ETV Bharat / state

ತೀರ್ಥಹಳ್ಳಿ ಎಪಿಎಂಸಿ ಗದ್ದುಗೆ ಏರಿದ ಕಮಲ ಪಡೆ

author img

By

Published : Jun 26, 2020, 5:06 PM IST

ಹಾಲಿ ಶಾಸಕ ಆರಗ ಜ್ಞಾ‌ನೇಂದ್ರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರವರ ನಡುವಿನ ಪ್ರತಿಷ್ಠೆಯ ಕಣವಾಗಿದ್ದ ತೀರ್ಥಹಳ್ಳಿ ಎಪಿಎಂಸಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ.

BJP candidate won in thirthahalli apmc prasident election
BJP candidate won in thirthahalli apmc prasident election

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಾಲೆಕೊಪ್ಪ‌ ರಾಮಚಂದ್ರ ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯಲ್ಲಿ ಕಾಂಗ್ರೆಸ್ ಜೊತೆಗಿದ್ದ ಯಲ್ಲಪ್ಪ ಬಿಜೆಪಿಗೆ ಬೆಂಬಲಿಸಿ ಪಕ್ಷಾಂತರಗೊಂಡು ಉಪಾಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ತೀರ್ಥಹಳ್ಳಿಯಲ್ಲಿ ಕಮಲ ಆಪರೇಷನ್ ಯಶಸ್ವಿಯಾಗಿದ್ದು ಅಧಿಕಾರದ ಗದ್ದುಗೆಗೆ ಏರಿದೆ.

ಇನ್ನೂ ಎಪಿಎಂಸಿ ಚುನಾವಣೆಯನ್ನು ಹಾಲಿ ಶಾಸಕ ಆರಗ ಜ್ಞಾ‌ನೇಂದ್ರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರವರ ನಡುವೆ ಪ್ರತಿಷ್ಠೆಯಾಗಿತ್ತು. ತೀರ್ಥಹಳ್ಳಿ ಎಪಿಎಂಸಿಯಲ್ಲಿ ಬಿಜೆಪಿ 10 ಹಾಗೂ ಕಾಂಗ್ರೆಸ್ 7 ಸದಸ್ಯ ಬಲವನ್ನು ಹೊಂದಿದೆ.

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಾಲೆಕೊಪ್ಪ‌ ರಾಮಚಂದ್ರ ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯಲ್ಲಿ ಕಾಂಗ್ರೆಸ್ ಜೊತೆಗಿದ್ದ ಯಲ್ಲಪ್ಪ ಬಿಜೆಪಿಗೆ ಬೆಂಬಲಿಸಿ ಪಕ್ಷಾಂತರಗೊಂಡು ಉಪಾಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ತೀರ್ಥಹಳ್ಳಿಯಲ್ಲಿ ಕಮಲ ಆಪರೇಷನ್ ಯಶಸ್ವಿಯಾಗಿದ್ದು ಅಧಿಕಾರದ ಗದ್ದುಗೆಗೆ ಏರಿದೆ.

ಇನ್ನೂ ಎಪಿಎಂಸಿ ಚುನಾವಣೆಯನ್ನು ಹಾಲಿ ಶಾಸಕ ಆರಗ ಜ್ಞಾ‌ನೇಂದ್ರ ಹಾಗೂ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರವರ ನಡುವೆ ಪ್ರತಿಷ್ಠೆಯಾಗಿತ್ತು. ತೀರ್ಥಹಳ್ಳಿ ಎಪಿಎಂಸಿಯಲ್ಲಿ ಬಿಜೆಪಿ 10 ಹಾಗೂ ಕಾಂಗ್ರೆಸ್ 7 ಸದಸ್ಯ ಬಲವನ್ನು ಹೊಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.