ETV Bharat / state

ಶಿವಮೊಗ್ಗದ ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ.. - ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ

ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿಯಾಗಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಘೋಷಿಸಿದರು.

ಶಿವಮೊಗ್ಗದ ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ
author img

By

Published : Aug 31, 2019, 5:11 PM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಸಿಎಂ ಬಿ ಎಸ್ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ..

ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಭಾಗಿಯಾಗಿ ಸಿಎಂ ಈ ಘೋಷಣೆ ಮಾಡಿದರು. ಇನ್ನು ಮುಂದೆ ಈಶ್ವರಪ್ಪ ಜಿಲ್ಲೆಯ ಎಲ್ಲಾ ಸಭೆಗಳನ್ನು ನಡೆಸಲಿದ್ದು, ಅವರಿಗೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.

ಇದೇ ವೇಳೆ ನೆರೆ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರೈತರ ಮನೆಗಳಿಗೆ ಕಡ್ಡಾಯವಾಗಿ ಪರಿಹಾರ ತಲುಪಿಸಬೇಕು. ಅವರಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿರು. ಶಿವಮೊಗ್ಗ ನಗರದ ದಸರಾ ಆಚರಣೆಗೆ ಅನುಕೂಲವಾಗಲು ಹಳೇ ಜೈಲು ಆವರಣವನ್ನು ಸ್ವಚ್ಛ ಮಾಡಲು ಮಹಾನಗರ ಪಾಲಿಕೆಯ ಉಪ ಮೇಯರ್ ಚನ್ನಬಸಪ್ಪನವರು 2 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಡಿಸಿ, ‌ಎಸ್ಪಿ, ಜಿಪಂ ಸಿಇಒ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಸಿಎಂ ಬಿ ಎಸ್ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ..

ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಭಾಗಿಯಾಗಿ ಸಿಎಂ ಈ ಘೋಷಣೆ ಮಾಡಿದರು. ಇನ್ನು ಮುಂದೆ ಈಶ್ವರಪ್ಪ ಜಿಲ್ಲೆಯ ಎಲ್ಲಾ ಸಭೆಗಳನ್ನು ನಡೆಸಲಿದ್ದು, ಅವರಿಗೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.

ಇದೇ ವೇಳೆ ನೆರೆ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರೈತರ ಮನೆಗಳಿಗೆ ಕಡ್ಡಾಯವಾಗಿ ಪರಿಹಾರ ತಲುಪಿಸಬೇಕು. ಅವರಿಗೆ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿರು. ಶಿವಮೊಗ್ಗ ನಗರದ ದಸರಾ ಆಚರಣೆಗೆ ಅನುಕೂಲವಾಗಲು ಹಳೇ ಜೈಲು ಆವರಣವನ್ನು ಸ್ವಚ್ಛ ಮಾಡಲು ಮಹಾನಗರ ಪಾಲಿಕೆಯ ಉಪ ಮೇಯರ್ ಚನ್ನಬಸಪ್ಪನವರು 2 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಡಿಸಿ, ‌ಎಸ್ಪಿ, ಜಿಪಂ ಸಿಇಒ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

Intro:ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪರನ್ನು ಸಿಎಂ ಬಿ.ಎಸ್.ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಭಾಗಿಯಾಗಿ ಸಿಎಂ ಘೋಷಣೆ ಮಾಡಿದರು. ಇನ್ನೂ ಮುಂದೆ ಜಿಲ್ಲೆಯ ಎಲ್ಲಾ ಸಭೆಗಳನ್ನು ನಡೆಸಲಿದ್ದಾರೆ. ಇವರಿಗೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.


Body:ನೆರೆ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಂಡರು. ರೈತರ ಮನೆಗಳಿಗೆ ಕಡ್ಡಾಯವಾಗಿ ಪರಿಹಾರ ತಲುಪಿಸಬೇಕು ಎಂದು ಸೂಚಿಸಿದರು. ರೈತರಿಗೆ ಅನ್ಯಾಯವಾಗದಂತೆ ಕ್ರಮ ತೆಗೆದು ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರು.


Conclusion:ಶಿವಮೊಗ್ಗ ನಗರದ ದಸರಾ ಆಚರಣೆಗೆ ಅನುಕೂಲವಾಗಲು ಹಳೇ ಜೈಲು ಆವರಣವನ್ನು ಸ್ವಚ್ಚ ಮಾಡಲು ಮಹಾನಗರ ಪಾಲಿಕೆಯ ಉಪ ಮೇಯರ್ ಚನ್ನಬಸಪ್ಪನವರು ಸ್ವಲ್ಪವಾದ್ರೂ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿ ಕೊಂಡರು. ಈ ವೇಳೆ ಸಿಎಂ ಯಡಿಯೂರಪ್ಪನವರು ಜಿಲ್ಲಾಧಿಕಾರಿಗಳಿಗೆ ಎರಡು ಕೋಟಿ ರೂ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲೆ ತಿಳಿಸಿದರು. ಈ ವೇಳೆ ಈಶ್ವರಪ್ಪನವರು ಸಿಎಂ ರವರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಡಿಸಿ,‌ಎಸ್ಪಿ, ಜಿ.ಪಂ ಸಿಇಓ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಬೈಟ್: ಬಿ.ಎಸ್.ಯಡಿಯೂರಪ್ಪ. ಸಿಎಂ.

ಕಿರಣ್ ಕುಮಾರ್. ಶಿವಮೊಗ್ಗ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.