ETV Bharat / state

ಶಿವಮೊಗ್ಗ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರು ಅರೆಸ್ಟ್​

ಬೈಕ್ ನಲ್ಲಿ ಹೋಗುವಾಗ ವ್ಯಕ್ತಿಯನ್ನ ಅಡ್ಡಗಟ್ಟಿ ದರೋಡೆಮಾಡಿದ ಮೂವರು ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

author img

By

Published : May 8, 2021, 7:26 AM IST

ಮೂವರು ದರೋಡೆಕೋರರ ಬಂಧನ
ಮೂವರು ದರೋಡೆಕೋರರ ಬಂಧನ

ಶಿವಮೊಗ್ಗ: ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ನಗರದ ಹೊನ್ನಾಳಿ ರಸ್ತೆಯ ಶಾಂತಿನಗರ ಅಡ್ಡ ರಸ್ತೆಯಲ್ಲಿ ಸುನೀಲ್ ಎಂಬುವರು ತಮ್ಮ ಬೈಕ್ ನಲ್ಲಿ ಹೋಗುವಾಗ ಮೂವರು ಅಪರಿಚಿತರು ಅಡ್ಡಗಟ್ಟಿ ಹಣ ಹಾಗೂ ಎಟಿಎಂ ಕಾರ್ಡ್ ಅನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದರೋಡೆ ನಡೆದ ಕೆಲವೇ ಗಂಟೆಯಲ್ಲಿ ಮೂವರನ್ನ ಹೆಡೆಮುರಿ ಕಟ್ಟಿದ್ದಾರೆ.

ಟಿಪ್ಪು ನಗರದ ಮಹಮದ್ ನೂರುಲ್ಲಾ(19), ಸಯ್ಯದ್ ಅಹಮದ್(19) ಹಾಗೂ ತುಂಗಾ ನಗರದ ಮಹಮದ್ ತಬರಕ್(19) ರನ್ನು ಬಂಧಿತ ಆರೋಪಿಗಳು. ಬಂಧಿತರಿಂದ 19 ಗ್ರಾಂ. ಬಂಗಾರದ ಚೈನ್, ಮೊಬೈಲ್, ಕೃತ್ಯಕ್ಕೆ ಬಳಸಿದ ಚಾಕು ಹಾಗೂ ಒಂದು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇವರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣದಲ್ಲಿ ಭಾಗಿಯಾಗಿದ್ದರು.

ಓದಿ : ಬುದ್ಧಿ ಹೇಳಿದ್ದಕ್ಕೆ ಸಿಟ್ಟು: ಅಪ್ಪ-ಅಮ್ಮನನ್ನೇ ಕೊಂದ 14 ವರ್ಷದ ಬಾಲಕ!

ಶಿವಮೊಗ್ಗ: ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ನಗರದ ಹೊನ್ನಾಳಿ ರಸ್ತೆಯ ಶಾಂತಿನಗರ ಅಡ್ಡ ರಸ್ತೆಯಲ್ಲಿ ಸುನೀಲ್ ಎಂಬುವರು ತಮ್ಮ ಬೈಕ್ ನಲ್ಲಿ ಹೋಗುವಾಗ ಮೂವರು ಅಪರಿಚಿತರು ಅಡ್ಡಗಟ್ಟಿ ಹಣ ಹಾಗೂ ಎಟಿಎಂ ಕಾರ್ಡ್ ಅನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದರೋಡೆ ನಡೆದ ಕೆಲವೇ ಗಂಟೆಯಲ್ಲಿ ಮೂವರನ್ನ ಹೆಡೆಮುರಿ ಕಟ್ಟಿದ್ದಾರೆ.

ಟಿಪ್ಪು ನಗರದ ಮಹಮದ್ ನೂರುಲ್ಲಾ(19), ಸಯ್ಯದ್ ಅಹಮದ್(19) ಹಾಗೂ ತುಂಗಾ ನಗರದ ಮಹಮದ್ ತಬರಕ್(19) ರನ್ನು ಬಂಧಿತ ಆರೋಪಿಗಳು. ಬಂಧಿತರಿಂದ 19 ಗ್ರಾಂ. ಬಂಗಾರದ ಚೈನ್, ಮೊಬೈಲ್, ಕೃತ್ಯಕ್ಕೆ ಬಳಸಿದ ಚಾಕು ಹಾಗೂ ಒಂದು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇವರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣದಲ್ಲಿ ಭಾಗಿಯಾಗಿದ್ದರು.

ಓದಿ : ಬುದ್ಧಿ ಹೇಳಿದ್ದಕ್ಕೆ ಸಿಟ್ಟು: ಅಪ್ಪ-ಅಮ್ಮನನ್ನೇ ಕೊಂದ 14 ವರ್ಷದ ಬಾಲಕ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.