ETV Bharat / state

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

author img

By

Published : Dec 12, 2021, 5:29 AM IST

ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

marijuana seized
ಶಿವಮೊಗ್ಗ ಗಾಂಜಾ ಸಾಗಾಟ ಪ್ರಕರಣ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌

ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ.

ಗಾಂಜಾ ಮೌಲ್ಯವು ಅಂದಾಜು 6 ಲಕ್ಷ 35 ಸಾವಿರ ರೂ.ಗಳಾಗಿದ್ದು, ಕಾರನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಪೊಲೀಸ್ ಇನ್ಸ್​ಪೆಕ್ಟರ್​ ದೀಪಕ್ ಹಾಗೂ ತಂಡವು ಭರ್ಜರಿ ಬೇಟೆಯಾಡಿದೆ.

ಇದನ್ನೂ ಓದಿ: ಲಾರಿಯ ಇಂಜಿನ್​ ಬಳಿ ಬಚ್ಚಿಟ್ಟು 8 ಕೆಜಿ ಚಿನ್ನ ಕಳ್ಳಸಾಗಾಟ: ಇಬ್ಬರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌

ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ.

ಗಾಂಜಾ ಮೌಲ್ಯವು ಅಂದಾಜು 6 ಲಕ್ಷ 35 ಸಾವಿರ ರೂ.ಗಳಾಗಿದ್ದು, ಕಾರನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಪೊಲೀಸ್ ಇನ್ಸ್​ಪೆಕ್ಟರ್​ ದೀಪಕ್ ಹಾಗೂ ತಂಡವು ಭರ್ಜರಿ ಬೇಟೆಯಾಡಿದೆ.

ಇದನ್ನೂ ಓದಿ: ಲಾರಿಯ ಇಂಜಿನ್​ ಬಳಿ ಬಚ್ಚಿಟ್ಟು 8 ಕೆಜಿ ಚಿನ್ನ ಕಳ್ಳಸಾಗಾಟ: ಇಬ್ಬರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.