ಶಿವಮೊಗ್ಗ : ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮಾಳೂರು ಠಾಣಾ ವ್ಯಾಪ್ತಿಯ ಮಂಡಗದ್ದೆಯ ಬಳಿ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಚಲಿಸುತ್ತಿದ್ದ ಬಸ್ಗೆ ಎದುರುಗಡೆಯಿಂದ ಬಂದ ಬಜಾಜ್ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಉಸ್ಮಾನ್ (19) ಸ್ಥಳದಲ್ಲಿಯೇ ಅಸುನೀಗಿದ್ದಾನೆ.
ಈ ಕುರಿತು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.