ETV Bharat / state

ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ ಬಣ್ಣ.. ಜಿ. ಪಂ​ ಉಪ ಕಾರ್ಯದರ್ಶಿಗೆ ವಿದ್ಯಾರ್ಥಿಗಳಿಂದ ಸನ್ಮಾನ - Painting to government school in shivamogga

ಬೆಳಗ್ಗೆಯೇ ಶಾಲೆಗೆ ಆಗಮಿಸಿದ ಟಿ. ಮಲ್ಲಿಕಾರ್ಜುನ್ ಹಾಗೂ ಮತ್ತವರ ತಂಡವು ಸೇವಾ ಕಾರ್ಯ ಆರಂಭಿಸಿತು. ಕಟ್ಟಡಕ್ಕೆ ಬಣ್ಣ ಹಚ್ಚಿತು. ಶಾಲೆ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು, ಶಾಲಾ ವಿದ್ಯಾರ್ಥಿಗಳಿಗೆ ಅವುಗಳ ರಕ್ಷಣೆಯ ಜವಾಬ್ದಾರಿ ವಹಿಸಿತು. ನಂತರ ಶಾಲಾ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಉಪ ಕಾರ್ಯದರ್ಶಿಗಳನ್ನು ಆತ್ಮೀಯವಾಗಿ ಸನ್ಮಾನಿಸಿದರು.

district-panchayat-deputy-secretary-honoured-by-students-at-shivamogga
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗೆ ಸನ್ಮಾನಿಸಿದ ವಿದ್ಯಾರ್ಥಿಗಳು
author img

By

Published : Mar 21, 2022, 9:25 PM IST

ಶಿವಮೊಗ್ಗ: ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಂತ ಹಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಕಟ್ಟಡಕ್ಕೆ ಬಣ್ಣ ಬಳಿದುಕೊಟ್ಟ ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿ ಟಿ. ಮಲ್ಲಿಕಾರ್ಜುನ್​ ಮತ್ತವರ ತಂಡಕ್ಕೆ ಶಾಲಾ ವಿದ್ಯಾರ್ಥಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.

ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿಗೆ ಸನ್ಮಾನಿಸಿದ ವಿದ್ಯಾರ್ಥಿಗಳು

ಬೆಳಗ್ಗೆಯೇ ಶಾಲೆಗೆ ಆಗಮಿಸಿದ ಟಿ. ಮಲ್ಲಿಕಾರ್ಜುನ್ ಹಾಗೂ ಮತ್ತವರ ತಂಡವು ಸೇವಾ ಕಾರ್ಯ ಆರಂಭಿಸಿತು. ಕಟ್ಟಡಕ್ಕೆ ಬಣ್ಣ ಹಚ್ಚಿತು. ಶಾಲೆ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು, ಶಾಲಾ ವಿದ್ಯಾರ್ಥಿಗಳಿಗೆ ಅವುಗಳ ರಕ್ಷಣೆಯ ಜವಾಬ್ದಾರಿ ವಹಿಸಿತು. ನಂತರ ಶಾಲಾ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಉಪ ಕಾರ್ಯದರ್ಶಿಯನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಹಾಗೆಯೇ, ಸೇವಾ ಕಾರ್ಯದಲ್ಲಿ ಭಾಗಿಯಾಗಿದ್ದ ಅಬ್ಬಲಗೆರೆ ಗ್ರಾಮ ಪಂಚಾಯತ್​ ಕಾರ್ಯದರ್ಶಿ ಶಿವಾನಾಯ್ಕ್, ಜಿ.ಪಂನ ಅನೂಪ್, ಗಣೇಶ್, ಸಂತೋಷ್, ಗೌರಿಶಂಕರ್, ಗ್ರಾ.ಪಂ ನೌಕರರಾದ ಕುಮಾರ್, ಮೋಹನ್, ನರಸಿಂಹರವರಿಗೆ ಹೂವು ನೀಡಿ ವಿದ್ಯಾರ್ಥಿಗಳು ಧನ್ಯವಾದ ಅರ್ಪಿಸಿದರು.

ಸಮಾಜ ಸೇವೆ: ಕೆ.ಎ.ಎಸ್ ಅಧಿಕಾರಿಯಾದ ಟಿ. ಮಲ್ಲಿಕಾರ್ಜುನ್​ ಮತ್ತವರ ತಂಡವು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಂತ ಹಣದಲ್ಲಿ ಪ್ರತಿ ಭಾನುವಾರ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಹಾಗೂ ಕಟ್ಟಡಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುತ್ತಿದೆ. ಸುಣ್ಣ ಬಣ್ಣ ಬಳಿಯುತ್ತದೆ. ಜೊತೆಗೆ ಸಾರ್ವಜನಿಕ ಕಟ್ಟಡಗಳಲ್ಲಿನ ಕುಂದುಕೊರತೆ ಬಗೆಹರಿಸಿಕೊಂಡು ಬರುತ್ತಿದೆ. ಟಿ.ಮಲ್ಲಿಕಾರ್ಜುನ್ ಅವರ ಜನಪರ ಕಾಳಜಿಯು ಇಡೀ ರಾಜ್ಯದ ಗಮನ ಸೆಳೆದಿದೆ. ಇವರ ಸೇವೆ ಗಮನಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಓದಿ: ಎಲೋ, ಎಲೋ ಕೌರವೇಷ ಇದೇನಪ್ಪಾ ಹೊಸ ವೇಷ.. ಬಾದಾಮಿಯೊಳಗೆ ಸಚಿವ ಬಿಸಿ ಪಾಟೀಲ್ 'ಗರಡಿ' ಪಟ್ಟು..

ಶಿವಮೊಗ್ಗ: ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಂತ ಹಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಕಟ್ಟಡಕ್ಕೆ ಬಣ್ಣ ಬಳಿದುಕೊಟ್ಟ ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿ ಟಿ. ಮಲ್ಲಿಕಾರ್ಜುನ್​ ಮತ್ತವರ ತಂಡಕ್ಕೆ ಶಾಲಾ ವಿದ್ಯಾರ್ಥಿಗಳು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.

ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿಗೆ ಸನ್ಮಾನಿಸಿದ ವಿದ್ಯಾರ್ಥಿಗಳು

ಬೆಳಗ್ಗೆಯೇ ಶಾಲೆಗೆ ಆಗಮಿಸಿದ ಟಿ. ಮಲ್ಲಿಕಾರ್ಜುನ್ ಹಾಗೂ ಮತ್ತವರ ತಂಡವು ಸೇವಾ ಕಾರ್ಯ ಆರಂಭಿಸಿತು. ಕಟ್ಟಡಕ್ಕೆ ಬಣ್ಣ ಹಚ್ಚಿತು. ಶಾಲೆ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು, ಶಾಲಾ ವಿದ್ಯಾರ್ಥಿಗಳಿಗೆ ಅವುಗಳ ರಕ್ಷಣೆಯ ಜವಾಬ್ದಾರಿ ವಹಿಸಿತು. ನಂತರ ಶಾಲಾ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಉಪ ಕಾರ್ಯದರ್ಶಿಯನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಹಾಗೆಯೇ, ಸೇವಾ ಕಾರ್ಯದಲ್ಲಿ ಭಾಗಿಯಾಗಿದ್ದ ಅಬ್ಬಲಗೆರೆ ಗ್ರಾಮ ಪಂಚಾಯತ್​ ಕಾರ್ಯದರ್ಶಿ ಶಿವಾನಾಯ್ಕ್, ಜಿ.ಪಂನ ಅನೂಪ್, ಗಣೇಶ್, ಸಂತೋಷ್, ಗೌರಿಶಂಕರ್, ಗ್ರಾ.ಪಂ ನೌಕರರಾದ ಕುಮಾರ್, ಮೋಹನ್, ನರಸಿಂಹರವರಿಗೆ ಹೂವು ನೀಡಿ ವಿದ್ಯಾರ್ಥಿಗಳು ಧನ್ಯವಾದ ಅರ್ಪಿಸಿದರು.

ಸಮಾಜ ಸೇವೆ: ಕೆ.ಎ.ಎಸ್ ಅಧಿಕಾರಿಯಾದ ಟಿ. ಮಲ್ಲಿಕಾರ್ಜುನ್​ ಮತ್ತವರ ತಂಡವು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಂತ ಹಣದಲ್ಲಿ ಪ್ರತಿ ಭಾನುವಾರ ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಹಾಗೂ ಕಟ್ಟಡಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುತ್ತಿದೆ. ಸುಣ್ಣ ಬಣ್ಣ ಬಳಿಯುತ್ತದೆ. ಜೊತೆಗೆ ಸಾರ್ವಜನಿಕ ಕಟ್ಟಡಗಳಲ್ಲಿನ ಕುಂದುಕೊರತೆ ಬಗೆಹರಿಸಿಕೊಂಡು ಬರುತ್ತಿದೆ. ಟಿ.ಮಲ್ಲಿಕಾರ್ಜುನ್ ಅವರ ಜನಪರ ಕಾಳಜಿಯು ಇಡೀ ರಾಜ್ಯದ ಗಮನ ಸೆಳೆದಿದೆ. ಇವರ ಸೇವೆ ಗಮನಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಓದಿ: ಎಲೋ, ಎಲೋ ಕೌರವೇಷ ಇದೇನಪ್ಪಾ ಹೊಸ ವೇಷ.. ಬಾದಾಮಿಯೊಳಗೆ ಸಚಿವ ಬಿಸಿ ಪಾಟೀಲ್ 'ಗರಡಿ' ಪಟ್ಟು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.