ಶಿವಮೊಗ್ಗ: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಸಾಗರ ತಾಲೂಕಿನ ಮಂಕಳಲೆ ಗ್ರಾಮದ ಬಳಿ ನಡೆದಿದೆ.
![animal Attack on a bike rider](https://etvbharatimages.akamaized.net/etvbharat/prod-images/7008795_1002_7008795_1588263537678.png)
ಮಂಕಳಲೆ ಗ್ರಾಮದ ಸವಾರ ಶಶಿಧರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಹೊಟ್ಟೆ ಭಾಗದಲ್ಲಿ ಪೆಟ್ಟಾಗಿದೆ.
ಬೈಕ್ನಲ್ಲಿ ತೆರಳುತ್ತಿರುವಾಗ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಗಾಯಾಳುವನ್ನು ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.