ETV Bharat / state

ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ.. ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ

author img

By

Published : Jan 22, 2020, 8:07 PM IST

ತಾಲೂಕಿನ ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಕ್ಕೆ  ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳು ದಾಳಿ ನಡೆಸಿ 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Attack on illegal mining site in Kallangur Forest Area
Attack on illegal mining site in Kallangur Forest Area

ಶಿವಮೊಗ್ಗ: ಕಲ್ಲುಗಂಗೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆದಿದೆ. ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿದ್ದ 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಲ್ಲುಗಂಗೂರು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ..

ತಾಲೂಕಿನ ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಹಳ ದಿನಗಳಿಂದ ನಡೆಯುತ್ತಿತ್ತು. ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮೊದಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದಾಗ ಕಲ್ಲುಗಂಗೂರು ವ್ಯಾಪ್ತಿಯ ಎಲ್ಲಾ ಗಣಿಗಾರಿಕೆಗಳು ಅಕ್ರಮ ಎಂದು ತಿಳಿದು ಬಂದಿದೆ. ನಂತರ ಶಂಕರ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವೇಳೆ ಟಿಪ್ಪರ್ ಲಾರಿಗಳು ಹಾಗೂ ಡಿಗಿಂಗ್ ಮಾಡಲು ಬಳಸುವ ಐದಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳನ್ನ ವಶಕ್ಕೆ ಪಡೆದು ಕೊಳ್ಳಲಾಗಿದೆ.

ಈಗಾಗಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಸುವವರಿಗೆ ಸಾಕಷ್ಟು ಸಲ ನೋಟಿಸ್ ನೀಡಿದ್ದರುೂ ಸಹ ಯಾವುದೇ ಬದಲಾವಣೆ ಕಾಣದ ಕಾರಣ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ‌ ಅರಣ್ಯಾಧಿಕಾರಿ‌ ಶಂಕರ್​ರವರು ತಿಳಿಸಿದ್ದಾರೆ.

ಶಿವಮೊಗ್ಗ: ಕಲ್ಲುಗಂಗೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆದಿದೆ. ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿದ್ದ 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಕಲ್ಲುಗಂಗೂರು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ..

ತಾಲೂಕಿನ ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಹಳ ದಿನಗಳಿಂದ ನಡೆಯುತ್ತಿತ್ತು. ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮೊದಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದಾಗ ಕಲ್ಲುಗಂಗೂರು ವ್ಯಾಪ್ತಿಯ ಎಲ್ಲಾ ಗಣಿಗಾರಿಕೆಗಳು ಅಕ್ರಮ ಎಂದು ತಿಳಿದು ಬಂದಿದೆ. ನಂತರ ಶಂಕರ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ ವೇಳೆ ಟಿಪ್ಪರ್ ಲಾರಿಗಳು ಹಾಗೂ ಡಿಗಿಂಗ್ ಮಾಡಲು ಬಳಸುವ ಐದಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳನ್ನ ವಶಕ್ಕೆ ಪಡೆದು ಕೊಳ್ಳಲಾಗಿದೆ.

ಈಗಾಗಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಸುವವರಿಗೆ ಸಾಕಷ್ಟು ಸಲ ನೋಟಿಸ್ ನೀಡಿದ್ದರುೂ ಸಹ ಯಾವುದೇ ಬದಲಾವಣೆ ಕಾಣದ ಕಾರಣ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ‌ ಅರಣ್ಯಾಧಿಕಾರಿ‌ ಶಂಕರ್​ರವರು ತಿಳಿಸಿದ್ದಾರೆ.

Intro:ಶಿವಮೊಗ್ಗ ತಾಲೂಕಿನ ಕಲ್ಲುಗಂಗೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಲ್ಲುಗಣಿಗಾರಿಕೆ ಮಾಡುತ್ತಿರುವಾಗ ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಜಂಟಿಯಾಗಿ ದಾಳಿ ನಡೆಸಿ 10 ವಾಹನಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಕಲ್ಲುಗಂಗೂರಿನ ಗೆಜ್ಜೆನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆಯನ್ನು ಬಹಳ ದಿನಗಳಿಂದ ನಡೆಸಲಾಗುತ್ತಿತ್ತು. ಈ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಮೊದಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದಾಗ ಕಲ್ಲುಗಂಗೂರು ವ್ಯಾಪ್ತಿಯ ಎಲ್ಲಾ ಗಣಿಗಾರಿಕೆಗಳು ಎಲ್ಲಾವು ಅಕ್ರಮ ಎಂದು ತಿಳಿದು ಬಂದಿದೆ.


Body:ನಂತ್ರ ಅರಣ್ಯ ಇಲಾಖೆಯವರು ಧಾಳಿ ನಡೆಸಿಸ್ದಾರೆ. ಈ ವೇಳೆ ಅರಣ್ಯ ಭೂಮಿಯಲ್ಲಿ ಐದಕ್ಕೂ ಹೆಚ್ಚು ಟಿಪ್ಪರ್ ಲಾರಿಗಳು ಹಾಗೂ ಡಿಗಿಂಗ್ ಮಾಡಲು ಮಾಡಲು ಬಳಸುವ ಐದಕ್ಕೂ ಹೆಚ್ಚು ಟ್ರಾಕ್ಟರ್ ಗಳು ಹೀಗೆ ಹಲವು ವಾಹಗಳನ್ನು ಸಹ ವಶಕ್ಕೆ ಪಡೆದು ಕೊಳ್ಳಲಾಗಿದೆ. ಕಲ್ಲುಗಂಗೂರು ಶಂಕರ ಅರಣ್ಯ ವಲಯ ಪ್ರದೇಶದ ವ್ಯಾಪ್ತಿಗೆ ಬರುವುದರಿಂದ ಶಂಕರ ವಲಯರಾಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.


Conclusion:ಈಗಾಗಲೇ ಸಾಕಷ್ಟು ಸಲ ನೋಟಿಸ್ ನೀಡಿದ್ದರು‌ ಸಹ ಯಾವುದೇ ಬದಲಾವಣೆ ಕಾಣದ ಕಾರಣ ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿದ್ಧ ವಾಹನಗಳನ್ನು ಸಿಜ್ ಮಾಡಲಾಗಿದೆ ಎಂದು ಜಿಲ್ಲಾ‌ಅರಣ್ಯಾಧಿಕಾರಿ‌ ಶಂಕರ್ ರವರು ತಿಳಿಸಿದ್ದಾರೆ.

ಬೈಟ್: ಶಂಕರ್, ವಲಯ‌ಅರಣ್ಯಾಧಿಕಾ. ವಲಯ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.