ETV Bharat / state

ಶಿವಮೊಗ್ಗದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ - undefined

ಜಿಲ್ಲೆಯಲ್ಲಿ ನಕಲಿ ವೈದ್ಯರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಸಾವಿನ ಪ್ರಮಾಣ ಹೆಚ್ಚುತ್ತಿದೆ. ಆದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Shimoga
author img

By

Published : May 30, 2019, 8:03 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಪ್ಪಿಸಲು ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಡೆದ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ಹಾಗೂ ಅಲ್ಲಿನ ಅವ್ಯವಸ್ಥೆಗಳ ಕುರಿತು ಚರ್ಚಿಸಿದರು. ಜಿಲ್ಲೆಯಲ್ಲಿ ನಕಲಿ ವೈದ್ಯರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಸಾವಿನ ಪ್ರಮಾಣ ಹೆಚ್ಚುತ್ತಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಡೋಸ್​​ ನೀಡುವ ಮೂಲಕ ಔಷಧಗಳಿಗೆ ದಾಸರಾಗುವ ಹಾಗೂ ವ್ಯತಿರಿಕ್ತ ಪರಿಣಾಮ ಬೀರುವ ಸಂಭವ ಹೆಚ್ಚಿದೆ. ಈ ಕುರಿತಾಗಿ ಅಧಿಕಾರಿಗಳು ನಿರ್ಲಕ್ಷ್ಯ ಬಿಡಬೇಕು ಎಂದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು

ಖಾಸಗಿ ಸ್ಕ್ಯಾನಿಂಗ್ ಸೆಂಟರ್​ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತಾಗಿ ಅಧಿಕಾರಿಗಳು ಖುದ್ದು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಸಂಸ್ಥೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ವೈದ್ಯರ ಸಲಹೆ ಇಲ್ಲದಂತೆ ಮಾರುಕಟ್ಟೆಯಲ್ಲಿ ದೊರೆಯುವ ಗರ್ಭಪಾತದ ಮಾತ್ರೆಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹಾಗೂ ಸಂಭವಿಸಬಹುದಾದ ಸಾವಿನ ಬಗ್ಗೆ ಸಹ ಜಾಗ್ರತಿ ಮೂಡಿಸುವ ಕಾರ್ಯವಾಗಬೇಕಿದೆ. ವೈದ್ಯರ ಚೀಟಿ ಇಲ್ಲದೇ ಔಷಧಗಳನ್ನು ನೀಡುವ ಮಳಿಗೆಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದರು.

ಆಸ್ಪತ್ರೆಗಳಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದೇ ಸೂಜಿಗಳ ಸಮೇತ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಹಾಗೂ ಸುಡುವುದು ಗಮನಕ್ಕೆ ಬಂದಿದ್ದು, ಈ ಕುರಿತು ಶಿಘ್ರವಾಗಿ ಕ್ರಮಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ಅವ್ಯವಸ್ಥೆಗಳ ಕುರಿತು ಸಿಬ್ಬಂದಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಬೇಡಿಕೆ ಇಡಬೇಕು. ಮಾಹಿತಿ ನೀಡದೇ ಮೌನವಹಿಸಿದರೆ ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆ ತಿಳಿಯುವುದು ಹೇಗೆ. ಆದ್ದರಿಂದ ಸಿಬ್ಬಂದಿಗಳು ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ತಿಳಿಸಿದರು.

ಈ ಸಭೆಯಲ್ಲಿ ಸಿಇಒ ಕೆ. ಶಿವರಾಮೇಗೌಡ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಪ್ಪಿಸಲು ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಡೆದ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ಹಾಗೂ ಅಲ್ಲಿನ ಅವ್ಯವಸ್ಥೆಗಳ ಕುರಿತು ಚರ್ಚಿಸಿದರು. ಜಿಲ್ಲೆಯಲ್ಲಿ ನಕಲಿ ವೈದ್ಯರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಸಾವಿನ ಪ್ರಮಾಣ ಹೆಚ್ಚುತ್ತಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಡೋಸ್​​ ನೀಡುವ ಮೂಲಕ ಔಷಧಗಳಿಗೆ ದಾಸರಾಗುವ ಹಾಗೂ ವ್ಯತಿರಿಕ್ತ ಪರಿಣಾಮ ಬೀರುವ ಸಂಭವ ಹೆಚ್ಚಿದೆ. ಈ ಕುರಿತಾಗಿ ಅಧಿಕಾರಿಗಳು ನಿರ್ಲಕ್ಷ್ಯ ಬಿಡಬೇಕು ಎಂದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು

ಖಾಸಗಿ ಸ್ಕ್ಯಾನಿಂಗ್ ಸೆಂಟರ್​ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತಾಗಿ ಅಧಿಕಾರಿಗಳು ಖುದ್ದು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಸಂಸ್ಥೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ವೈದ್ಯರ ಸಲಹೆ ಇಲ್ಲದಂತೆ ಮಾರುಕಟ್ಟೆಯಲ್ಲಿ ದೊರೆಯುವ ಗರ್ಭಪಾತದ ಮಾತ್ರೆಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹಾಗೂ ಸಂಭವಿಸಬಹುದಾದ ಸಾವಿನ ಬಗ್ಗೆ ಸಹ ಜಾಗ್ರತಿ ಮೂಡಿಸುವ ಕಾರ್ಯವಾಗಬೇಕಿದೆ. ವೈದ್ಯರ ಚೀಟಿ ಇಲ್ಲದೇ ಔಷಧಗಳನ್ನು ನೀಡುವ ಮಳಿಗೆಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದರು.

ಆಸ್ಪತ್ರೆಗಳಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದೇ ಸೂಜಿಗಳ ಸಮೇತ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಹಾಗೂ ಸುಡುವುದು ಗಮನಕ್ಕೆ ಬಂದಿದ್ದು, ಈ ಕುರಿತು ಶಿಘ್ರವಾಗಿ ಕ್ರಮಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ಅವ್ಯವಸ್ಥೆಗಳ ಕುರಿತು ಸಿಬ್ಬಂದಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರಕ್ಕೆ ಬೇಡಿಕೆ ಇಡಬೇಕು. ಮಾಹಿತಿ ನೀಡದೇ ಮೌನವಹಿಸಿದರೆ ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆ ತಿಳಿಯುವುದು ಹೇಗೆ. ಆದ್ದರಿಂದ ಸಿಬ್ಬಂದಿಗಳು ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ತಿಳಿಸಿದರು.

ಈ ಸಭೆಯಲ್ಲಿ ಸಿಇಒ ಕೆ. ಶಿವರಾಮೇಗೌಡ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Intro:ಶಿವಮೊಗ್ಗ
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಪ್ಪಿಸಲು ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಎಚ್ಚರಿಕೆ ನೀಡಿದರು.
ಇಂದು ನಡೆದ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಲ್ಲಿ ಅಧಿಕಾರಿಗಳೊಂದಿಗೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ಹಾಗೂ ಅಲ್ಲಿನ ಅವ್ಯವಸ್ಥೆಗಳ ಕುರಿತು ಅವರು ಚರ್ಚಿಸಿದರು.
ಜಿಲ್ಲೆಯಲ್ಲಿ ನಕಲಿ ವೈದ್ಯರಿಂದ ಜನರಿಗೆ ತೊಂದರೆ ಆಗುತ್ತಿದ್ದು ಸಾವಿನ ಪ್ರಮಾಣ ಹೆಚ್ಚುತ್ತಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಔಷಧವನ್ನು ರೋಗಿಗಳಿಗೆ ನೀಡುವ ಮೂಲಕ ಔಷಧಗಳಿಗೆ ದಾಸರಾಗುವ ಹಾಗೂ ವ್ಯತಿರಿಕ್ತ ಪರಿಣಾಮ ಬೀರುವ ಸಂಭವ ಹೆಚ್ಚಿದೆ ಈ ಕುರಿತಾಗಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಿಡಬೇಕು ಎಂದು ಅವರು ಹೇಳಿದರು.
ಖಾಸಗಿ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತಾಗಿ ಅಧಿಕಾರಿಗಳು ಖುದ್ದು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಸಂಸ್ಥೆಗಳ ವಿರುಧ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ವೈದ್ಯರ ಸಲಹೆ ಇಲ್ಲದಂತೆ ಮಾರುಕಟ್ಟೆಯಲ್ಲಿ ದೊರೆಯುವ ಗರ್ಭಪಾತದ ಮಾತ್ರೆಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹಾಗೂ ಸಂಭವಿಸಬಹುದಾದ ಸಾವಿನ ಬಗ್ಗೆ ಸಹ ಜಾಗ್ರತೆ ಮೂಡಿಸುವ ಕಾರ್ಯವಾಗಬೇಕಿದೆ. ವೈದ್ಯರ ಚೀಟಿ ಇಲ್ಲದೆ ಔಷಧಗಳನ್ನು ನೀಡುವ ಮಳಿಗೆಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.
ಆಸ್ಪತ್ರೆಗಳಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದೆ ಸೂಜಿಗಳ ಸಮೇತ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಹಾಗೂ ಸುಡುವುದು ಗಮನಕ್ಕೆ ಬಂದಿದ್ದು, ಈ ಕುರಿತು ಶಿಘ್ರವಾಗಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.
ಆಸ್ಪತ್ರೆಗಳಲ್ಲಿ ಅವ್ಯವಸ್ಥೆಗಳ ಕುರಿತು ಸಿಬ್ಬಂದಿಗಳು ಅಧಿಕಾರಿಗಳೊಂದಿಗೆ ಚರ್ಚಿಸಬೇಕು ಹಾಗೂ ಸೂಕ್ತ ಪರಿಹಾರಕ್ಕೆ ಬೇಡಿಕೆ ಇಡಬೇಕು. ನೀವು ಮಾಹಿತಿ ನೀಡದೆ ಮೌನವಹಿಸಿದರೆ ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆ ತಿಳಿಯುವುದು ಹೇಗೆ? ಮತ್ತು ಅದು ಪರಿಹಾರ ಕಾಣುವುದು ಹೇಗೆ? ಆದ್ದರಿಂದ ಸಿಬ್ಬಂದಿUಳು ಅಧಿಕಾರಿಗಳಿಗಾಗಲೀ ಸರ್ಕಾರಕ್ಕಾಗಲಿ ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ತಿಳಿಸಿದರು.
ಜನರಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲಿನ ತಿರಸ್ಕಾರ ಭಾವನೆ ಹೋಗಬೇಕು. ಇಲ್ಲಿ ಸಿಗುವ ಚಿಕಿತ್ಸೆಯನ್ನು ಪಡೆಯಲು ಮುಂದಾಗಬೇಕು. ಹಾಗೂ ಯಾವುದೇ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ಗಮನಕ್ಕೆ ತರಬೇಕು, ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
ಆಸ್ಪತ್ರೆಗಳಲ್ಲಿ ಸರಿಯಾದ ಆಡಳಿತ ಮಂಡಳಿ ಹೊಂದಿರಬೇಕು ಯಾವುದೇ ನಿರ್ಲಕ್ಷ್ಯ ಸ್ವಭಾವದ ಅಧಿಕಾರಿಗಳಿದ್ದರೆ ಕೂಡಲೆ ಅವರ ಸ್ಥಳದಲ್ಲಿ ಸೂಕ್ತ ಅಧಿಕಾರಿಗಳನ್ನ ನೇಮಿಸುವ ಕಾರ್ಯ ಆಗಬೇಕು ಎಂದರು.
ಸಿಇಓ ಕೆ. ಶಿವರಾಮೇಗೌಡ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.