ETV Bharat / state

ರೈತರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ರಾಜಕೀಯ ಪಕ್ಷಗಳು ಮಾಡಬೇಕು: ಬಂಡೆಪ್ಪ ಕಾಶಂಪೂರ

author img

By

Published : Apr 11, 2019, 3:37 PM IST

ರೈತರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನ ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಹಕಾರಿ ಸಚಿವ ಬಂಡೆಪ್ಪ ಖಾಶಂಪುರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು

ಶಿವಮೊಗ್ಗ: ದೇಶದ ಬೆನ್ನೆಲುಬಾಗಿರುವ ರೈತರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನ ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ದೊಡ್ಡ ದೊಡ್ಡ ಖಾಸಗಿ ಕಂಪನಿಗಳಿಗೆ ಚೌಕಿದಾರ್ ಇದ್ದಾರೆ ಹೊರತು ರೈತರಿಗಾಗಿ ಇಲ್ಲ ಎನ್ನುವ ಮೂಲಕ ಮೋದಿ ಅವರಿಗೆ ಟಾಂಗ್ ನೀಡಿದರು. ಈ ನಿಟ್ಟಿನಲ್ಲಿ ದೇಶದಲ್ಲಿ ಮೊದಲ ಬಾರಿಗೆ ಒಂದು ಲಕ್ಷದವರೆಗೆ ರೈತರ ಸಾಲಮನ್ನಾ ಮಾಡಿ ನೆರವಾಗಿದ್ದೇವೆ. ಬೀದಿಬದಿ ವ್ಯಾಪಾರಿಗಳ ಕಷ್ಟವನ್ನು ಅರಿತು ಬಡವರ ಬಂಧು ಯೋಜನೆಯನ್ನು ಜಾರಿ ಮಾಡಿದ್ದೇವೆ. ಅನೇಕ ಭಾಗ್ಯಗಳನ್ನು ನೀಡುವ ಮೂಲಕ ಉತ್ತಮ ಕಾರ್ಯಕ್ರಮಗಳನ್ನ ಜಾರಿಗೆ ತರುತ್ತಿದ್ದೇವೆ ಎಂದರು.

ಸಹಕಾರಿ ಸಚಿವ ಬಂಡೆಪ್ಪ ಖಾಶಂಪುರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಉತ್ತಮ ಪೈಪೋಟಿ ನೀಡುತ್ತಾರೆ. ಹಾಗೆಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 22 ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ. ಕುಟುಂಬ ರಾಜಕಾರಣ ದೇವೇಗೌಡರಿಗೆ ಯಾಕೆ ಸೀಮಿತ. ದೇಶದಲ್ಲಿ, ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಕುಟುಂಬ ರಾಜಕಾರಣ ಇದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮಧು ಬಂಗಾರಪ್ಪ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಿಂದಲೇ ಉತ್ತಮ ಸಂದೇಶ ನೀಡುತ್ತಾರೆ ಎಂದರು.
ಬಳಿಕ ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಯಾವುದೇ ರೈತಪರ ಯೋಜನೆಗಳು ಇಲ್ಲ. ಅದರಲ್ಲಿ ಇರುವ ಒಂದು ಉತ್ತಮ ಅಂಶ ಎಂದರೆ ಬಡ್ಡಿ ರಹಿತ ಸಾಲ ನೀಡುತ್ತೇವೆ ಎನ್ನುವ ಅಂಶ ಮಾತ್ರ. ಉಳಿದ ಯಾವ ಅಂಶವು ರೈತರ ಪರವಾಗಿಲ್ಲ ಎಂದರು. ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಿಖಿಲ್ ಕುಮಾರಸ್ವಾಮಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು.

ಶಿವಮೊಗ್ಗ: ದೇಶದ ಬೆನ್ನೆಲುಬಾಗಿರುವ ರೈತರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನ ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕಿದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ದೊಡ್ಡ ದೊಡ್ಡ ಖಾಸಗಿ ಕಂಪನಿಗಳಿಗೆ ಚೌಕಿದಾರ್ ಇದ್ದಾರೆ ಹೊರತು ರೈತರಿಗಾಗಿ ಇಲ್ಲ ಎನ್ನುವ ಮೂಲಕ ಮೋದಿ ಅವರಿಗೆ ಟಾಂಗ್ ನೀಡಿದರು. ಈ ನಿಟ್ಟಿನಲ್ಲಿ ದೇಶದಲ್ಲಿ ಮೊದಲ ಬಾರಿಗೆ ಒಂದು ಲಕ್ಷದವರೆಗೆ ರೈತರ ಸಾಲಮನ್ನಾ ಮಾಡಿ ನೆರವಾಗಿದ್ದೇವೆ. ಬೀದಿಬದಿ ವ್ಯಾಪಾರಿಗಳ ಕಷ್ಟವನ್ನು ಅರಿತು ಬಡವರ ಬಂಧು ಯೋಜನೆಯನ್ನು ಜಾರಿ ಮಾಡಿದ್ದೇವೆ. ಅನೇಕ ಭಾಗ್ಯಗಳನ್ನು ನೀಡುವ ಮೂಲಕ ಉತ್ತಮ ಕಾರ್ಯಕ್ರಮಗಳನ್ನ ಜಾರಿಗೆ ತರುತ್ತಿದ್ದೇವೆ ಎಂದರು.

ಸಹಕಾರಿ ಸಚಿವ ಬಂಡೆಪ್ಪ ಖಾಶಂಪುರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಉತ್ತಮ ಪೈಪೋಟಿ ನೀಡುತ್ತಾರೆ. ಹಾಗೆಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 22 ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ. ಕುಟುಂಬ ರಾಜಕಾರಣ ದೇವೇಗೌಡರಿಗೆ ಯಾಕೆ ಸೀಮಿತ. ದೇಶದಲ್ಲಿ, ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಕುಟುಂಬ ರಾಜಕಾರಣ ಇದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮಧು ಬಂಗಾರಪ್ಪ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಿಂದಲೇ ಉತ್ತಮ ಸಂದೇಶ ನೀಡುತ್ತಾರೆ ಎಂದರು.
ಬಳಿಕ ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಯಾವುದೇ ರೈತಪರ ಯೋಜನೆಗಳು ಇಲ್ಲ. ಅದರಲ್ಲಿ ಇರುವ ಒಂದು ಉತ್ತಮ ಅಂಶ ಎಂದರೆ ಬಡ್ಡಿ ರಹಿತ ಸಾಲ ನೀಡುತ್ತೇವೆ ಎನ್ನುವ ಅಂಶ ಮಾತ್ರ. ಉಳಿದ ಯಾವ ಅಂಶವು ರೈತರ ಪರವಾಗಿಲ್ಲ ಎಂದರು. ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಿಖಿಲ್ ಕುಮಾರಸ್ವಾಮಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು.
Intro:ಶಿವಮೊಗ್ಗ,
ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರ ರಕ್ತ ದಲ್ಲೆ ರಾಜಕೀಯ ಇದೇ ಹಾಗಾಗಿ ಅನುಭವದ ಪ್ರಶ್ನೆ ಬೇಡ ಸಹಕಾರಿ ಸಚಿವ ಬಂಡೆಪ್ಪ ಖಾಶಂಪುರ.
ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಖಾಸಗಿ ದೊಡ್ಡ ದೊಡ್ಡ ಕಂಪನಿಗಳಿಗೆ ಚೌಕಿಧಾರ್ ಇದಾರೆ ಹೋರತು ರೈತರಿಗಾಗಿ ದೇಶದಲ್ಲಿ ಯಾವ ಔಕಿಧಾರ್ ಇಲ್ಲ ಎನ್ನುವ ಮೂಲಕ ಮೋದಿ ಅವರಿಗೆ ಟಾಂಗ್ ನೀಡಿದರು.

ದೇಶದ ಬೆನ್ನೆಲುಬು ರೈತ ಅವರ ಕಷ್ಟ ಗಳಿಗೆ ಸ್ಪಂದಿಸುವ ಕಾರ್ಯವನ್ನ ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕಿದೆ ಆ ನಿಟ್ಟಿನಲ್ಲಿ ದೇಶದಲ್ಲಿ ಮೊದಲ ಬಾರಿಗೆ ರೈತರ ಒಂದು ಲಕ್ಷ ದವರೆಗಿನ ಸಾಲ ಮನ್ನಾ ಮಾಡಿ ರೈತರಿಗೆ ನೇರವಾಗಿದ್ದೆವೆ.ಬಿದಿಬದಿ ವ್ಯಾಪಾರಿಗಳ ಕಷ್ಟ ಅರಿತು ಬಡವರ ಬಂದು ಯೋಜನೆ ಜಾರಿ ಮಾಡಿದ್ದೆವೆ. ಕಾಯಕ ಯೋಜನೆ ಜಾರಿ ಮಾಡಿದ್ದೆವೆ ಹಾಗೂ ಅನೇಕ ಬಾಗ್ಯಗಳ ನೀಡುವ ಮೂಲಕ ಉತ್ತಮ ಕಾರ್ಯಕ್ರಮ ಗಳನ್ನ ಜಾರಿಗೆ ತರುತ್ತಿದ್ದೆವೆ ಎಂದರು.




Body:ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಉತ್ತಮ ಪೈಪೋಟಿ ನೀಡುತ್ತಾರೆ ಎನ್ನುವ ವಿಶ್ವಾಸ ನಮ್ಮಲ್ಲಿದೆ.
ಹಾಗೇಯೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 22ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ದೇವೆಗೌಡರಿಗೆ ಕುಟುಂಬ ರಾಜಕಾರಣ ದ ಬಗ್ಗೆ ಮಾತನಾಡುತ್ತಾರೆ. ಕುಟುಂಬ ರಾಜಕಾರಣ ದೇವೆಗೌಡರಿಗೆ ಯಾಕೆ ಸೀಮಿತ ದೇಶದಲ್ಲಿ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಕುಟುಂಬ ರಾಜಕಾರಣ ಇದೆ ಶಿವಮೊಗ್ಗ ದಲ್ಲಿ ಯಡಿಯೂರಪ್ಪ ನವರು ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.



Conclusion:ಈ ಭಾರಿಯ ಲೋಕಸಭಾ ಚುನಾವಣೆ ಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮಧುಬಂಗಾರಪ್ಪ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಿಂದಲೇ ಉತ್ತಮ ಸಂಧೇಶ ನೀಡುತ್ತಾರೆ ಎಂದರು.
ನಂತರದಲ್ಲಿ ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾತನಾಡಿದ ಅವರು ಪ್ರಣಾಳಿಕೆ ಯಲ್ಲಿ ಯಾವುದೇ ರೈತ ಪರ ಯೋಜನೆಗಳು ಇಲ್ಲ ಅದರಲ್ಲಿ ಇರುವ ಒಂದು ಉತ್ತಮ ಅಂಶ ಎಂದರೆ ಬಡ್ಡಿ ರಹಿತ ಸಾಲ ನೀಡುತ್ತೆವೆ ಎನ್ನುವ ಅಂಶ ಮಾತ್ರ ಉತ್ತಮ ವಾಗಿದೆ ಉಳಿದ ಯಾವ ಅಂಶವು ರೈತರ ಪರವಾಗಿಲ್ಲ ಎಂದರು .
ಮಂಡ್ಯ ದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವ ಪ್ರಶ್ನೆ ಗೆ ಉತ್ತರಿಸಿದ ಅವರು ನಿಖಿಲ್ ಕುಮಾರಸ್ವಾಮಿ ಅತಿಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

For All Latest Updates

TAGGED:

Shimogga
ETV Bharat Logo

Copyright © 2024 Ushodaya Enterprises Pvt. Ltd., All Rights Reserved.