ETV Bharat / state

ಭದ್ರಾ ಜಲಾಶಯ ದುರಸ್ತಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ : ರೈತರಿಂದ ಡ್ಯಾಂ ಬಳಿ ಪ್ರತಿಭಟನೆ

author img

By

Published : Jun 25, 2021, 7:17 PM IST

ಜಲಾಶಯದ ಆಳಕ್ಕೆ ರಿಪೇರಿ ಮಾಡಲು ಹೋಗಿ ಸಂಪೂರ್ಣ ಕಾಮಗಾರಿಯನ್ನು ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿ ಮಾಡುವ ಮೂಲಕ ಭ್ರಷ್ಟಾಚಾರವನ್ನ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ..

http://10.10.50.85//karnataka/25-June-2021/kn-smg-08-bhadra-dam-ka10011_25062021173812_2506f_1624622892_345.jpg
ಭದ್ರಾ ಜಲಾಶಯ ದುರಸ್ತಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ

ಶಿವಮೊಗ್ಗ : ಭದ್ರಾ ಜಲಾಶಯ ಕಾಮಗಾರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಹಾಗಾಗಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಭದ್ರಾ ಡ್ಯಾಂ ಗೇಟ್ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ಕೈಗೊಂಡಿರುವ ದುರಸ್ತಿ ಕಾಮಗಾರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಅವರು, ಕೂಡಲೇ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಭದ್ರಾ ಜಲಾಶಯ ದುರಸ್ತಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ : ರೈತರಿಂದ ಡ್ಯಾಂ ಬಳಿ ಪ್ರತಿಭಟನೆ

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಜಲಾಶಯದ ತಳಭಾಗದ ದುರಸ್ತಿ ಕಾಮಗಾರಿಯು ಅವೈಜ್ಞಾನಿಕವಾಗಿ ನಡೆದಿದೆ. ಇದರಿಂದಾಗಿ ಜಲಾಶಯ ತಡೆಗೋಡೆಗೆ ಹಾನಿಯಾಗಿದೆ. ಇದರಿಂದ ವಿಪರೀತ ನೀರು ಸೋರಿಕೆಯಾಗುತ್ತಿದೆ. ಇದು ಹೀಗೆ ಮುಂದುವರಿದರೆ ಡ್ಯಾಂಗೆ ಹಾನಿಯಾಗುವ ಸಂಭವವೂ ಇದೆ. ಈ ಕಾಮಗಾರಿಯ ಬಗ್ಗೆ ಯಾವುದೇ ತಜ್ಞರ ಒಪ್ಪಿಗೆ ಪಡೆಯದೇ ಹಣ ದೋಚಲೆಂದೇ ಕೃತಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಜಲಾಶಯದ ಆಳಕ್ಕೆ ರಿಪೇರಿ ಮಾಡಲು ಹೋಗಿ ಸಂಪೂರ್ಣ ಕಾಮಗಾರಿಯನ್ನು ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿ ಮಾಡುವ ಮೂಲಕ ಭ್ರಷ್ಟಾಚಾರವನ್ನ ಎಸಗಿದ್ದಾರೆ. ಹಾಗಾಗಿ, ಕೂಡಲೇ ಭ್ರಷ್ಟಾಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಜೂನ್ ಅಂತ್ಯದೊಳಗಾಗಿ ಡ್ಯಾಂ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಓದಿ: ತ್ಯಾವರೆಕೊಪ್ಪ ಹುಲಿ, ಸಿಂಹಧಾಮ ಪ್ರವಾಸಿಗರಿಗೆ ಮುಕ್ತ

ಶಿವಮೊಗ್ಗ : ಭದ್ರಾ ಜಲಾಶಯ ಕಾಮಗಾರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಹಾಗಾಗಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಭದ್ರಾ ಡ್ಯಾಂ ಗೇಟ್ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ಕೈಗೊಂಡಿರುವ ದುರಸ್ತಿ ಕಾಮಗಾರಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಅವರು, ಕೂಡಲೇ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಭದ್ರಾ ಜಲಾಶಯ ದುರಸ್ತಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ : ರೈತರಿಂದ ಡ್ಯಾಂ ಬಳಿ ಪ್ರತಿಭಟನೆ

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಜಲಾಶಯದ ತಳಭಾಗದ ದುರಸ್ತಿ ಕಾಮಗಾರಿಯು ಅವೈಜ್ಞಾನಿಕವಾಗಿ ನಡೆದಿದೆ. ಇದರಿಂದಾಗಿ ಜಲಾಶಯ ತಡೆಗೋಡೆಗೆ ಹಾನಿಯಾಗಿದೆ. ಇದರಿಂದ ವಿಪರೀತ ನೀರು ಸೋರಿಕೆಯಾಗುತ್ತಿದೆ. ಇದು ಹೀಗೆ ಮುಂದುವರಿದರೆ ಡ್ಯಾಂಗೆ ಹಾನಿಯಾಗುವ ಸಂಭವವೂ ಇದೆ. ಈ ಕಾಮಗಾರಿಯ ಬಗ್ಗೆ ಯಾವುದೇ ತಜ್ಞರ ಒಪ್ಪಿಗೆ ಪಡೆಯದೇ ಹಣ ದೋಚಲೆಂದೇ ಕೃತಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಜಲಾಶಯದ ಆಳಕ್ಕೆ ರಿಪೇರಿ ಮಾಡಲು ಹೋಗಿ ಸಂಪೂರ್ಣ ಕಾಮಗಾರಿಯನ್ನು ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿ ಮಾಡುವ ಮೂಲಕ ಭ್ರಷ್ಟಾಚಾರವನ್ನ ಎಸಗಿದ್ದಾರೆ. ಹಾಗಾಗಿ, ಕೂಡಲೇ ಭ್ರಷ್ಟಾಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಜೂನ್ ಅಂತ್ಯದೊಳಗಾಗಿ ಡ್ಯಾಂ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಓದಿ: ತ್ಯಾವರೆಕೊಪ್ಪ ಹುಲಿ, ಸಿಂಹಧಾಮ ಪ್ರವಾಸಿಗರಿಗೆ ಮುಕ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.