ETV Bharat / state

ಶಿವಮೊಗ್ಗ: ರೈತ ಸಮಾವೇಶಕ್ಕೆ ಭರದ ಸಿದ್ಧತೆ

author img

By

Published : Mar 9, 2021, 7:30 PM IST

Updated : Mar 10, 2021, 10:32 AM IST

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ನಿರಂತರವಾಗಿ ಮುಂದುವರಿದಿದೆ. ಕಳೆದ ಮೂರು ತಿಂಗಳಿನಿಂದ ರೈತರು ದೆಹಲಿ ಭಾಗದಲ್ಲಿ ನಡೆಸುತ್ತಿರುವ ಹೋರಾಟವನ್ನು ದೇಶಾದ್ಯಂತ, ಅದರಲ್ಲೂ ದಕ್ಷಿಣ ಭಾರತಕ್ಕೆ ವಿಸ್ತರಿಸುವ ನಿಟ್ಟಿನಲ್ಲಿ ರೈತ ಸಂಘಟನೆಗಳು ಕಾರ್ಯೋನ್ಮುಖವಾಗಿವೆ.

ಶಿವಮೊಗ್ಗದಲ್ಲಿ ರೈತ ಸಮಾವೇಶಕ್ಕೆ ಸಿದ್ಧತೆ
ಶಿವಮೊಗ್ಗದಲ್ಲಿ ರೈತ ಸಮಾವೇಶ

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ನಡೆಸುತ್ತಿದ್ದಾರೆ. ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತ ಸಂಘಟನೆಗಳು ಈ ಹೋರಾಟವನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿವೆ.

ರೈತ ಸಮಾವೇಶಕ್ಕೆ ಭರದ ಸಿದ್ಧತೆ

ಈ ನಿಟ್ಟಿನಲ್ಲಿ ದೆಹಲಿ, ಪಂಜಾಬ್ ಮಾತ್ರವಲ್ಲದೇ ದಕ್ಷಿಣ ಭಾರತದ ರಾಜ್ಯಗಳಲ್ಲೂ ಹೋರಾಟ ಆರಂಭಿಸಲು ಪ್ಲಾನ್ ರೂಪಿಸಿವೆ. ಬಿಜೆಪಿ ಶಕ್ತಿಕೇಂದ್ರ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೊದಲ ರೈತ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಭರದ ಸಿದ್ಧತೆಯೂ ನಡೆದಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರೈತರ ಸಭೆ ನಡೆಸಿ ಜೊತೆಗೆ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ, ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.

ಇದನ್ನೂ ಓದಿ:ಸಿಎಂ ತವರು ಜಿಲ್ಲೆಯ ನಗರಸಭೆಗಳಲ್ಲಿ ನೌಕರರ ಕೊರತೆ: ಕೆಲಸವಾಗದೆ ಜನರ ಪರದಾಟ

ರಾಕೇಶ್ ಟಿಕಾಯತ್, ದಶರ್ನ್ ಪಾಲ್, ಯದ್ವೀರ್ ಸಿಂಗ್, ಯೋಗೇಂದ್ರ ಯಾದವ್ ಸಮಾವೇಶದಲ್ಲಿ ಭಾಗಿಯಾಗಿ, ದಕ್ಷಿಣ ಭಾರತದ ಹೋರಾಟಕ್ಕೆ ಮುನ್ನುಡಿ ಬರೆಯಲಿದ್ದಾರೆ. ಶಿವಮೊಗ್ಗದ ರೈತರ ಹೋರಾಟಕ್ಕೆ ಕಾಂಗ್ರೆಸ್, ಜೆಡಿಎಸ್, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿವೆ.

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ನಡೆಸುತ್ತಿದ್ದಾರೆ. ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತ ಸಂಘಟನೆಗಳು ಈ ಹೋರಾಟವನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿವೆ.

ರೈತ ಸಮಾವೇಶಕ್ಕೆ ಭರದ ಸಿದ್ಧತೆ

ಈ ನಿಟ್ಟಿನಲ್ಲಿ ದೆಹಲಿ, ಪಂಜಾಬ್ ಮಾತ್ರವಲ್ಲದೇ ದಕ್ಷಿಣ ಭಾರತದ ರಾಜ್ಯಗಳಲ್ಲೂ ಹೋರಾಟ ಆರಂಭಿಸಲು ಪ್ಲಾನ್ ರೂಪಿಸಿವೆ. ಬಿಜೆಪಿ ಶಕ್ತಿಕೇಂದ್ರ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮೊದಲ ರೈತ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಭರದ ಸಿದ್ಧತೆಯೂ ನಡೆದಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರೈತರ ಸಭೆ ನಡೆಸಿ ಜೊತೆಗೆ ಬಿಜೆಪಿಯೇತರ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ, ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.

ಇದನ್ನೂ ಓದಿ:ಸಿಎಂ ತವರು ಜಿಲ್ಲೆಯ ನಗರಸಭೆಗಳಲ್ಲಿ ನೌಕರರ ಕೊರತೆ: ಕೆಲಸವಾಗದೆ ಜನರ ಪರದಾಟ

ರಾಕೇಶ್ ಟಿಕಾಯತ್, ದಶರ್ನ್ ಪಾಲ್, ಯದ್ವೀರ್ ಸಿಂಗ್, ಯೋಗೇಂದ್ರ ಯಾದವ್ ಸಮಾವೇಶದಲ್ಲಿ ಭಾಗಿಯಾಗಿ, ದಕ್ಷಿಣ ಭಾರತದ ಹೋರಾಟಕ್ಕೆ ಮುನ್ನುಡಿ ಬರೆಯಲಿದ್ದಾರೆ. ಶಿವಮೊಗ್ಗದ ರೈತರ ಹೋರಾಟಕ್ಕೆ ಕಾಂಗ್ರೆಸ್, ಜೆಡಿಎಸ್, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿವೆ.

Last Updated : Mar 10, 2021, 10:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.