ರಾಮನಗರ: ಬಿಡದಿಯ ಕೇತಿಗಾನಹಳ್ಳಿಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕೇತಿಗಾನಹಳ್ಳಿ ಜಮೀನಿಗೆ ಸಂಬಂಧಿಸಿದಂತೆ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು.
ಸ್ವರಾಜ್ ಪಕ್ಷದ ರವಿ ಕೃಷ್ಣಾರೆಡ್ಡಿ ಸೇರಿದಂತೆ ಇತರರೊಂದಿಗೆ ಅಭಿಪ್ರಾಯ ಸಂಗ್ರಹಕ್ಕೆ ತೆರಳಿದ್ರು. ಈ ವೇಳೆ ಅಪರಿಚಿತರು ಅವರ ಕಾರಿನ ಚಕ್ರದ ಗಾಳಿ ತೆಗೆದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.