ETV Bharat / state

ಕಾಂಗ್ರೆಸ್ಸಿಗರ ಎದೆ ನಡುಗುವಂತಹ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ: ಕೆ ಎಸ್ ಈಶ್ವರಪ್ಪ

author img

By

Published : Apr 12, 2023, 10:33 AM IST

ಬಿಜೆಪಿ ಪಕ್ಷ ನಿಂತ ನೀರಲ್ಲ ಇದರಲ್ಲಿ ಹೊಸಬರು ಬರ್ತಾರೆ ಹಳಬರು ಇರ್ತಾರೆ ಎಂದು ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ.

ಮೊದಲ ಪಟ್ಟಿ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ
ಮೊದಲ ಪಟ್ಟಿ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ: ಕಾಂಗ್ರೆಸ್ಸಿಗರ ಎದೆ ನಡುಗಿಸುವಂತಹ ಪಟ್ಟಿಯನ್ನು ನಿನ್ನೆ ಬಿಜೆಪಿ ಬಿಡುಗಡೆ ಮಾಡಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿನ್ನೆ ಬಿಜೆಪಿಯ ಕೇಂದ್ರದ ನಾಯಕರು 189 ಜನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಜನರ ಮನಸ್ಸನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೆ ಎನ್ನುವ ಭರವಸೆ ಇದೆ ಎಂದರು.

ಬಿಜೆಪಿ ನಿಂತ ನೀರಲ್ಲ: ಬಿಜೆಪಿ ನಿಂತ ನೀರಲ್ಲ. ಇದರಲ್ಲಿ ಹೊಸಬರು ಬರ್ತಾರೆ, ಹಳಬರು ಇರುತ್ತಾರೆ. ಎಲ್ಲಾರಿಗೂ ಅನುಕೂಲವಾಗುವಂತಹ ಪಟ್ಟಿ ನಿನ್ನೆ ಬಿಡುಗಡೆ ಆಗಿದೆ. ನಮ್ಮ ಪಟ್ಟಿಯಲ್ಲಿ ಹಿಂದುಳಿದ ವರ್ಗದವರಿಗೆ ಆದ್ಯತೆ ಕೊಟ್ಟಿದ್ದಾರೆ. ನಮ್ಮ ಪಟ್ಟಿಯಲ್ಲಿ ವೈದ್ಯರು, ನಿವೃತ್ತ ಐಎಎಸ್ ಅಧಿಕಾರಿಗಳು, ನಿವೃತ್ತ ಸರ್ಕಾರಿ ನೌಕರರು ಇದ್ದಾರೆ. ಈ ಪಟ್ಟಿ ನೋಡಿ ನಮಗೆ ಸಂತೋಷವಾಗಿದೆ ಎಂದರು.

ಹಿರಿಯರಿಗೆ ಬೇಸರವಾಗಿರುವುದು ಸಹಜ: ನಮ್ಮ ಪಕ್ಷದ ಹಿರಿಯರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್​ ಸವದಿ ಸೇರಿ ಅನೇಕರಿಗೆ ಟಿಕೆಟ್​ ಘೋಷಣೆ ಆಗದೇ ಇರುವುದು ಬೇಸರ ತಂದಿದೆ. ಬಿಜೆಪಿಯಲ್ಲಿ ಮಾತ್ರ ಹಿರಿಯರು ಎಲ್ಲರನ್ನು ಕರೆದು ಸಮಾಧಾನ ಪಡಿಸುವ ವ್ಯವಸ್ಥೆ ಇದೆ. ಕೇಂದ್ರದ ನಾಯಕರು ಜಗದೀಶ್ ಶೆಟ್ಟರ್ ಹಾಗೂ ಸವದಿ ಅವರನ್ನು ಕರೆದು ಮಾತನಾಡಿಸುತ್ತಾರೆ ಎಂದರು. ಬಳಿಕ ಬೆಂಗಳೂರಿಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಯಾರು ಬೆಂಗಳೂರಿಗೆ ಕರೆದಿಲ್ಲ. ನಾನು ಬೆಂಗಳೂರಿಗೆ ಹೋಗಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ರಾಜ್ಯದ ಜನರಿಗೆ ನನ್ನ ಪ್ರಾರ್ಥನೆ: ನಮಗೆ ಯಾವತ್ತೂ ಮತದಾರರು ಪೂರ್ಣ ಬಹುಮತ ಕೊಟ್ಟಿಲ್ಲ. ಯಡಿಯೂರಪ್ಪ, ನಾಲ್ಕು ಬಾರಿ ಸಿಎಂ ಅದ್ರು ಬೊಮ್ಮಾಯಿ, ಶೆಟ್ಟರ್ ಸಿಎಂ ಆದರು. ಈ ಬಾರಿ ಪೂರ್ಣ ಬಹುಮತ ಕೊಡಿ ಎಂದು ಮನವಿ ಮಾಡಿಕೊಂಡರು.‌ ಇನ್ನು ಶಿವಮೊಗ್ಗ ನಗರ ಕ್ಷೇತ್ರ ಅಭ್ಯರ್ಥಿ ಘೋಷಣೆ ಕುರಿತು ವರಿಷ್ಠರು ಸೂಕ್ತ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಕ್ಷೇತ್ರವನ್ನು ಬೇರೆಯವರಿಗೆ ಬಿಡುವುದಿಲ್ಲ ಎಂದರು.

ಇದನ್ನೂ ಓದಿ: ಚುನಾವಣೆ ಗೆಲ್ಲಲು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್: 75 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ!

ಆಯನೂರು ಮಂಜುನಾಥ್ ಮಾಧ್ಯಮಗೋಷ್ಟಿ: ಇಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾಧ್ಯಮಗೋಷ್ಟಿ ನಡೆಸಲಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ ಮೇಲೆ ಆಯನೂರು ಮಂಜುನಾಥ್ ಯಾವ ವಿಷಯದ ಮೇಲೆ ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ. ಈ ಹಿಂದೆ ಈಶ್ವರಪ್ಪ ಚುನಾವಣೆ ಸ್ಪರ್ಧೆ ವಿಚಾರವಾಗಿ ಆಯನೂರು ಮಾಧ್ಯಮಗೋಷ್ಟಿ ನಡೆಸಿದ್ದರು. ಅಲ್ಲದೇ ನಗರದಲ್ಲಿ ಅನೇಕ ಕಡೆ ಫ್ಲೆಕ್ಸ್​ ಹಾಕಿ ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ರಾಯಚೂರು ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದ ಬಿಜೆಪಿ

ಶಿವಮೊಗ್ಗ: ಕಾಂಗ್ರೆಸ್ಸಿಗರ ಎದೆ ನಡುಗಿಸುವಂತಹ ಪಟ್ಟಿಯನ್ನು ನಿನ್ನೆ ಬಿಜೆಪಿ ಬಿಡುಗಡೆ ಮಾಡಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿನ್ನೆ ಬಿಜೆಪಿಯ ಕೇಂದ್ರದ ನಾಯಕರು 189 ಜನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಜನರ ಮನಸ್ಸನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೆ ಎನ್ನುವ ಭರವಸೆ ಇದೆ ಎಂದರು.

ಬಿಜೆಪಿ ನಿಂತ ನೀರಲ್ಲ: ಬಿಜೆಪಿ ನಿಂತ ನೀರಲ್ಲ. ಇದರಲ್ಲಿ ಹೊಸಬರು ಬರ್ತಾರೆ, ಹಳಬರು ಇರುತ್ತಾರೆ. ಎಲ್ಲಾರಿಗೂ ಅನುಕೂಲವಾಗುವಂತಹ ಪಟ್ಟಿ ನಿನ್ನೆ ಬಿಡುಗಡೆ ಆಗಿದೆ. ನಮ್ಮ ಪಟ್ಟಿಯಲ್ಲಿ ಹಿಂದುಳಿದ ವರ್ಗದವರಿಗೆ ಆದ್ಯತೆ ಕೊಟ್ಟಿದ್ದಾರೆ. ನಮ್ಮ ಪಟ್ಟಿಯಲ್ಲಿ ವೈದ್ಯರು, ನಿವೃತ್ತ ಐಎಎಸ್ ಅಧಿಕಾರಿಗಳು, ನಿವೃತ್ತ ಸರ್ಕಾರಿ ನೌಕರರು ಇದ್ದಾರೆ. ಈ ಪಟ್ಟಿ ನೋಡಿ ನಮಗೆ ಸಂತೋಷವಾಗಿದೆ ಎಂದರು.

ಹಿರಿಯರಿಗೆ ಬೇಸರವಾಗಿರುವುದು ಸಹಜ: ನಮ್ಮ ಪಕ್ಷದ ಹಿರಿಯರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್​ ಸವದಿ ಸೇರಿ ಅನೇಕರಿಗೆ ಟಿಕೆಟ್​ ಘೋಷಣೆ ಆಗದೇ ಇರುವುದು ಬೇಸರ ತಂದಿದೆ. ಬಿಜೆಪಿಯಲ್ಲಿ ಮಾತ್ರ ಹಿರಿಯರು ಎಲ್ಲರನ್ನು ಕರೆದು ಸಮಾಧಾನ ಪಡಿಸುವ ವ್ಯವಸ್ಥೆ ಇದೆ. ಕೇಂದ್ರದ ನಾಯಕರು ಜಗದೀಶ್ ಶೆಟ್ಟರ್ ಹಾಗೂ ಸವದಿ ಅವರನ್ನು ಕರೆದು ಮಾತನಾಡಿಸುತ್ತಾರೆ ಎಂದರು. ಬಳಿಕ ಬೆಂಗಳೂರಿಗೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಯಾರು ಬೆಂಗಳೂರಿಗೆ ಕರೆದಿಲ್ಲ. ನಾನು ಬೆಂಗಳೂರಿಗೆ ಹೋಗಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ರಾಜ್ಯದ ಜನರಿಗೆ ನನ್ನ ಪ್ರಾರ್ಥನೆ: ನಮಗೆ ಯಾವತ್ತೂ ಮತದಾರರು ಪೂರ್ಣ ಬಹುಮತ ಕೊಟ್ಟಿಲ್ಲ. ಯಡಿಯೂರಪ್ಪ, ನಾಲ್ಕು ಬಾರಿ ಸಿಎಂ ಅದ್ರು ಬೊಮ್ಮಾಯಿ, ಶೆಟ್ಟರ್ ಸಿಎಂ ಆದರು. ಈ ಬಾರಿ ಪೂರ್ಣ ಬಹುಮತ ಕೊಡಿ ಎಂದು ಮನವಿ ಮಾಡಿಕೊಂಡರು.‌ ಇನ್ನು ಶಿವಮೊಗ್ಗ ನಗರ ಕ್ಷೇತ್ರ ಅಭ್ಯರ್ಥಿ ಘೋಷಣೆ ಕುರಿತು ವರಿಷ್ಠರು ಸೂಕ್ತ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಕ್ಷೇತ್ರವನ್ನು ಬೇರೆಯವರಿಗೆ ಬಿಡುವುದಿಲ್ಲ ಎಂದರು.

ಇದನ್ನೂ ಓದಿ: ಚುನಾವಣೆ ಗೆಲ್ಲಲು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್: 75 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ!

ಆಯನೂರು ಮಂಜುನಾಥ್ ಮಾಧ್ಯಮಗೋಷ್ಟಿ: ಇಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾಧ್ಯಮಗೋಷ್ಟಿ ನಡೆಸಲಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ ಮೇಲೆ ಆಯನೂರು ಮಂಜುನಾಥ್ ಯಾವ ವಿಷಯದ ಮೇಲೆ ಮಾತನಾಡಲಿದ್ದಾರೆ ಎಂಬುದರ ಬಗ್ಗೆ ಕುತೂಹಲ ಕೆರಳಿಸಿದೆ. ಈ ಹಿಂದೆ ಈಶ್ವರಪ್ಪ ಚುನಾವಣೆ ಸ್ಪರ್ಧೆ ವಿಚಾರವಾಗಿ ಆಯನೂರು ಮಾಧ್ಯಮಗೋಷ್ಟಿ ನಡೆಸಿದ್ದರು. ಅಲ್ಲದೇ ನಗರದಲ್ಲಿ ಅನೇಕ ಕಡೆ ಫ್ಲೆಕ್ಸ್​ ಹಾಕಿ ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ರಾಯಚೂರು ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.