ETV Bharat / state

ಸನಾತನ ಧರ್ಮದ ಕುರಿತು ಉದಯ‌ನಿಧಿ ಹೇಳಿಕೆ ಖಂಡನೀಯ : ಆರಗ ಜ್ಞಾನೇಂದ್ರ

ಸನಾತನ ಧರ್ಮ ಕುರಿತು ಹೇಳಿಕೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆಯನ್ನು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.

author img

By ETV Bharat Karnataka Team

Published : Sep 5, 2023, 7:14 PM IST

former-home-minister-araga-jnanendra-slams-udayanidhi
ಸನಾತನ ಧರ್ಮದ ಕುರಿತು ಉದಯ‌ನಿಧಿ ಹೇಳಿಕೆ ಖಂಡನೀಯ : ಆರಗ ಜ್ಞಾನೇಂದ್ರ
ಸನಾತನ ಧರ್ಮದ ಕುರಿತು ಉದಯ‌ನಿಧಿ ಹೇಳಿಕೆ ಖಂಡನೀಯ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ನೀಡಿರುವ ಹೇಳಿಕೆಯನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಂಡಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪುತ್ರ ಸಚಿವ ಉದಯನಿಧಿ ಸ್ಟಾಲಿನ್​ ಅವರು ಸನಾತನ ಧರ್ಮದ ಬಗ್ಗೆ ಅವರು ಆಡಿರುವ ಮಾತು ಕೇಳಿ ಬಹಳ ಆಶ್ಚರ್ಯ ಆಗಿದೆ. ಇಂತಹ ವಿಕೃತ ಮನಸ್ಸಿನ ಜನರು ಸೇರಿ ಇಂಡಿಯಾ ಒಕ್ಕೂಟ ರಚಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ರೀತಿ ಕೇರಳದಲ್ಲಿರುವ ಮುಸ್ಲಿಂ ಲೀಗ್​ನ ಸದಸ್ಯರು ಮೆರವಣಿಗೆ ಮಾಡುವಾಗ ಹಿಂದೂಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್​ನ ಸಂಸತ್​ ಸದಸ್ಯನೊಬ್ಬ ಆರ್ಟಿಕಲ್​ 370ಯನ್ನು ರದ್ದು ವಾಪಸ್​ ಪಡೆಯಬೇಕು ಎಂದು ಸುಪ್ರಿಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ. ಈತ ಹಿಂದೆ ಶಾಸಕನಾಗಿದ್ದಾಗ ಜಮ್ಮು ಕಾಶ್ಮೀರದಲ್ಲಿ ಸದನದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಇಂಥವರೆಲ್ಲ ಸೇರಿಕೊಂಡು ಮೋದಿ ವಿರುದ್ಧ ಒಟ್ಟಾಗಿದ್ದಾರೆ. ಇನ್ನು ಇವರೆಲ್ಲ ಸೇರಿ ಅಧಿಕಾರಕ್ಕೆ ಬಂದರೆ ಏನೆಲ್ಲ ಆಗಬಹುದು ಎಂಬ ಸೂಚನೆಯನ್ನು‌ ಈಗಲೇ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂತಹ ವಿಕೃತ ವರ್ತನೆ ಸರಿಯಲ್ಲ. ಭಾರತ ದೇಶದಲ್ಲಿ ಶೇ.80ಕ್ಕೂ ಹೆಚ್ಚು ಸನಾತನ ಹಿಂದು ಧರ್ಮೀಯರು ಇದ್ದಾರೆ. ಹಿಂದು ಧರ್ಮ ಇರುವುದರಿಂದಲೇ ಉಳಿದೆಲ್ಲರೂ ಶಾಂತಿಯುತವಾಗಿ ಇಲ್ಲಿ ನೆಲೆಯೂರಿದ್ದಾರೆ. ಹಿಂದೂ ಧರ್ಮ ನಿರ್ನಾಮ ಮಾಡಲು ಮುಂದಾಗಿರುವುದನ್ನು, ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವುದನ್ನು ಯಾರು ಕೂಡ ಸಹಿಸಬಾರದು. ಇದನ್ನು ಖಂಡಿಸಬೇಕು ಎಂದು ಹೇಳಿದರು.

ಇದಕ್ಕೆ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಒಕ್ಕೂಟದ ಪಕ್ಷಗಳು ಉತ್ತರ ನೀಡಬೇಕು. ಜನಸಾಮಾನ್ಯರು ಇದನ್ನು ಲಘುವಾಗಿ ಪರಿಗಣಿಸಬಾರದು. ಗಂಭೀರವಾಗಿ ಪರಿಗಣಿಸಬೇಕು. ಈ ರೀತಿಯ ವಿಕೃತ ಮನಸ್ಸುಗಳನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಜನ ಮುಂದಾಗಬೇಕು ಎಂದು ಹೇಳಿದರು.

ಪಠ್ಯ ಪುಸ್ತಕಗಳಲ್ಲಿ ಪದೇ ಪದೆ ಬದಲಾವಣೆಯಾದರೆ ವಿದ್ಯಾರ್ಥಿಗಳಿಗೆ ತೊಂದರೆ..ಸಂಸದ ರಾಘವೇಂದ್ರ : ಪದೇ ಪದೆ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡುವುದರಿಂದ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬಿರುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎನ್ಇಪಿ ಜಾರಿಗೆ ತರಲು ಹೊರಟಿದೆ. ಆದರೆ ರಾಜ್ಯ ಸರ್ಕಾರ ಎಸ್ಇಪಿ ಜಾರಿಗೆ ಮುಂದಾಗಿದೆ. ಇದು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸೂಕ್ಷ್ಮವಾಗಿ, ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೇಳಿದರು.

ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ತಲುಪಿದೆ. ಎಲ್ಲ ಕಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯ ಜನತೆ, ವಿದ್ಯಾರ್ಥಿಗಳ ಸ್ಪರ್ಧೆಗೆ ಅಗತ್ಯವಾದ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ-ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.

ಇದೆ ವೇಳೆ, ಜಿಲ್ಲೆಯ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ಶಾಲೆಯ 35 ಜನ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ವೇಳೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಪರಿಷತ್ ಸದಸ್ಯ ಭೋಜೆಗೌಡ, ಮೇಯರ್ ಶಿವಕುಮಾರ್, ಡಿಸಿ ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ: ಸಚಿವರ ವಿರುದ್ಧ ನಟ ಪ್ರಥಮ್ ಅಸಮಾಧಾನ!

ಸನಾತನ ಧರ್ಮದ ಕುರಿತು ಉದಯ‌ನಿಧಿ ಹೇಳಿಕೆ ಖಂಡನೀಯ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ನೀಡಿರುವ ಹೇಳಿಕೆಯನ್ನು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖಂಡಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಪುತ್ರ ಸಚಿವ ಉದಯನಿಧಿ ಸ್ಟಾಲಿನ್​ ಅವರು ಸನಾತನ ಧರ್ಮದ ಬಗ್ಗೆ ಅವರು ಆಡಿರುವ ಮಾತು ಕೇಳಿ ಬಹಳ ಆಶ್ಚರ್ಯ ಆಗಿದೆ. ಇಂತಹ ವಿಕೃತ ಮನಸ್ಸಿನ ಜನರು ಸೇರಿ ಇಂಡಿಯಾ ಒಕ್ಕೂಟ ರಚಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ರೀತಿ ಕೇರಳದಲ್ಲಿರುವ ಮುಸ್ಲಿಂ ಲೀಗ್​ನ ಸದಸ್ಯರು ಮೆರವಣಿಗೆ ಮಾಡುವಾಗ ಹಿಂದೂಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್​ನ ಸಂಸತ್​ ಸದಸ್ಯನೊಬ್ಬ ಆರ್ಟಿಕಲ್​ 370ಯನ್ನು ರದ್ದು ವಾಪಸ್​ ಪಡೆಯಬೇಕು ಎಂದು ಸುಪ್ರಿಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ. ಈತ ಹಿಂದೆ ಶಾಸಕನಾಗಿದ್ದಾಗ ಜಮ್ಮು ಕಾಶ್ಮೀರದಲ್ಲಿ ಸದನದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಇಂಥವರೆಲ್ಲ ಸೇರಿಕೊಂಡು ಮೋದಿ ವಿರುದ್ಧ ಒಟ್ಟಾಗಿದ್ದಾರೆ. ಇನ್ನು ಇವರೆಲ್ಲ ಸೇರಿ ಅಧಿಕಾರಕ್ಕೆ ಬಂದರೆ ಏನೆಲ್ಲ ಆಗಬಹುದು ಎಂಬ ಸೂಚನೆಯನ್ನು‌ ಈಗಲೇ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂತಹ ವಿಕೃತ ವರ್ತನೆ ಸರಿಯಲ್ಲ. ಭಾರತ ದೇಶದಲ್ಲಿ ಶೇ.80ಕ್ಕೂ ಹೆಚ್ಚು ಸನಾತನ ಹಿಂದು ಧರ್ಮೀಯರು ಇದ್ದಾರೆ. ಹಿಂದು ಧರ್ಮ ಇರುವುದರಿಂದಲೇ ಉಳಿದೆಲ್ಲರೂ ಶಾಂತಿಯುತವಾಗಿ ಇಲ್ಲಿ ನೆಲೆಯೂರಿದ್ದಾರೆ. ಹಿಂದೂ ಧರ್ಮ ನಿರ್ನಾಮ ಮಾಡಲು ಮುಂದಾಗಿರುವುದನ್ನು, ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವುದನ್ನು ಯಾರು ಕೂಡ ಸಹಿಸಬಾರದು. ಇದನ್ನು ಖಂಡಿಸಬೇಕು ಎಂದು ಹೇಳಿದರು.

ಇದಕ್ಕೆ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಒಕ್ಕೂಟದ ಪಕ್ಷಗಳು ಉತ್ತರ ನೀಡಬೇಕು. ಜನಸಾಮಾನ್ಯರು ಇದನ್ನು ಲಘುವಾಗಿ ಪರಿಗಣಿಸಬಾರದು. ಗಂಭೀರವಾಗಿ ಪರಿಗಣಿಸಬೇಕು. ಈ ರೀತಿಯ ವಿಕೃತ ಮನಸ್ಸುಗಳನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಜನ ಮುಂದಾಗಬೇಕು ಎಂದು ಹೇಳಿದರು.

ಪಠ್ಯ ಪುಸ್ತಕಗಳಲ್ಲಿ ಪದೇ ಪದೆ ಬದಲಾವಣೆಯಾದರೆ ವಿದ್ಯಾರ್ಥಿಗಳಿಗೆ ತೊಂದರೆ..ಸಂಸದ ರಾಘವೇಂದ್ರ : ಪದೇ ಪದೆ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡುವುದರಿಂದ ಮಕ್ಕಳ ಕಲಿಕೆ ಮೇಲೆ ಪರಿಣಾಮ ಬಿರುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎನ್ಇಪಿ ಜಾರಿಗೆ ತರಲು ಹೊರಟಿದೆ. ಆದರೆ ರಾಜ್ಯ ಸರ್ಕಾರ ಎಸ್ಇಪಿ ಜಾರಿಗೆ ಮುಂದಾಗಿದೆ. ಇದು ಮಕ್ಕಳ ಕಲಿಕೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಸೂಕ್ಷ್ಮವಾಗಿ, ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೇಳಿದರು.

ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ತಲುಪಿದೆ. ಎಲ್ಲ ಕಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯ ಜನತೆ, ವಿದ್ಯಾರ್ಥಿಗಳ ಸ್ಪರ್ಧೆಗೆ ಅಗತ್ಯವಾದ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ-ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.

ಇದೆ ವೇಳೆ, ಜಿಲ್ಲೆಯ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ಶಾಲೆಯ 35 ಜನ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ವೇಳೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಪರಿಷತ್ ಸದಸ್ಯ ಭೋಜೆಗೌಡ, ಮೇಯರ್ ಶಿವಕುಮಾರ್, ಡಿಸಿ ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ: ಸಚಿವರ ವಿರುದ್ಧ ನಟ ಪ್ರಥಮ್ ಅಸಮಾಧಾನ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.