ETV Bharat / state

ಅಯೋಧ್ಯೆ ತೀರ್ಪು ಹಿನ್ನೆಲೆ ರಾಜ್ಯಾದ್ಯಂತ ಹೈ ಅಲರ್ಟ್​: ‌ಬೆಂಗಳೂರು, ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

author img

By

Published : Nov 9, 2019, 9:14 AM IST

Updated : Nov 9, 2019, 9:32 AM IST

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

ಶಿವಮೊಗ್ಗ/ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 6 - ಕೆಎಸ್ಆರ್​​ಪಿ ತುಕಡಿ, 18 - ಡಿ.ಎ.ಆರ್. ತುಕಡಿಗಳು ಹಾಗೂ 1 ಡಿ-ಸ್ಪಾಟ್ ತುಕಡಿಯನ್ನು ಬಂದೋಬಸ್ತ್​​​ಗಾಗಿ ನಿಯೋಜನೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ತೀವ್ರ ನಿಗಾ ಇಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ:
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನು (ಬಿ.ಎಡ್ ಸೇರಿದಂತೆ) ಮುಂದೂಡಲಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ:
ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾಗದ ಪರೀಕ್ಷೆಗಳು, ಯುಜಿ ಮತ್ತು ಪಿಜಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.‌ ಸರ್ಕಾರ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನ ತಿಳಿಸಲಾಗುವುದು ಅಂತ ಬೆಂಗಳೂರು ವಿವಿ ಪರೀಕ್ಷಾ ಕುಲಸಚಿವ ಪ್ರೊ. ಸಿ.ಶಿವರಾಜು ಮಾಹಿತಿ ನೀಡಿದ್ದಾರೆ‌..

ಶಿವಮೊಗ್ಗ/ಬೆಂಗಳೂರು: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 6 - ಕೆಎಸ್ಆರ್​​ಪಿ ತುಕಡಿ, 18 - ಡಿ.ಎ.ಆರ್. ತುಕಡಿಗಳು ಹಾಗೂ 1 ಡಿ-ಸ್ಪಾಟ್ ತುಕಡಿಯನ್ನು ಬಂದೋಬಸ್ತ್​​​ಗಾಗಿ ನಿಯೋಜನೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ತೀವ್ರ ನಿಗಾ ಇಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ

ಕುವೆಂಪು ವಿವಿ ಪರೀಕ್ಷೆ ಮುಂದೂಡಿಕೆ:
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನು (ಬಿ.ಎಡ್ ಸೇರಿದಂತೆ) ಮುಂದೂಡಲಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳ ಮುಂದೂಡಿಕೆ:
ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾಗದ ಪರೀಕ್ಷೆಗಳು, ಯುಜಿ ಮತ್ತು ಪಿಜಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.‌ ಸರ್ಕಾರ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನ ತಿಳಿಸಲಾಗುವುದು ಅಂತ ಬೆಂಗಳೂರು ವಿವಿ ಪರೀಕ್ಷಾ ಕುಲಸಚಿವ ಪ್ರೊ. ಸಿ.ಶಿವರಾಜು ಮಾಹಿತಿ ನೀಡಿದ್ದಾರೆ‌..

Intro:ಅಯೋಧ್ಯೆ ತೀರ್ಪು ಜಿಲ್ಲಾದ್ಯಾಂತ ಹೈ ಅಲರ್ಟ್: ಕುವೆಂಪು ವಿ.ವಿ‌ ಪರೀಕ್ಷೆ ಮುಂದೂಡಿಕೆ.

ಶಿವಮೊಗ್ಗ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಬಂದೋ ಬಸ್ತ್ ವ್ಯವಸ್ಥೆ ಮಾಡಿದೆ.ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಸೂಕ್ತ ಬಂದ್ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಬಂದ್ ಬಸ್ತ್ ಗಾಗಿBody:6 - ಕೆ.ಎಸ್.ಆರ್.ಪಿ ತುಕಡಿ, 18 - ಡಿ.ಎ.ಆರ್. ತುಕಡಿಗಳು ಹಾಗೂ 1 ಡಿ-ಸ್ವಾಟ್ ತುಕಡಿ ಬಂದೋಬಸ್ತ್ ಗಾಗಿ ನಿಯೋಜನೆ ಮಾಡಲಾಗಿದೆ.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಆದರೆ, ನಾಳೆ ತೀರ್ಪು ಹಿನ್ನೆಲೆಯಲ್ಲಿ ಬಂದೋಬಸ್ತ್ ನ್ನು ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ತೀವ್ರ ನಿಗಾ. ನಾಳೆ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.Conclusion:

ಕುವೆಂಪು ವಿ.ವಿ ಪರೀಕ್ಷೆ ಮುಂದೂಡಿಕೆ-
ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಪರೀಕ್ಷೆಗಳನ್ನು (ಬಿ.ಎಡ್ ಸೇರಿದಂತೆ) ಮುಂದೂಡಲಾಗಿದೆ ಎಂದು ಕುವೆಂಪು ವಿ.ವಿಯ ಪರೀಕ್ಷಾಂಗ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದ್ದಾರೆ. ನಾಳೆ‌ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated : Nov 9, 2019, 9:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.