ಶಿವಮೊಗ್ಗ : ನಗರದ ಹೊರ ವಲಯದ ಹಾಸ್ಟೆಲ್ನಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು, ಮಲ್ಲಿಗೇನಹಳ್ಳಿ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ. ಈ ಹಾಸ್ಟೆಲ್ ನಗರದಿಂದ 8 ಕಿ.ಮೀ ದೂರದಲ್ಲಿದೆ. ಹಾಸ್ಟೆಲ್ ನಿಂದ ಕಾಲೇಜಿಗೆ ಬರಲು ಸರಿಯಾದ ಸಮಯಕ್ಕೆ ಬಸ್ ಇಲ್ಲ. ಇದರಿಂದ ನಿತ್ಯ ತರಗತಿಯನ್ನು ತಪ್ಪಿಸಿ ಕೊಳ್ಳುವಂತಾಗಿದೆ ಆರೋಪಿಸಿ ಪ್ರತಿಭಟನೆ ನಡೆಸಿದರು.
ಈ ಮೊದಲು ಇದೇ ವಿದ್ಯಾರ್ಥಿಗಳ ಹಾಸ್ಟೆಲ್ ನಗರದ ಮಧ್ಯೆ ಇತ್ತು. ಈಗ ನಗರದಿಂದ ದೂರ ಇರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಮಸ್ಯೆಯಾಗುತ್ತಿದೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.