ETV Bharat / state

ರಾಮನಗರದಲ್ಲಿ ಟಾಟಾ ಏಸ್ ಪಲ್ಟಿಯಾಗಿ ಮೂವರ ದುರ್ಮರಣ.. ತರಕಾರಿ ತರಲು ಹೊರಟಾಗ ದುರಂತ

author img

By

Published : Dec 5, 2022, 12:50 PM IST

Updated : Dec 5, 2022, 1:09 PM IST

ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

three-dead-as-tata-ace-overturns-in-ramanagar
ರಾಮನಗರದಲ್ಲಿ ಟಾಟಾ ಏಸ್ ಪಲ್ಟಿ

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರದ ನಾರಾಯಣಪಾಳ್ಯದ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

ಬೆಳ್ಳೂರು ಕ್ರಾಸ್​​ನಿಂದ ನೆಲಮಂಗಲಕ್ಕೆ ತರಕಾರಿ ತರಲು ಹೋಗುವಾಗ ದುರಂತ ನಡೆದಿದೆ. ಮೃತರನ್ನು ರತ್ನಮ್ಮ, ಲಕ್ಕಮ್ಮ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದವರಾಗಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಟಾಟಾ ಏಸ್ ಚಾಲಕ ತಿರುವಿನಲ್ಲಿ ಅತಿ ವೇಗವಾಗಿ ಚಲಾಯಿಸಿರುವುದೇ ದುರ್ಘಟನೆಗೆ ಕಾರಣ ಎನ್ನಲಾಗ್ತಿದೆ. ಮಾಹಿತಿ ತಿಳಿದ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಪಿಕಪ್​ ವಾಹನ ಪಲ್ಟಿ.. ನಾಲ್ವರು ಅಯ್ಯಪ್ಪ ಭಕ್ತರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರದ ನಾರಾಯಣಪಾಳ್ಯದ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

ಬೆಳ್ಳೂರು ಕ್ರಾಸ್​​ನಿಂದ ನೆಲಮಂಗಲಕ್ಕೆ ತರಕಾರಿ ತರಲು ಹೋಗುವಾಗ ದುರಂತ ನಡೆದಿದೆ. ಮೃತರನ್ನು ರತ್ನಮ್ಮ, ಲಕ್ಕಮ್ಮ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರು ಗ್ರಾಮದವರಾಗಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಟಾಟಾ ಏಸ್ ಚಾಲಕ ತಿರುವಿನಲ್ಲಿ ಅತಿ ವೇಗವಾಗಿ ಚಲಾಯಿಸಿರುವುದೇ ದುರ್ಘಟನೆಗೆ ಕಾರಣ ಎನ್ನಲಾಗ್ತಿದೆ. ಮಾಹಿತಿ ತಿಳಿದ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಪಿಕಪ್​ ವಾಹನ ಪಲ್ಟಿ.. ನಾಲ್ವರು ಅಯ್ಯಪ್ಪ ಭಕ್ತರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

Last Updated : Dec 5, 2022, 1:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.