ETV Bharat / state

ಶಿವಕುಮಾರ್, ನಲಪಾಡ್​ರನ್ನು ಖರ್ಗೆ ಪಕ್ಷದಿಂದ ಕಿತ್ತು ಹಾಕಬೇಕು: ಕೆ.ಎಸ್.ಈಶ್ವರಪ್ಪ

author img

By

Published : Dec 17, 2022, 6:11 PM IST

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್​ ಪಕ್ಷದ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಡಿ.ಕೆ.ಶಿವಕುಮಾರ್ ಅವ​ರನ್ನು ಮತ್ತು ನಲಪಾಡ್​ ಅವರನ್ನು ಪಕ್ಷದಿಂದ ಹೊರಹಾಕುವ ನಿರ್ಣಯ ಮಾಡಬೇಕು ಎಂದ ಈಶ್ವರಪ್ಪ ಹೇಳಿದರು.

kn_smg_01_bjpprotest
ಶಿವಮೊಗ್ಗದಲ್ಲಿ ಬಿಜೆಪಿಯ ಪ್ರತಿಭಟನೆ
ಶಿವಮೊಗ್ಗದಲ್ಲಿ ಬಿಜೆಪಿಯ ಪ್ರತಿಭಟನೆ

ಶಿವಮೊಗ್ಗ: ಭಯೋತ್ಪಾದಕರ ಪರವಾಗಿ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒತ್ತಾಯ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಬಿಲಾವಾಲ್​ ಭೂಟ್ಟೋ ಟೀಕಿಸಿರುವ ವಿಚಾರವಾಗಿ ಹಾಗೂ ಡಿ.ಕೆ.ಶಿವಕುಮಾರ್ ಕುಕ್ಕರ್​ ಬಾಂಬ್​ ಬ್ಲಾಸ್ಟ್​​ ವಿಚಾರವಾಗಿ ನೀಡಿದ್ದ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೂರ್ಚಾದಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ ಪಾಕಿಸ್ತಾನದ ಬಿಲಾವಾಲ್​ ಭೂಟ್ಟೋ ಪ್ರಪಂಚದ ಮುಂದೆ ಮೋದಿ ಅವರಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಕ್ಕರ್ ಬ್ಲಾಸ್ಟ ಮಾಡಿದ ಉಗ್ರನ ಪರ ಮಾತನಾಡುತ್ತಾರೆ. ಕುಕ್ಕರ್ ಬ್ಲಾಸ್ಟ ಮಾಡಿದವನು ಭಯೋತ್ಪಾದಕ ಅಲ್ಲ ಎಂದು ಹೇಳುತ್ತಿದ್ದಾರೆ. ಆತನ ಮೇಲೆ ಅನೇಕ ಪ್ರಕರಣಗಳಿವೆ, ಆದರೂ ಆತನಿಗೆ ಶಿವಕುಮಾರ್ ಬೆಂಬಲವಾಗಿ ಮಾತನಾಡುವುದು ಎಷ್ಟು ಸರಿ. ಈ ಹಿಂದೆ ಕೇಂದ್ರ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದಾಗ ಸಹ ಇದೇ ರೀತಿಯ ಹೇಳಿಕೆಯನ್ನ ಅವರು ನೀಡಿದ್ದರು ಎಂದರು.

ಡಿ.19 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ.ಶಿವಕುಮಾರ್ ಅವ​ರನ್ನು ಪಕ್ಷದಿಂದ ಹೊರಹಾಕುವ ನಿರ್ಣಯ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಅವರಿಗೆ ಮನವಿ ಮಾಡಿದರು. ಖರ್ಗೆ ಅವರು ಡಿಕೆಶಿ ಹಾಗೂ ನಲಪಾಡ್​ರನ್ನು ಪಕ್ಷದಲ್ಲಿಯೇ ಉಳಿಸಿಕೊಂಡ್ರೆ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಪಕ್ಷವಾಗುತ್ತದೆ. ಪಿಎಫ್ಐ ರೀತಿ ಕಾಂಗ್ರೆಸ್ ಪಕ್ಷ ಸಹ ಬ್ಯಾನ್ ಮಾಡುವ ಸ್ಥಿತಿ ಅದಷ್ಟು ಬೇಗ ಬರುತ್ತದೆ ಎಂದರು.

ಇದನ್ನೂ ಓದಿ:
ಪಕ್ಷ ಬೆಳೆಸಿದವರನ್ನೇ ಹೊರ ಹಾಕುವುದು ಬಿಜೆಪಿ ಸಂಸ್ಕೃತಿ : ಶಿವರಾಜ ತಂಗಡಗಿ

ಶಿವಮೊಗ್ಗದಲ್ಲಿ ಬಿಜೆಪಿಯ ಪ್ರತಿಭಟನೆ

ಶಿವಮೊಗ್ಗ: ಭಯೋತ್ಪಾದಕರ ಪರವಾಗಿ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒತ್ತಾಯ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಬಿಲಾವಾಲ್​ ಭೂಟ್ಟೋ ಟೀಕಿಸಿರುವ ವಿಚಾರವಾಗಿ ಹಾಗೂ ಡಿ.ಕೆ.ಶಿವಕುಮಾರ್ ಕುಕ್ಕರ್​ ಬಾಂಬ್​ ಬ್ಲಾಸ್ಟ್​​ ವಿಚಾರವಾಗಿ ನೀಡಿದ್ದ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೂರ್ಚಾದಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ ಪಾಕಿಸ್ತಾನದ ಬಿಲಾವಾಲ್​ ಭೂಟ್ಟೋ ಪ್ರಪಂಚದ ಮುಂದೆ ಮೋದಿ ಅವರಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕುಕ್ಕರ್ ಬ್ಲಾಸ್ಟ ಮಾಡಿದ ಉಗ್ರನ ಪರ ಮಾತನಾಡುತ್ತಾರೆ. ಕುಕ್ಕರ್ ಬ್ಲಾಸ್ಟ ಮಾಡಿದವನು ಭಯೋತ್ಪಾದಕ ಅಲ್ಲ ಎಂದು ಹೇಳುತ್ತಿದ್ದಾರೆ. ಆತನ ಮೇಲೆ ಅನೇಕ ಪ್ರಕರಣಗಳಿವೆ, ಆದರೂ ಆತನಿಗೆ ಶಿವಕುಮಾರ್ ಬೆಂಬಲವಾಗಿ ಮಾತನಾಡುವುದು ಎಷ್ಟು ಸರಿ. ಈ ಹಿಂದೆ ಕೇಂದ್ರ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದಾಗ ಸಹ ಇದೇ ರೀತಿಯ ಹೇಳಿಕೆಯನ್ನ ಅವರು ನೀಡಿದ್ದರು ಎಂದರು.

ಡಿ.19 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಡಿ.ಕೆ.ಶಿವಕುಮಾರ್ ಅವ​ರನ್ನು ಪಕ್ಷದಿಂದ ಹೊರಹಾಕುವ ನಿರ್ಣಯ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಅವರಿಗೆ ಮನವಿ ಮಾಡಿದರು. ಖರ್ಗೆ ಅವರು ಡಿಕೆಶಿ ಹಾಗೂ ನಲಪಾಡ್​ರನ್ನು ಪಕ್ಷದಲ್ಲಿಯೇ ಉಳಿಸಿಕೊಂಡ್ರೆ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಪಕ್ಷವಾಗುತ್ತದೆ. ಪಿಎಫ್ಐ ರೀತಿ ಕಾಂಗ್ರೆಸ್ ಪಕ್ಷ ಸಹ ಬ್ಯಾನ್ ಮಾಡುವ ಸ್ಥಿತಿ ಅದಷ್ಟು ಬೇಗ ಬರುತ್ತದೆ ಎಂದರು.

ಇದನ್ನೂ ಓದಿ:
ಪಕ್ಷ ಬೆಳೆಸಿದವರನ್ನೇ ಹೊರ ಹಾಕುವುದು ಬಿಜೆಪಿ ಸಂಸ್ಕೃತಿ : ಶಿವರಾಜ ತಂಗಡಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.