ETV Bharat / state

ಅಭಿವೃದ್ಧಿ ಕೆಲಸಗಳು ಹಿಂದೆ ಕಾಗದದ ಮೇಲಿದ್ದವು, ಈಗ ಕಾಣುತ್ತಿವೆ : ಡಿಸಿಎಂ ಅಶ್ವತ್ಥ್ ನಾರಾಯಣ

author img

By

Published : Dec 1, 2020, 5:53 PM IST

ಇನ್ನು ಮುಂದೆ ಜಿಲ್ಲೆ ಅಥವಾ ರಾಜ್ಯದಲ್ಲಿಯೇ ಆಗಲಿ ದಬ್ಬಾಳಿಕೆ ಮಾಡಿ ರಾಜಕಾರಣ ಮಾಡುತ್ತೇವೆ ಎನ್ನಲಾಗದು. ಆ ಕಾಲ ಹೋಯಿತು. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯಬೇಕು ಇಲ್ಲವಾದ್ರೆ, ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಆದ ಗತಿಯೇ ಇಲ್ಲಿಯೂ ಆಗುತ್ತದೆ..

ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ

ಚನ್ನಪಟ್ಟಣ: ಇಷ್ಟು ದಿನ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲಿದ್ದವು. ಈಗ ಅನುಷ್ಠಾನವಾಗಿ ಕಣ್ಣಿಗೆ ಕಾಣುತ್ತಿವೆ. ಇದಕ್ಕೆ ಕಾರಣ ದೇಶ ಮತ್ತು ರಾಜ್ಯದಲ್ಲಿ ಆಗಿರುವ ರಾಜಕೀಯ ಬದಲಾವಣೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಮನಗರವೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಚನ್ನಪಟ್ಟಣ ತಾಲೂಕಿನ ಜೆ.ಬ್ಯಾಡರಹಳ್ಳಿಯ ಶಾಲೆ ಮೈದಾನದಲ್ಲಿ ಮಂಗಳವಾರದಂದು ಬಿಜೆಪಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ನಡೆದ ಅಬ್ಬರದ ರಾಜಕೀಯ ಸಾಕು, ಕೌಟುಂಬಿಕ ರಾಜಕಾರಣ ಸಾಕು. ಅಭಿವೃದ್ಧಿಯನ್ನು ಮರೆತು ಸ್ವಾರ್ಥ ರಾಜಕಾರಣ ಮಾಡಿದ ಪಕ್ಷಗಳು ಸಾಕು.

ದೇಶ, ರಾಜ್ಯದಲ್ಲಿ ಈಗ ಎಲ್ಲವೂ ಬದಲಾಗಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಬದಲಾವಣೆ ಬರಬೇಕು. ಈ ಚುನಾವಣೆಯಲ್ಲಿ ಶೇ.80ರಷ್ಟು ಅಭ್ಯರ್ಥಿಗಳು ಬಿಜೆಪಿಯಿಂದಲೇ ಗೆಲ್ಲಬೇಕು. ಆ ಮೂಲಕ ಗ್ರಾಮ ಸ್ವರಾಜ್ಯ ಕನಸನ್ನು ನನಸು ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಸಹಿಸಲ್ಲ : ಡಿಸಿಎಂ ಭಾಷಣದ ನಡುವೆಯೇ ಮಧ್ಯ ಪ್ರವೇಶಿಸಿದ ಪಕ್ಷದ ಕಾರ್ಯಕರ್ತರು, ಕನಕಪುರ ಹಾಗೂ ಜಿಲ್ಲೆಯ ಅನೇಕ ಕಡೆ ಡಿ ಕೆ ಶಿವಕುಮಾರ್‌ ಮತ್ತು ಡಿ ಕೆ ಸುರೇಶ್‌ ಅವರ ಬೆಂಬಲಿಗರಿಂದ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದರು.

ಈ ಮಾತು ಕೇಳಿದೊಡನೆ ಕೆರಳಿದ ಡಾ.ಅಶ್ವತ್ಥ್‌ ನಾರಾಯಣ, ಜಿಲ್ಲೆ ಯಾರೊಬ್ಬರ ಸ್ವತ್ತೂ ಅಲ್ಲ. ಯಾರಪ್ಪನ ಆಸ್ತಿಯೂ ಅಲ್ಲ. ನಿಮ್ಮ ಕೆಲಸ ನೀವು ಮಾಡಿ, ನಿಮ್ಮ ಕರ್ತವ್ಯವನ್ನು ನೀವು ರಾಜಿ ಇಲ್ಲದೆ ಮಾಡಿ. ನಿಮಗೆ ಯಾರಾದ್ರೂ ಅಡ್ಡಿಪಡಿಸಿದ್ರೆ ನಮ್ಮ ಗಮನಕ್ಕೆ ತನ್ನಿ. ಅಂಥವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದರು.

ಇನ್ನು ಮುಂದೆ ಜಿಲ್ಲೆ ಅಥವಾ ರಾಜ್ಯದಲ್ಲಿಯೇ ಆಗಲಿ ದಬ್ಬಾಳಿಕೆ ಮಾಡಿ ರಾಜಕಾರಣ ಮಾಡುತ್ತೇವೆ ಎನ್ನಲಾಗದು. ಆ ಕಾಲ ಹೋಯಿತು. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯಬೇಕು ಇಲ್ಲವಾದ್ರೆ, ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಆದ ಗತಿಯೇ ಇಲ್ಲಿಯೂ ಆಗುತ್ತದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾನೂನು, ನಿಯಮ ಎನ್ನುವುದು ಎಲ್ಲರಿಗೂ ಒಂದೇ. ಅದನ್ನು ಮರೆತು ವರ್ತಿಸಿದರೆ ತಕ್ಕ ಪಾಠ ಕಲಿಸಲಾಗುವುದು. ಯಾರಿಗೂ ಪಕ್ಷದ ಕಾರ್ಯಕರ್ತರು ಹೆದರಬೇಕಾಗಿಲ್ಲ. ಧೈರ್ಯವಾಗಿ ಮುನ್ನುಗಿ ಎಂದು ಧೈರ್ಯ ತುಂಬಿದರು.

ಬಳಿಕ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೀಶ್ವರ್‌, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಮುಂತಾದವರು ಉಪಸ್ಥಿತರಿದ್ದರು.

ಚನ್ನಪಟ್ಟಣ: ಇಷ್ಟು ದಿನ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲಿದ್ದವು. ಈಗ ಅನುಷ್ಠಾನವಾಗಿ ಕಣ್ಣಿಗೆ ಕಾಣುತ್ತಿವೆ. ಇದಕ್ಕೆ ಕಾರಣ ದೇಶ ಮತ್ತು ರಾಜ್ಯದಲ್ಲಿ ಆಗಿರುವ ರಾಜಕೀಯ ಬದಲಾವಣೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಮನಗರವೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಚನ್ನಪಟ್ಟಣ ತಾಲೂಕಿನ ಜೆ.ಬ್ಯಾಡರಹಳ್ಳಿಯ ಶಾಲೆ ಮೈದಾನದಲ್ಲಿ ಮಂಗಳವಾರದಂದು ಬಿಜೆಪಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ನಡೆದ ಅಬ್ಬರದ ರಾಜಕೀಯ ಸಾಕು, ಕೌಟುಂಬಿಕ ರಾಜಕಾರಣ ಸಾಕು. ಅಭಿವೃದ್ಧಿಯನ್ನು ಮರೆತು ಸ್ವಾರ್ಥ ರಾಜಕಾರಣ ಮಾಡಿದ ಪಕ್ಷಗಳು ಸಾಕು.

ದೇಶ, ರಾಜ್ಯದಲ್ಲಿ ಈಗ ಎಲ್ಲವೂ ಬದಲಾಗಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲೂ ಬದಲಾವಣೆ ಬರಬೇಕು. ಈ ಚುನಾವಣೆಯಲ್ಲಿ ಶೇ.80ರಷ್ಟು ಅಭ್ಯರ್ಥಿಗಳು ಬಿಜೆಪಿಯಿಂದಲೇ ಗೆಲ್ಲಬೇಕು. ಆ ಮೂಲಕ ಗ್ರಾಮ ಸ್ವರಾಜ್ಯ ಕನಸನ್ನು ನನಸು ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಸಹಿಸಲ್ಲ : ಡಿಸಿಎಂ ಭಾಷಣದ ನಡುವೆಯೇ ಮಧ್ಯ ಪ್ರವೇಶಿಸಿದ ಪಕ್ಷದ ಕಾರ್ಯಕರ್ತರು, ಕನಕಪುರ ಹಾಗೂ ಜಿಲ್ಲೆಯ ಅನೇಕ ಕಡೆ ಡಿ ಕೆ ಶಿವಕುಮಾರ್‌ ಮತ್ತು ಡಿ ಕೆ ಸುರೇಶ್‌ ಅವರ ಬೆಂಬಲಿಗರಿಂದ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದರು.

ಈ ಮಾತು ಕೇಳಿದೊಡನೆ ಕೆರಳಿದ ಡಾ.ಅಶ್ವತ್ಥ್‌ ನಾರಾಯಣ, ಜಿಲ್ಲೆ ಯಾರೊಬ್ಬರ ಸ್ವತ್ತೂ ಅಲ್ಲ. ಯಾರಪ್ಪನ ಆಸ್ತಿಯೂ ಅಲ್ಲ. ನಿಮ್ಮ ಕೆಲಸ ನೀವು ಮಾಡಿ, ನಿಮ್ಮ ಕರ್ತವ್ಯವನ್ನು ನೀವು ರಾಜಿ ಇಲ್ಲದೆ ಮಾಡಿ. ನಿಮಗೆ ಯಾರಾದ್ರೂ ಅಡ್ಡಿಪಡಿಸಿದ್ರೆ ನಮ್ಮ ಗಮನಕ್ಕೆ ತನ್ನಿ. ಅಂಥವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದರು.

ಇನ್ನು ಮುಂದೆ ಜಿಲ್ಲೆ ಅಥವಾ ರಾಜ್ಯದಲ್ಲಿಯೇ ಆಗಲಿ ದಬ್ಬಾಳಿಕೆ ಮಾಡಿ ರಾಜಕಾರಣ ಮಾಡುತ್ತೇವೆ ಎನ್ನಲಾಗದು. ಆ ಕಾಲ ಹೋಯಿತು. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯಬೇಕು ಇಲ್ಲವಾದ್ರೆ, ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಆದ ಗತಿಯೇ ಇಲ್ಲಿಯೂ ಆಗುತ್ತದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾನೂನು, ನಿಯಮ ಎನ್ನುವುದು ಎಲ್ಲರಿಗೂ ಒಂದೇ. ಅದನ್ನು ಮರೆತು ವರ್ತಿಸಿದರೆ ತಕ್ಕ ಪಾಠ ಕಲಿಸಲಾಗುವುದು. ಯಾರಿಗೂ ಪಕ್ಷದ ಕಾರ್ಯಕರ್ತರು ಹೆದರಬೇಕಾಗಿಲ್ಲ. ಧೈರ್ಯವಾಗಿ ಮುನ್ನುಗಿ ಎಂದು ಧೈರ್ಯ ತುಂಬಿದರು.

ಬಳಿಕ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೀಶ್ವರ್‌, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.