ರಾಮನಗರ: ಬೊಂಬೆನಗರಿ ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ ಎಗ್ಗಿಲ್ಲದೇ ನಡೆದಿದೆ. ಈ ಸರ್ಕಾರಿ ಗೋಮಾಳ ಕಬಳಿಕೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಅವರನ್ನು ಖುದ್ದು ಭೇಟಿಯಾಗಿ ಪತ್ರ ನೀಡಿರುವ ಯೋಗೇಶ್ವರ್, ಚನ್ನಪಟ್ಟಣದಲ್ಲಿ ಬಹುಕೋಟಿ ವೆಚ್ಚದ ಸರ್ಕಾರಿ ಗೋಮಾಳ ಕಬಳಿಕೆಯಾಗಿದೆ. ಕೆಲ ಪಟ್ಟಬದ್ದ ಹಿತಾಸಕ್ತಿಗಳು ಸರ್ಕಾರಿ ಗೋಮಾಳದ ಜಮೀನು ಲಪಟಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು, ಈ ಪ್ರಕರಣವನ್ನ ಸಿಒಡಿ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಬಸವರಾಜ ಬೊಮ್ಮಾಯಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಹೊಸಕೋಟೆ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು: ಬಸವರಾಜ ಬೊಮ್ಮಾಯಿ