ETV Bharat / state

ರಾಮನಗರದಲ್ಲಿ ​ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ: ಐಜಿಪಿ ಶರತ್ ಚಂದ್ರ

author img

By

Published : Sep 5, 2019, 10:15 AM IST

ಮಾಜಿ ಸಚಿವ ಡಿ.ಕಿ.ಶಿವಕುಮಾರ್​ ಬಂಧನ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್​ ಹಾಗೂ ಜೆಡಿಎಸ್​ ಕಾರ್ಯಕರ್ತರು ರಾಮನಗರ ಬಂದ್​ಗೆ ಕರೆ ನೀಡಿದ್ದು, ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.

ಐಜಿಪಿ ಶರತ್ ಚಂದ್ರ, IGP Sharath chandra

ರಾಮನಗರ : ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು‌. ಎಲ್ಲಿಯೂ ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.

ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಡೆ ಶಾಂತಿಯುವ ವಾತಾವರಣವಿದೆ. ಕನಕಪುರ, ರಾಮನಗರ, ಚನ್ನಪಟ್ಟಣದಲ್ಲಿ ಯಾವುದೇ ಸಮಸ್ಯೆಯಿಲ್ಲ. ಕೆಲವೇ ಕೆಲವು ಅಂಗಡಿಗಳು ತೆರೆದಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.

ಬಂದ್ ಹಿನ್ನೆಲೆಯಲ್ಲಿ‌ ಕೆಎಸ್ಆರ್​ಟಿಸಿ ಅವರೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದು, ತುರ್ತು ಸೇವೆಗಳಿಗೆ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ ಆದಷ್ಟು ಶೀಘ್ರವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಗುವುದು ಎಂದು ಹೇಳಿದ್ರು.

ರಾಮನಗರ : ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು‌. ಎಲ್ಲಿಯೂ ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.

ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಡೆ ಶಾಂತಿಯುವ ವಾತಾವರಣವಿದೆ. ಕನಕಪುರ, ರಾಮನಗರ, ಚನ್ನಪಟ್ಟಣದಲ್ಲಿ ಯಾವುದೇ ಸಮಸ್ಯೆಯಿಲ್ಲ. ಕೆಲವೇ ಕೆಲವು ಅಂಗಡಿಗಳು ತೆರೆದಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದರು.

ಬಂದ್ ಹಿನ್ನೆಲೆಯಲ್ಲಿ‌ ಕೆಎಸ್ಆರ್​ಟಿಸಿ ಅವರೆ ಬಸ್ ಸಂಚಾರ ಸ್ಥಗಿತಗೊಳಿಸಿದ್ದು, ತುರ್ತು ಸೇವೆಗಳಿಗೆ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ ಆದಷ್ಟು ಶೀಘ್ರವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಗುವುದು ಎಂದು ಹೇಳಿದ್ರು.

Intro:Body:ರಾಮನಗರ
ಬಂದ್ ಹಿನ್ನಲೆಯಲ್ಲಿ ಸಾರ್ವಜನಕರು ಶಾಂತಿಯುತವಾಗಿ ವರ್ತಿಸಬೇಕು‌. ಎಲ್ಲಿಯು ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದರು.
ಸೂಕ್ಷ್ಮ ಪ್ರದೇಶವಾದ ಕನಕಪುರದಲ್ಲಿಯೆ ಒಬ್ಬರು ಎಸ್ಪಿ ಇದ್ದಾರೆ. ಪೆಟ್ರೋಲಿಂಗ್ ನಡೆಸಲಾಗುತ್ತಿದೆ, ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನು ಗಸ್ತಿನ ಮೂಲಕವು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದು ಅಭಯ ನೀಡಿದರು.
ಬಂದ್ ಹಿನ್ನಲೆಯಲ್ಲಿ‌ ಕೆಎಸ್ಅರ್ಟಿಸಿ ಅವರೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ. ತುರ್ತು ಸೇವೆಗಳಿಗೆ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ, ಆದಷ್ಟು ಶೀಘ್ರವೇ ಪರಿಸ್ಥಿತಿ ಯನ್ನು ಹತೋಟಿಗೆ ತರಲಾಗುವುದು ಎಂದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.