ETV Bharat / state

ಅತಿವೃಷ್ಟಿಯಿಂದ ಮಲೆನಾಡಲ್ಲಿ ಭಾರಿ ಹಾನಿ: ಪರಿಹಾರ-ಪುನರ್ವಸತಿ ಕಾರ್ಯ ಚುರುಕು

author img

By

Published : Aug 28, 2019, 9:05 AM IST

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದೆ. ಜೊತೆಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ಮುಂದುವರಿಸಲಾಗಿದೆ.

ಅತಿವೃಷ್ಟಿಗೆ ಮಲೆನಾಡಲ್ಲಿ ಭಾರಿ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಸುಮಾರು 5,500 ಕುಟುಂಬಗಳನ್ನು ನೆರೆಪೀಡಿತರೆಂದು ಗುರುತಿಸಲಾಗಿದೆ. 2,400 ಕುಟುಂಬಗಳಿಗೆ ಈಗಾಗಲೇ ತುರ್ತು ಪರಿಹಾರವಾಗಿ ತಲಾ 10ಸಾವಿರ ರೂಪಾಯಿಯನ್ನ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಅತಿವೃಷ್ಟಿಗೆ ಮಲೆನಾಡಲ್ಲಿ ಭಾರಿ ಹಾನಿ

ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ 70 ಜಾನುವಾರುಗಳು ಹಾಗೂ 23 ಸಾವಿರ ಕೋಳಿ ಸಾವಿಗೀಡಾಗಿವೆ. ಇವುಗಳ ಮಾಲೀಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಪ್ರವಾಹಕ್ಕೆ ಸಿಲುಕಿ ಜಿಲ್ಲೆಯಲ್ಲಿ 10 ಮಂದಿ ಸಾವಿಗೀಡಾಗಿದ್ದು, ಅವರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿದೆ. ಇನ್ನು, ನೀರಿನಲ್ಲಿ ಕೊಚ್ಚಿ ಹೋಗಿರುವ ಇಬ್ಬರ ಮೃತದೇಹಗಳಿಗಾಗಿ ಎನ್‍ಡಿಆರ್​ಎಫ್ ತಂಡ ಇನ್ನೂ ಶೋಧ ಕಾರ್ಯ ಮುಂದುವರಿಸಿದೆ.

ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಮಾಡಲಾಗಿದೆ. 492 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದ್ದು, 3ಸಾವಿರ ಮನೆಗಳು ಭಾಗಶಃ ಹಾನಿಗೀಡಾಗಿವೆ. ಮನೆ ಕಟ್ಟಲು ಕಷ್ಟವಾಗುವವರಿಗೆ ಜಿಲ್ಲಾಡಳಿತದಿಂದ ಮನೆ ನಿರ್ಮಿಸಿಕೊಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

ನೆರೆ ಸಂದರ್ಭದಲ್ಲಿ ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸಾರ್ವಜನಿಕರು, ಅನೇಕ ಸಂಘ ಸಂಸ್ಥೆಗಳು ಸಕ್ರಿಯವಾಗಿ ಕೈಜೋಡಿಸಿದ್ದರು. ಎಲ್ಲರ ಸಹಕಾರದಿಂದಾಗಿ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಸುಮಾರು 5,500 ಕುಟುಂಬಗಳನ್ನು ನೆರೆಪೀಡಿತರೆಂದು ಗುರುತಿಸಲಾಗಿದೆ. 2,400 ಕುಟುಂಬಗಳಿಗೆ ಈಗಾಗಲೇ ತುರ್ತು ಪರಿಹಾರವಾಗಿ ತಲಾ 10ಸಾವಿರ ರೂಪಾಯಿಯನ್ನ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಅತಿವೃಷ್ಟಿಗೆ ಮಲೆನಾಡಲ್ಲಿ ಭಾರಿ ಹಾನಿ

ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ 70 ಜಾನುವಾರುಗಳು ಹಾಗೂ 23 ಸಾವಿರ ಕೋಳಿ ಸಾವಿಗೀಡಾಗಿವೆ. ಇವುಗಳ ಮಾಲೀಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಪ್ರವಾಹಕ್ಕೆ ಸಿಲುಕಿ ಜಿಲ್ಲೆಯಲ್ಲಿ 10 ಮಂದಿ ಸಾವಿಗೀಡಾಗಿದ್ದು, ಅವರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿದೆ. ಇನ್ನು, ನೀರಿನಲ್ಲಿ ಕೊಚ್ಚಿ ಹೋಗಿರುವ ಇಬ್ಬರ ಮೃತದೇಹಗಳಿಗಾಗಿ ಎನ್‍ಡಿಆರ್​ಎಫ್ ತಂಡ ಇನ್ನೂ ಶೋಧ ಕಾರ್ಯ ಮುಂದುವರಿಸಿದೆ.

ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಮಾಡಲಾಗಿದೆ. 492 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದ್ದು, 3ಸಾವಿರ ಮನೆಗಳು ಭಾಗಶಃ ಹಾನಿಗೀಡಾಗಿವೆ. ಮನೆ ಕಟ್ಟಲು ಕಷ್ಟವಾಗುವವರಿಗೆ ಜಿಲ್ಲಾಡಳಿತದಿಂದ ಮನೆ ನಿರ್ಮಿಸಿಕೊಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

ನೆರೆ ಸಂದರ್ಭದಲ್ಲಿ ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸಾರ್ವಜನಿಕರು, ಅನೇಕ ಸಂಘ ಸಂಸ್ಥೆಗಳು ಸಕ್ರಿಯವಾಗಿ ಕೈಜೋಡಿಸಿದ್ದರು. ಎಲ್ಲರ ಸಹಕಾರದಿಂದಾಗಿ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಗಿದೆ.

Intro:ಶಿವಮೊಗ್ಗ,
ಫಾರ್ಮೆಟ್: ಪ್ಯಾಕೇಜ್
ಸ್ಲಗ್: ಅತಿವೃಷ್ಟಿಗೆ ಮಲೆನಾಡಲ್ಲಿ ಭಾರಿ ಹಾನಿ

ಆ್ಯಂಕರ್.........
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ಮುಂದುವರಿಸ ಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 5500 ಕುಟುಂಬಗಳು ನೆರೆಬಾಧಿತ ಎಂದು ಗುರುತಿಸಲಾಗಿದ್ದು, 2400ಕುಟುಂಬಗಳಿಗೆ ಈಗಾಗಲೇ ತುರ್ತು ಪರಿಹಾರವಾಗಿ ತಲಾ 10ಸಾವಿರ ರೂ. ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ವಾಯ್ಸ್ ಓವರ್....1
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ 70 ಜಾನುವಾರುಗಳು ಹಾಗೂ 23ಸಾವಿರ ಕೋಳಿ ಸಾವಿಗೀಡಾಗಿವೆ. ಇವುಗಳ ಮಾಲಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ನೀಡುವ ಕಾರ್ಯ ಚಾಲನೆಯಲ್ಲಿದೆ. ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 10ಮಂದಿ ಸಾವಿಗೀಡಾಗಿದ್ದು, ಅವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಇಬ್ಬರ ಮೃತದೇಹಗಳಿಗಾಗಿ ಎನ್‍ಡಿಆರ್‍ಎಫ್ ತಂಡ ಇನ್ನೂ ಹುಡುಕಾಟ ಮುಂದುವರೆಸಿದೆ.
ಬೈಟ್ ...1
ಕೆ.ಬಿ.ಶಿವಕುಮಾರ್ : ಶಿವಮೊಗ್ಗ ಜಿಲ್ಲಾಧಿಕಾರಿ

ವಾಯ್ಸ್ ಓವರ್ .....2
ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಮಾಡಲಾಗಿದೆ. 492 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದ್ದು, 3ಸಾವಿರ ಮನೆಗಳು ಭಾಗಶಃ ಹಾನಿಗೀಡಾಗಿವೆ. ಮನೆ ಕಟ್ಟಲು ಕಷ್ಟವಾಗುವವರಿಗೆ ಜಿಲ್ಲಾಡಳಿತದ ವತಿಯಿಂದ ಮನೆ ನಿರ್ಮಿಸಿಕೊಡಲು ಯೋಜನೆ ಸಿದ್ದಪಡಿಸಲಾಗುತ್ತಿದೆ. ಬಾಡಿಗೆ ಮನೆಯಲ್ಲಿದ್ದು ಮನೆ ಕಳೆದುಕೊಂಡಿರುವವರ ವಿವರಗಳನ್ನು ಸಂಗ್ರಹಿಸಲಾಗುತ್ತಿದ್ದು, ಅವರಿಗೆ ವಸತಿ ಯೋಜನೆಯಡಿ ಮನೆಗಳನ್ನು ಒದಗಿಸುವ ಕುರಿತು ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಅವರು ಈಗಾಗಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
ಬೈಟ್ ...2
ಕೆ.ಬಿ.ಶಿವಕುಮಾರ್ : ಶಿವಮೊಗ್ಗ ಜಿಲ್ಲಾಧಿಕಾರಿ

ಕನ್ ಕ್ಲೂಷನ್....
ನೆರೆ ಸಂದರ್ಭದಲ್ಲಿ ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸಾರ್ವಜನಿಕರು, ಅನೇಕ ಸಂಘ ಸಂಸ್ಥೆಗಳು ಸಕ್ರಿಯವಾಗಿ ಕೈಜೋಡಿಸಿದ್ದಾರೆ. ಕೆಲವು ಸಾಹಸ ಅಕಾಡೆಮಿ ಸದಸ್ಯರು ಬೋಟ್‍ಗಳೊಂದಿಗೆ ಬಂದು ರಕ್ಷಣಾ ಕಾರ್ಯ ನಡೆಸಿದ್ದಾರೆ. ಎಲ್ಲರ ಸಹಕಾರದಿಂದಾಗಿ ರಕ್ಷಣೆ ಹಾಗೂ ಪರಿಹಾರ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಗಿದೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.