ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಹಲವು ಕಡೆ ಕಾರ್ಯಾಚರಣೆ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳುತ್ತಿದ್ದರೂ ಸಹ ಇನ್ನೂ ಕೂಡ ಪ್ಲಾಸ್ಟಿಕ್ ಮಾರಾಟ ಮಾತ್ರ ನಿಂತಿಲ್ಲ.
ಇದಕ್ಕೆ ಉದಾಹರಣೆ ಎಂಬಂತೆ ಇಂದು ಪಾಲಿಕೆಯ ಪರಿಸರ ವಿಭಾಗದ ಅಧಿಕಾರಿಗಳು ನಗರದ ಗಾಂಧಿ ಬಜಾರ್ನಲ್ಲಿನ ಅಂಗಡಿಯೊಂದರ ಮೇಲೆ ದಾಳಿ ನಡೆಸಿ 200 ಕೆ.ಜಿಯಷ್ಟು ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ. ಗಾಂಧಿ ಬಜಾರ್ನ ಚಾರ್ ಭುಜ್ ಅಂಗಡಿಯಲ್ಲಿ ವಿವಿಧ ಗಾತ್ರದ ಪ್ಲಾಸ್ಟಿಕ್ ಕವರ್, ಲೋಟ ಸೇರಿದಂತೆ ಒಟ್ಟು 200 ಕೆ.ಜಿಯಷ್ಟು ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.