ETV Bharat / state

ಉಪ್ಪು ತಿಂದೋರು ನೀರು ಕುಡಿಯಲೇಬೇಕು: ವಾರ್ಡನ್​ಗೆ ಸಚಿವ ಸುರೇಶ್ ಕುಮಾರ್​​ ಎಚ್ಚರಿಕೆ

author img

By

Published : Aug 29, 2019, 3:17 PM IST

ರಾಮನಗರ ತಾಲೂಕಿನ ಕೈಲಾಂಚ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ ಆರ್ ಅಂಬೇಡ್ಕರ್ ಹಾಸ್ಟೆಲ್​ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಸುರೇಶ್ ಕುಮಾರ್

ರಾಮನಗರ: ಡಾ. ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹಾಸ್ಟೆಲ್​ನಲ್ಲಿ 50ಕ್ಕೂ ಹೆಚ್ಚು ಮಕ್ಕಳು ಕಜ್ಜಿ, ತುರಿಕೆ ಮೊದಲಾದ ಚರ್ಮರೋಗಗಳಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಈಟಿವಿ ಭಾರತ್ ಸಮಗ್ರ ಸುದ್ದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಸ್ಟೆಲ್​ಗೆ ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಡಾ. ಬಿ ಆರ್ ಅಂಬೇಡ್ಕರ್ ಹಾಸ್ಟೆಲ್​ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ತಾಲೂಕಿನ ಕೈಲಾಂಚ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿಆರ್ ಅಂಬೇಡ್ಕರ್ ಹಾಸ್ಟೆಲ್​ನಲ್ಲಿನ ಮಕ್ಕಳು ಚರ್ಮ ತುರಿಕೆ,ಕಜ್ಜಿ ಸಮಸ್ಯೆಯಿಂದ ಹೈರಾಣಾಗಿದ್ದರು. ಇದಕ್ಕೆ ಹಾಸ್ಟೆಲ್ ಅವ್ಯವಸ್ಥೆಯೇ ಕಾರಣವಾಗಿತ್ತು.‌ ಸ್ನಾನ ಹಾಗೂ‌ ಕುಡಿಯುವ ನೀರಿನ ಸಮಸ್ಯೆ ಅತಿಯಾಗಿತ್ತು. ಅದರಲ್ಲೂ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದ್ದರ ಬಗ್ಗೆ ಈಟಿವಿ ಭಾರತ್ ಸುದ್ದಿ ಪ್ರಕಟಿಸಿತ್ತು. ಇದೀಗ ಸ್ಥಳಕ್ಕೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎನ್ನುವ ಮೂಲಕ ವಾರ್ಡನ್​ಗೆ ತಲೆದಂಡದ ಮುನ್ಸೂಚನೆ‌ ನೀಡಿದ್ದಾರೆ.

ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸೇರಿ 138 ಮಕ್ಕಳಿದ್ದಾರೆ. ಸ್ವಚ್ಛತೆ ಕೊರತೆಯಿಂದ ಸಾಮೂಹಿಕವಾಗಿ ವಿದ್ಯಾರ್ಥಿಗಳಿಗೆ ಚರ್ಮ ರೋಗ ಉಲ್ಬಣಿಸಿದೆ. ಸರ್ಕಾರಿ ಹಾಸ್ಟೆಲ್​ನಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸರ್ಕಾರ ವಸತಿ ಶಾಲೆಗಳಿಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತದೆ. ಅಲ್ಲದೆ ಪೋಷಕರು ಸರ್ಕಾರದ ಮೇಲೆ ನಂಬಿಕೆ ಇಟ್ಟು ಮಕ್ಕಳನ್ನ ವಸತಿ ಶಾಲೆಗಳಿಗೆ ಸೇರಿಸುತ್ತಾರೆ. ಆದರೂ ಇಂತಹ ಘಟನೆಗಳಿಂದ ಸಮಸ್ಯೆ ಎದುರಾಗಿದೆ, ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದು ನಂತರ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತವೆಂದು ಸಚಿವ ಸುರೇಶ್​ ಕುಮಾರ್​ ಎಚ್ಚರಿಸಿದ್ದಾರೆ.

ರಾಮನಗರ: ಡಾ. ಬಿ.ಆರ್‌. ಅಂಬೇಡ್ಕರ್‌ ವಸತಿ ಶಾಲೆಯ ಹಾಸ್ಟೆಲ್​ನಲ್ಲಿ 50ಕ್ಕೂ ಹೆಚ್ಚು ಮಕ್ಕಳು ಕಜ್ಜಿ, ತುರಿಕೆ ಮೊದಲಾದ ಚರ್ಮರೋಗಗಳಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಈಟಿವಿ ಭಾರತ್ ಸಮಗ್ರ ಸುದ್ದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಸ್ಟೆಲ್​ಗೆ ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಡಾ. ಬಿ ಆರ್ ಅಂಬೇಡ್ಕರ್ ಹಾಸ್ಟೆಲ್​ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ತಾಲೂಕಿನ ಕೈಲಾಂಚ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿಆರ್ ಅಂಬೇಡ್ಕರ್ ಹಾಸ್ಟೆಲ್​ನಲ್ಲಿನ ಮಕ್ಕಳು ಚರ್ಮ ತುರಿಕೆ,ಕಜ್ಜಿ ಸಮಸ್ಯೆಯಿಂದ ಹೈರಾಣಾಗಿದ್ದರು. ಇದಕ್ಕೆ ಹಾಸ್ಟೆಲ್ ಅವ್ಯವಸ್ಥೆಯೇ ಕಾರಣವಾಗಿತ್ತು.‌ ಸ್ನಾನ ಹಾಗೂ‌ ಕುಡಿಯುವ ನೀರಿನ ಸಮಸ್ಯೆ ಅತಿಯಾಗಿತ್ತು. ಅದರಲ್ಲೂ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದ್ದರ ಬಗ್ಗೆ ಈಟಿವಿ ಭಾರತ್ ಸುದ್ದಿ ಪ್ರಕಟಿಸಿತ್ತು. ಇದೀಗ ಸ್ಥಳಕ್ಕೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎನ್ನುವ ಮೂಲಕ ವಾರ್ಡನ್​ಗೆ ತಲೆದಂಡದ ಮುನ್ಸೂಚನೆ‌ ನೀಡಿದ್ದಾರೆ.

ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸೇರಿ 138 ಮಕ್ಕಳಿದ್ದಾರೆ. ಸ್ವಚ್ಛತೆ ಕೊರತೆಯಿಂದ ಸಾಮೂಹಿಕವಾಗಿ ವಿದ್ಯಾರ್ಥಿಗಳಿಗೆ ಚರ್ಮ ರೋಗ ಉಲ್ಬಣಿಸಿದೆ. ಸರ್ಕಾರಿ ಹಾಸ್ಟೆಲ್​ನಲ್ಲಿ ಇಂತಹ ದುರ್ಘಟನೆ ನಡೆದಿರುವುದಕ್ಕೆ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸರ್ಕಾರ ವಸತಿ ಶಾಲೆಗಳಿಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತದೆ. ಅಲ್ಲದೆ ಪೋಷಕರು ಸರ್ಕಾರದ ಮೇಲೆ ನಂಬಿಕೆ ಇಟ್ಟು ಮಕ್ಕಳನ್ನ ವಸತಿ ಶಾಲೆಗಳಿಗೆ ಸೇರಿಸುತ್ತಾರೆ. ಆದರೂ ಇಂತಹ ಘಟನೆಗಳಿಂದ ಸಮಸ್ಯೆ ಎದುರಾಗಿದೆ, ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದು ನಂತರ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತವೆಂದು ಸಚಿವ ಸುರೇಶ್​ ಕುಮಾರ್​ ಎಚ್ಚರಿಸಿದ್ದಾರೆ.

Intro:Body:ರಾಮನಗರ : ಸರ್ಕಾರಿ ಹಾಸ್ಟೆಲ್ ನಲ್ಲಿ ಕಜ್ಜಿ ಭಾಗ್ಯ ಹಿನ್ನೆಲೆ ತೀವ್ರ ಸ್ವರೂಪ ಪಡೆದುಕೊಂಡಿದೆ ಈ ಬಗ್ಗೆ ಈ ಟಿವಿ ಭಾರತ್ ಸಮಗ್ರ ಸುದ್ದಿ ಪ್ರಕಟಿಸಿತ್ತು, ಘಟನೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇಟಿ ನೀಡಿ‌ ಪರಿಶೀಲನೆ ನಡೆಸಿದರು.
ತಾಲೂಕಿನ ಕೈಲಾಂಚ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿಆರ್ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಕಜ್ಜಿ ಭಾಗ್ಯ ಕುರಿತು ಈಟಿವಿ ಭಾರತ್ ಸುದ್ದಿ ಪ್ರಕಟಿಸಿತ್ತು. ಮಕ್ಕಳು ಚರ್ಮರೋಗ ತುರಿಕೆ ,ಕಜ್ಜಿ ಸಮಸ್ಯೆಯಿಂದ ಹೈರಾಣಾಗಿದ್ದರು ಇದಕ್ಕೆ ಹಾಸ್ಟೆಲ್ ಅವ್ಯವಸ್ಥೆಯೇ ಕಾರಣವಾಗಿತ್ತು.‌ಸ್ನಾನ ಹಾಗೂ‌ ಕುಡಿಯಲು ನೀರಿನ ಸಮಸ್ಯೆ ಅತಿಯಾಗಿತ್ತು. ಅದರಲ್ಲೂ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಆರೋಪ ಕೇಳಿ ಬಂದಿತ್ತು.‌ಸ್ಥಳಕ್ಕೆ ಬೇಟಿ‌ನೀಡಿದ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಉಪ್ಪು ತಿಂದವರು ನೀರು ಕುಡಿಯಲೇ ಬೇಕು , ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎನ್ನುವ ಮೂಲಕ ವಾರ್ಡನ್ ತಲೆದಂಡದ ಮುನ್ಸೂಚನೆ‌ ನೀಡಿದರು.
ಡಾ.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸೇರಿ 138 ಮಕ್ಕಳಿದ್ದಾರೆ, ಸ್ವಚ್ಛತೆ ಕೊರತೆಯಿಂದ ಸಾಮೂಹಿಕವಾಗಿ ವಿದ್ಯಾರ್ಥಿಗಳಿಗೆ ಚರ್ಮ ರೋಗ ಉಲ್ಬಣಿಸಿದೆ, ಸರ್ಕಾರಿ ಹಾಸ್ಟೆಲ್ ನಲ್ಲಿ ಇಂತಹ ದುರ್ಘಟನೆ ನಡೆದಿರುವುದು ವಿಷಾಧನೀಯ ಎಂದರು
ಒಂದು ವಾರಕ್ಕೊಮ್ಮೆ ಮಕ್ಕಳಿಗೆ ಸ್ನಾನ ಮಾಡಲು ಬಿಡುತ್ತಾರೆಂಬ ಆರೋಪ ಕೇಳಿ ಬಂದಿದೆ ಸರ್ಕಾರ ವಸತಿ ಶಾಲೆಗಳಿಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತದೆ ಅಲ್ಲದೆ ಪೋಷಕರು ಸರ್ಕಾರಸ ಮೇಲೆ ನಂಬಿಕೆ ಇಟ್ಟು ಮಕ್ಕಳನ್ನ ವಸತಿ ಶಾಲೆಗೆ ಸೇರಿಸುತ್ತಾರೆ.ಆದರೂ ಇಂತಹ ಘಟನೆಗಳಿಂದ ಸಮಸ್ಯೆ ಎದುರಾಗಿದೆ, ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದು ನಂತರ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ ಎಂದು ಎಚ್ಚರಿಸಿದರು.
ತತ್ ಕ್ಷಣಕ್ಕೆ‌ ಹಾಸ್ಟೆಲ್ ಸ್ಥಳಾಂತರಕ್ಕೆ‌ ಸೂಚಿಸಿದ್ದು ಮುಂದೆ ಶುದ್ದ‌ಕುಡಿಯುವ ನೀರು ಮತ್ತೆ ತಲೆದೋರಿರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ‌ಕಂಡುಕೊಳ್ಳಲಾಗುವುದು ಎಂದ ಅವರು ಸಿಬ್ಬಂದಿಗಳ ವೇತನ ಸಮಸ್ಯೆ ಸೇರಿದಂತೆ ಎಲ್ಲವನ್ನೂ ಶೀಘ್ರವಾಗಿ ಪರಿಹರಿಸುವುದಾಗಿ ಸುರೇಶ್ ಕುಮಾರ್ ಭರವಸೆ ನೀಡಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.