ETV Bharat / state

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ - Shimoga latest news

ಇಂದು ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪನವರು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದಿದ್ದು ಜನರ ಕಷ್ಟ ನೋಡಲಾರದೆ. ಇದಕ್ಕೆ ರಾಜೀನಾಮೆ ನೀಡಿ ಎಂದು ಸಿದ್ದರಾಮಯ್ಯ ಹೇಳುವುದು ಸರಿಯಲ್ಲ. ನಿಮ್ಮ ಪಕ್ಷವನ್ನು ಮೊದಲು ನೀವು ನೋಡಿಕೊಳ್ಳಿ ಎಂದು ಹರಿಹಾಯ್ದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ
author img

By

Published : Sep 30, 2019, 11:13 PM IST

Updated : Sep 30, 2019, 11:57 PM IST

ಶಿವಮೊಗ್ಗ: ಯಡಿಯೂರಪ್ಪನವರು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದಿದಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಡಿಯೂರಪ್ಪನವರು ತಂತಿ ಮೇಲಿನ ನಡಿಗೆ ನನ್ನದು ಎಂದಿದ್ದು ಜನರ ಕಷ್ಟ ನೋಡಿಯೇ ಹೊರತು, ಬೇರಾವುದಕ್ಕೂ ಅಲ್ಲ ಎಂದು ಟಗರು ವಿರುದ್ದ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಸರ್ಕಾರದ ಆಡಳಿತ ನೋಡಲಾಗದೆ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಯಡಿಯೂರಪ್ಪನವರು ರಾಜೀನಾಮೆ ಕೊಟ್ಟರೆ ನೀವು ಸಿಎಂ ಆಗಬಹುದುಬ ಎಂಬ ಆಸೆ ಬಿಡಿ. ನಿಮಗೆ ವಿರೋಧ ಪಕ್ಷದ ನಾಯಕ ಸ್ಥಾನವೂ ದೊರೆತಿಲ್ಲ. ಯಡಿಯೂರಪ್ಪನವರು ತಂತಿ ಮೇಲೆ ನಡೀತಿದ್ರೆ ನಿಮ್ಮ ಕಾಂಗ್ರೆಸ್​ ಪಕ್ಷದ ಶಾಸಕರು ಆ ತಂತಿ ಬೇಲಿಯನ್ನು ಹಾರಿ ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ನಿಮ್ಮ ಪಕ್ಷವನ್ನು ಮೊದಲು ನೀವು ನೋಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ದ ಕೆಂಡಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಮಾಧ್ಯಮಗಳ ಮೇಲೆ ಈಶ್ವರಪ್ಪ ಗರಂ: ಯುಟಿ ಖಾದರ್ ವಿಚಾರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದೆ ಅಷ್ಟೇ.. ಸಂಘಟನೆಗಿಂತ ದೊಡ್ಡದು ಯಾವುದು ಇಲ್ಲ ಎಂದು ಹೇಳುವಾಗ. ಯಡಿಯೂರಪ್ಪನವರ ಹೆಸರನ್ನು ಹೇಳಿದ್ದು ನಿಜ. ಆದರೆ, ಸಿದ್ದರಾಮಯ್ಯ, ಕುಮಾರಸ್ವಾಮಿ ಹೆಸರು ಬಿಟ್ಟು. ಯಡಿಯೂರಪ್ಪನವರನ್ನು ಮಾತ್ರ ಮಾಧ್ಯಮಗಳು ಸುದ್ದಿ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಹಾಗೂ ಯಡಿಯೂರಪ್ಪನವರನ್ನು ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಚುನಾವಣೆ ನಡೆದರೆ 150ಕ್ಕೂ ಅಧಿಕ ಸ್ಥಾನ ಬಿಜೆಪಿ ಗೆಲ್ಲಲಿದೆ. ಬಿಎಸ್​ವೈ ಹಾಗೂ ಸಂಘಟನೆ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

ಶಿವಮೊಗ್ಗ: ಯಡಿಯೂರಪ್ಪನವರು ತಂತಿ ಮೇಲೆ ನಡೆಯುತ್ತಿದ್ದೇನೆ ಎಂದಿದಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಡಿಯೂರಪ್ಪನವರು ತಂತಿ ಮೇಲಿನ ನಡಿಗೆ ನನ್ನದು ಎಂದಿದ್ದು ಜನರ ಕಷ್ಟ ನೋಡಿಯೇ ಹೊರತು, ಬೇರಾವುದಕ್ಕೂ ಅಲ್ಲ ಎಂದು ಟಗರು ವಿರುದ್ದ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಸರ್ಕಾರದ ಆಡಳಿತ ನೋಡಲಾಗದೆ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಯಡಿಯೂರಪ್ಪನವರು ರಾಜೀನಾಮೆ ಕೊಟ್ಟರೆ ನೀವು ಸಿಎಂ ಆಗಬಹುದುಬ ಎಂಬ ಆಸೆ ಬಿಡಿ. ನಿಮಗೆ ವಿರೋಧ ಪಕ್ಷದ ನಾಯಕ ಸ್ಥಾನವೂ ದೊರೆತಿಲ್ಲ. ಯಡಿಯೂರಪ್ಪನವರು ತಂತಿ ಮೇಲೆ ನಡೀತಿದ್ರೆ ನಿಮ್ಮ ಕಾಂಗ್ರೆಸ್​ ಪಕ್ಷದ ಶಾಸಕರು ಆ ತಂತಿ ಬೇಲಿಯನ್ನು ಹಾರಿ ಬಿಜೆಪಿಗೆ ಬರಲು ಸಿದ್ಧರಿದ್ದಾರೆ. ನಿಮ್ಮ ಪಕ್ಷವನ್ನು ಮೊದಲು ನೀವು ನೋಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ದ ಕೆಂಡಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಮಾಧ್ಯಮಗಳ ಮೇಲೆ ಈಶ್ವರಪ್ಪ ಗರಂ: ಯುಟಿ ಖಾದರ್ ವಿಚಾರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದೆ ಅಷ್ಟೇ.. ಸಂಘಟನೆಗಿಂತ ದೊಡ್ಡದು ಯಾವುದು ಇಲ್ಲ ಎಂದು ಹೇಳುವಾಗ. ಯಡಿಯೂರಪ್ಪನವರ ಹೆಸರನ್ನು ಹೇಳಿದ್ದು ನಿಜ. ಆದರೆ, ಸಿದ್ದರಾಮಯ್ಯ, ಕುಮಾರಸ್ವಾಮಿ ಹೆಸರು ಬಿಟ್ಟು. ಯಡಿಯೂರಪ್ಪನವರನ್ನು ಮಾತ್ರ ಮಾಧ್ಯಮಗಳು ಸುದ್ದಿ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಹಾಗೂ ಯಡಿಯೂರಪ್ಪನವರನ್ನು ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಚುನಾವಣೆ ನಡೆದರೆ 150ಕ್ಕೂ ಅಧಿಕ ಸ್ಥಾನ ಬಿಜೆಪಿ ಗೆಲ್ಲಲಿದೆ. ಬಿಎಸ್​ವೈ ಹಾಗೂ ಸಂಘಟನೆ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

Intro:ನಾನು ಶಿಕಾರಿಪುರಕ್ಕೆ ಮಾತ್ರ ಸಿಎಂ ಅಲ್ಲ, ನಾನು ರಾಜ್ಯಕ್ಕೆ ಸಿಎಂ: ಬಿ.ಎಸ್.ಯಡಿಯೂರಪ್ಪ.

ಶಿವಮೊಗ್ಗ: ನಾನು ಶಿಕಾರಿಪುರಕ್ಕೆ ಮಾತ್ರ ಅಲ್ಲ ರಾಜ್ಯಕ್ಕೆ ಸಿಎಂ ಆಗಿದ್ದೆನೆ.‌ಇದರಿಂದ ಅಹವಾಲು ನೀಡುವವರು ನೋಡಿ ಅಹವಾಲು ನೀಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಕ್ಷೇತ್ರದ ಜನತೆಗೆ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ. ಇಂದು ಸ್ವ ಕ್ಷೇತ್ರ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ , ರಾಜ್ಯದಲ್ಲಿ ನೆರೆ ಬಂದು ಸಾಕಷ್ಟು ಹಾನಿಯಾಗಿದ್ದು, ಹಲವರು ಜನ ಮನೆ, ಬೆಳೆ ಕಳೆದುಕೊಂಡಿದ್ದಾರೆ. ಅವರಿಗೆ ನಾವು ಮೊದಲ ಆದ್ಯತೆ ನೀಡಬೇಕಿದೆ. ಇದರಿಂದ ನಿಮ್ಮ ಮನವಿಗಳಿಗೆ ಮುಂದಿನ ಫೆಬ್ರವರಿ ಬಜೆಟ್ ನಲ್ಲಿ ಹಣ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಹಣ ನೀಡಲು ಸಾಧ್ಯವಿಲ್ಲ ಎಂದರು.Body:ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಹಣ ನೀಡಲು ಸಾಧ್ಯವಿಲ್ಲ ಎಂದರು.ಜನತಾ ದರ್ಶನದಲ್ಲಿ ನೀಡುವ ಅರ್ಜಿಗಳಿಗೆ ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು. ಅತಿವೃಷ್ಟಿಯಿಂದ ಹಾನಿಯಾಗಿದೆ ಹೀಗಾಗಿ ಅಭಿವೃದ್ಧಿ ಕಾಮಗಾರಿಗಳಿಗೆ 36 ಸಾವಿರ ಕೋಟಿ ರೂಪಾಯಿ ಹೊಂದಿಸಬೇಕಾಗಿದೆ. ಹೀಗಾಗಿ ಇಂದು ಅರ್ಜಿ ಸಲ್ಲಿಸಿದವರಿಗೆ ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಿ ಕೆಲಸ ಮಾಡಿಕೊಡಲಾಗುವುದು.
ಮುಂದಿನ ಒಂದು ವರ್ಷದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳು ಆರಂಭವಾಗಲಿವೆ. ಈ ಬಗ್ಗೆ ಈಗಾಗಲೇ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಕ್ಟೋಬರ್ 3 ರ ಕ್ಯಾಬಿನೆಟ್ ಸಭೆ ಮುಗಿಸಿ, ಮತ್ತೇ ಪ್ರವಾಸ ಮಾಡುತ್ತೇನೆ. ನೆರೆಪೀಡಿತ ಭಾಗದಲ್ಲಿ ನಾಲ್ಕು ದಿನ ಮತ್ತೇ ಪ್ರವಾಸ ಮಾಡಲಿದ್ದೇನೆ. ಅಲ್ಲಿನ ಜನರು ಹಾಗೂ ಅಧಿಕಾರಿಗಳೋಂದಿಗೆ ಮತ್ತೇ ಸ್ಥಳಗಳ ಪರಿಶೀಲನೆ ಮಾಡುತ್ತೇನೆ. ನಾನು ಎಲ್ಲಾ ಜಿಲ್ಲೆ- ತಾಲೂಕುಗಳ ಅಭಿವೃದ್ಧಿಗೆ ಕೆಲಸ ಮಾಡಬೇಕಿದೆ. ನೀರಾವರಿ ಇಲಾಖೆ ನನ್ನ ಕೈಯಲ್ಲೇ ಇದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನೂ ಕೈಗೆತ್ತಿಕೊಳ್ಳಲಾಗುವುದು.Conclusion:ನಾನು ಎಲ್ಲಾ ಜಿಲ್ಲೆ- ತಾಲೂಕುಗಳ ಅಭಿವೃದ್ಧಿಗೆ ಕೆಲಸ ಮಾಡಬೇಕಿದೆ. ನೀರಾವರಿ ಇಲಾಖೆ ನನ್ನ ಕೈಯಲ್ಲೇ ಇದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನೂ ಕೈಗೆತ್ತಿಕೊಳ್ಳಲಾಗುವುದು. ಶಿಕಾರಿಪುರ ಹಾಗೂ ಸೊರಬ ತಾಲೂಕಿಗೆ ನೀರಾವರಿ ಕಲ್ಪಿಸಲು ಕಲ್ಲೊಡ್ಡು ಹಾಗೂ ಮೂಡಿ ಯೋಜನೆಯನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಹತ್ತು ತಿಂಗಳ ಒಳಗಾಗಿ ಮುಗಿಸಲು ಸೂಚಿಸಿ 45 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ವಿಮಾನ ನಿಲ್ದಾಣ ಪೂರ್ಣಗೊಂಡರೆ ಇನ್ನಷ್ಟು ಕೈಗಾರಿಕೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಭಗೊಳ್ಳಲಿವೆ.
ಇನ್ನು ರೈಲ್ವೇ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಶಿಕಾರಿಪುರ ರಾಣೆಬೆನ್ನೂರು ಸಂಪರ್ಕ ಕಲ್ಪಿಸುವ ರೈಲ್ವೇ ಯೋಜನೆಗೆ ಈಗಾಗಲೇ ಭೂಸ್ವಾದೀನ ಕಚೇರಿ ಆರಂಭಿಸಲಾಗಿದೆ. ಜೊತೆಗೆ ರೈಲ್ವೇ ಯೋಜನೆಗೆ ರಾಜ್ಯ ಸರ್ಕಾರದ ಪಾಲು 750 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಸಾಗರ ಎಸಿ, ಸೇರಿದಂತೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯರು ಹಾಜರಿದ್ದರು.

ಬೈಟ್: ಬಿ.ಎಸ್.ಯಡಿಯೂರಪ್ಪ. ಸಿಎಂ.
Last Updated : Sep 30, 2019, 11:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.