ETV Bharat / state

ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿತ: ಇಬ್ಬರು ಕಾರ್ಮಿಕರ ದುರ್ಮರಣ

author img

By

Published : Feb 11, 2020, 4:06 PM IST

ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿದು, ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್​ನಲ್ಲಿ ನಡೆದಿದೆ.

death of two workers in Ramnagar
ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿತ: ಇಬ್ಬರು ಕಾರ್ಮಿಕರ ದುರ್ಮರಣ

ರಾಮನಗರ: ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿದು, ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್​ನಲ್ಲಿ ನಡೆದಿದೆ.

ಆಂಧ್ರ ಮೂಲದ ಕರಿಯಪ್ಪ (36) , ಬಿಹಾರ ಮೂಲದ ನಿಖಿಲೇಶ್ (32) ಮೃತರು. ಕೆಂಪೇಗೌಡ ಲೇಔಟ್​ನಲ್ಲಿ ಒಳಚರಂಡಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಮಣ್ಣು ತೆಗೆಯಲು ಗುಂಡಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಗುಂಡಿ ಸುತ್ತಲಿದ್ದ ಗುಡ್ಡ ಕುಸಿದು ಈ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಬಳಿಕ ಜೆಸಿಬಿ ಮೂಲಕ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಶವಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಪೈಪ್ ಲೈನ್ ಕಾಮಗಾರಿ ವೇಳೆ ಗುಡ್ಡ ಕುಸಿದು, ಇಬ್ಬರು ಕಾರ್ಮಿಕರು ಮೃತ ಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಹಳೇಭೈರೋಹಳ್ಳಿ ಸಮೀಪದ ಕೆಂಪೇಗೌಡ ಲೇಔಟ್​ನಲ್ಲಿ ನಡೆದಿದೆ.

ಆಂಧ್ರ ಮೂಲದ ಕರಿಯಪ್ಪ (36) , ಬಿಹಾರ ಮೂಲದ ನಿಖಿಲೇಶ್ (32) ಮೃತರು. ಕೆಂಪೇಗೌಡ ಲೇಔಟ್​ನಲ್ಲಿ ಒಳಚರಂಡಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಮಣ್ಣು ತೆಗೆಯಲು ಗುಂಡಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಗುಂಡಿ ಸುತ್ತಲಿದ್ದ ಗುಡ್ಡ ಕುಸಿದು ಈ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಬಳಿಕ ಜೆಸಿಬಿ ಮೂಲಕ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಶವಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.