ETV Bharat / state

ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಚಿವ ಕಿಮ್ಮನೆ ಪಾದಯಾತ್ರೆ: ಕಾರಣ? - ಸುಮಾರು 30 ಕಿ.ಮಿ ದೂರ ಪಾದಯಾತ್ರೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅತಿವೃಷ್ಟಿಯ ಪರಿಹಾರ ಕೊಡಿಸುವಲ್ಲಿ ಹಾಗೂ ಕಾಡು ಪ್ರಾಣಿಗಳಾದ ಆನೆ, ಕಾಡೆಮ್ಮೆ, ಮಂಗಗಳ ಹಾವಳಿಯಿಂದಾದ ಬೆಳೆ ನಷ್ಟ ಪರಿಹಾರ ಮತ್ತು ಸೂಕ್ತ ರಕ್ಷಣೆ ನೀಡುವಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಇಂದು  ಸುಮಾರು 30 ಕಿ.ಮೀ ದೂರ ಪಾದಯಾತ್ರೆ ಕೈಗೊಂಡಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ
author img

By

Published : Oct 25, 2019, 4:32 PM IST

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅತಿವೃಷ್ಟಿ ನಷ್ಟದ ಪರಿಹಾರ ಕೊಡಿಸುವಲ್ಲಿ ಹಾಗೂ ಕಾಡು ಪ್ರಾಣಿಗಳಿಂದ ಆದ ಬೆಳೆ ನಷ್ಟ ಪರಿಹಾರ ಹಾಗೂ ಸೂಕ್ತ ರಕ್ಷಣೆ ನೀಡುವಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದು ಸುಮಾರು 30 ಕಿ.ಮೀ ದೂರ ಪಾದಯಾತ್ರೆ ನಡೆಸಿದರು.

ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯತ್​ನಿಂದ ಮೇಗರವಳ್ಳಿ ಅರಣ್ಯ ಇಲಾಖೆಯ ಕಚೇರಿಯವರೆಗೂ ಹಾಗೆಯೇ ಆಗುಂಬೆಯಿಂದ ಪ್ರಾರಂಭವಾದ ಪಾದಯಾತ್ರೆ ಕೌರಿಹಕ್ಕಲು, ಹೊಸೂರು, ಗುಡ್ಡೆಕೇರಿ, ನಾಲೂರು, ಕೊಳಗಿ, ಅರೆಕಲ್ಲು ನಿಂದ ಮೇಗರವಳ್ಳಿ ಅರಣ್ಯ ಇಲಾಖೆವರೆಗೂ ಪಾದಯಾತ್ರೆ ನಡೆಸಿದ್ದಾರೆ.

ದಾರಿಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ತೀರ್ಥಹಳ್ಳಿ ಕ್ಷೇತ್ರದಲ್ಲಿ ಶಾಸಕ ಆರಗ ಜ್ಞಾನೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ

ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅತಿವೃಷ್ಟಿ ನಷ್ಟದ ಪರಿಹಾರ ಕೊಡಿಸುವಲ್ಲಿ ಹಾಗೂ ಕಾಡು ಪ್ರಾಣಿಗಳಿಂದ ಆದ ಬೆಳೆ ನಷ್ಟ ಪರಿಹಾರ ಹಾಗೂ ಸೂಕ್ತ ರಕ್ಷಣೆ ನೀಡುವಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದು ಸುಮಾರು 30 ಕಿ.ಮೀ ದೂರ ಪಾದಯಾತ್ರೆ ನಡೆಸಿದರು.

ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯತ್​ನಿಂದ ಮೇಗರವಳ್ಳಿ ಅರಣ್ಯ ಇಲಾಖೆಯ ಕಚೇರಿಯವರೆಗೂ ಹಾಗೆಯೇ ಆಗುಂಬೆಯಿಂದ ಪ್ರಾರಂಭವಾದ ಪಾದಯಾತ್ರೆ ಕೌರಿಹಕ್ಕಲು, ಹೊಸೂರು, ಗುಡ್ಡೆಕೇರಿ, ನಾಲೂರು, ಕೊಳಗಿ, ಅರೆಕಲ್ಲು ನಿಂದ ಮೇಗರವಳ್ಳಿ ಅರಣ್ಯ ಇಲಾಖೆವರೆಗೂ ಪಾದಯಾತ್ರೆ ನಡೆಸಿದ್ದಾರೆ.

ದಾರಿಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ತೀರ್ಥಹಳ್ಳಿ ಕ್ಷೇತ್ರದಲ್ಲಿ ಶಾಸಕ ಆರಗ ಜ್ಞಾನೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ
Intro:ಹಾಲಿ ಶಾಸಕರ ವಿರುದ್ದ ಮಾಜಿ ಶಾಸಕರ ಪಾದಯಾತ್ರೆ.

ಶಿವಮೊಗ್ಗ: ತೀರ್ಥಹಳ್ಳಿಯ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರು ಇಂದು ಶಾಸಕ ಆರಗ ಜ್ಞಾನೇಂದ್ರ ರವರ ವಿರುದ್ದ ಪಾದಯಾತ್ರೆಯನ್ನು ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅತಿವೃಷ್ಟಿ ನಷ್ಟದ ಪರಿಹಾರ ಕೊಡಿಸುವಲ್ಲಿ ವಿಫಲ ಹಾಗೂ ಕಾಡು ಪ್ರಾಣಿಗಳಾದ ಆನೆ, ಕಾಡಾ‌ನೆ, ಕಾಡೆಮ್ಮೆ , ಮಂಗಗಳ ಹಾವಳಿ ಗಳಿಂದ ಆದ ಬೆಳೆ ನಷ್ಟ ಹಾಗೂ ಸೂಕ್ತ ರಕ್ಷಣೆ ನೀಡುವಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಸುಮಾರು 30 ಕಿ.ಮಿ ದೂರ ಪಾದಯಾತ್ರೆ ನಡೆಸಿದ್ದಾರೆ.Body:ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯತಿಯಿಂದ ಮೇಗರವಳ್ಳಿ ಅರಣ್ಯ ಇಲಾಖೆಯ ಕಚೇರಿಯವರೆಗೂ ಪಾದಯಾತ್ರೆ ನಡೆಸಿದ್ದಾರೆ. ಆಗುಂಬೆ ಯಿಂದ ಪ್ರಾರಂಭವಾದ ಪಾದಯಾತ್ರೆ ಕೌರಿಹಕ್ಕಲು, ಹೊಸೂರು, ಗುಡ್ಡೆಕೇರಿ, ನಾಲೂರು, ಕೊಳಗಿ, ಅರೆಕಲ್ಲು ನಿಂದ ಮೇಗರವಳ್ಳಿ ಅರಣ್ಯ ಇಲಾಖೆವರೆಗೂ ಪಾದಯಾತ್ರೆ ನಡೆಸಿದ್ದಾರೆ. ದಾರಿಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Conclusion:ತೀರ್ಥಹಳ್ಳಿ ಕ್ಷೇತ್ರದಲ್ಲಿ ಶಾಸಕ ಆರಗ ಜ್ಞಾನೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾದಯಾತ್ರೆ ನಡೆಸಲಾಯಿತು. ಪಾದಯಾತ್ರೆಯಲ್ಲಿ ಕೆಸ್ತೂರು ಮಂಜುನಾಥ್ , ನಾರಾಯಣ್ ರಾವ್ ಹಾಗೂ ರಾಘವೇಂದ್ರ ಸೇರಿ ಇತರೆ ಮುಖಂಡರು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.