂತೆ ಇದೆ. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗುವುದಿಲ್ಲ. ಅಕ್ರಮ ಆಸ್ತಿ ಕೇಸ್​ನ್ನು ಸಿಬಿಐನಿಂದ ವಾಪಸ್ ಪಡೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಹಿಂದಿನ ಸರ್ಕಾರವು ಸಿಬಿಐಗೆ ವಹಿಸಲು ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೆ, ಇವರು ಸ್ಪೀಕರ್ ಅವರಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಮಾತ್ರ. ತನಿಖೆ ಮುಂದುವರಿಸಿ ಎಂದು ಈಗಾಗಲೇ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದರೂ ಸಿಬಿಐನಿಂದ ಕೇಸ್ ವಾಪಸ್ ಪಡೆಯಲು ಆಗುತ್ತಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದರು.

''ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿದ್ದಾಗ, ಲೋಕಾಯುಕ್ತ ರದ್ದು ಮಾಡಿ, ಎಸಿಬಿ ರಚನೆ ಮಾಡಿ ಎಲ್ಲಾ ಅಕ್ರಮಗಳನ್ನು ಮುಚ್ಚಿ ಹಾಕಿದರು. ಇಂಥ ಕೆಲಸದಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆ ಇಡಲು ಹೊರಟಿದ್ದಾರೆ'' ಎಂದು ಕಿಡಿಕಾರಿದರು.

ಜಾತಿಗಣತಿ ಕುರಿತು ಹೆಚ್​ಡಿಕೆ ತರಾಟೆ: ''ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಜಾತಿ ಗಣತಿ ವರದಿಯನ್ನು ಸರ್ಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಈ ಸರ್ಕಾರರದ ಕೈಯಲ್ಲಿ ಏನೂ ಆಗಲ್ಲ'' ಎಂದರು.

''ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳಿದ್ದರು. ನಿಮ್ಮ ಸರ್ಕಾರ ಬಂದು 6 ತಿಂಗಳಾಗಿದೆ. ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ'' ಎಂದು ನೇರವಾಗಿ ಸಿದ್ದರಾಮಯ್ಯ ವಿರುದ್ಧ ಗರಂ ಆದರು.

ಇದನ್ನೂ ಓದಿ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.