ETV Bharat / state

ಜಗತ್ತಿನ ಶ್ರೇಷ್ಠ ಋಷಿ ಪರಂಪರೆಯ ಪ್ರತಿನಿಧಿಗಳು ಹಿಂದೂಗಳು: ರಘುನಂದನ್

author img

By

Published : Dec 25, 2022, 2:47 PM IST

Updated : Dec 25, 2022, 4:55 PM IST

ಶಿವಮೊಗ್ಗಲ್ಲಿ ಹಿಂದೂ ಜಾಗರಣ ವೇದಿಕೆಯ 3ನೇ ವಾರ್ಷಿಕ ಪ್ರಾಂತ ಸಮ್ಮೇಳನ- ಸಂಜೆ ಬೃಹತ್‌ ಶೋಭಾಯಾತ್ರೆ ಹಾಗೂ ಸಾರ್ವಜನಿಕ ಸಭೆ- ಸಾದ್ವಿ ಪ್ರಜ್ಞಾಸಿಂಗ್ ಠಾಕೂರ್ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಭಾಗಿ

ರಘುನಂದನ್
ರಘುನಂದನ್

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಿಂದೂ ಧರ್ಮದ ಕಹಳೆ ಮೊಳಗಿದೆ. ಜಗತ್ತಿನ ಶ್ರೇಷ್ಠ ಋಷಿ ಪರಂಪರೆಯ ಪ್ರತಿನಿಧಿಗಳು ಹಿಂದೂಗಳು. ನಮ್ಮ ಪೂರ್ವಜರು ಯುದ್ಧ ಮಾಡಿದವರಲ್ಲ. ಬದಲಾಗಿ ಜಗತ್ತಿನ ಕಲ್ಯಾಣಕ್ಕಾಗಿ ಜೀವನ ಕಳೆದವರು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಜ್ಞಾ ಪ್ರವಾಹ ಅಖಿಲ ಭಾರತ ಸಹ ಸಂಯೋಜಕ ರಘುನಂದನ್ ಅವರು ಹೇಳಿದರು.

ನಗರದ ಎನ್ಇಎಸ್ ಮೈದಾನದಲ್ಲಿ ಆಯೋಜಿಸಿರುವ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ 3ನೇ ತ್ರೈಮಾಸಿಕ ಪ್ರಾಂತೀಯ ಕಾರ್ಯಕರ್ತರ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದ ನಮ್ಮ ಪೂರ್ವಜರು ಯುದ್ಧ ಮಾಡಿದವರಲ್ಲ. ಬದಲಾಗಿ, ಜಗತ್ತಿನ ಕಲ್ಯಾಣಕ್ಕೆ ತಮ್ಮ ಜೀವನವನ್ನೇ ಮುಡುಪಿಟ್ಟವರು. ವಸುದೈವ ಕುಟುಂಬದ ಚಿಂತನೆ ಕೊಟ್ಟಿದ್ದು ನಮ್ಮ ಹಿಂದೂ ಧರ್ಮದ ಸಮಾಜ. ಆದ್ರೆ, 25 ಸಾವಿರ ದೇವಸ್ಥಾನಗಳನ್ನು ಒಡೆದು ಹಾಕಿ ಜನರಿಗೆ ಮೋಸ ಮಾಡಿದವರು ಯಾರು ಎಂದು ಪ್ರಶ್ನಿಸಿದರು. ಈ ವೇಳೆ ಹಿಂದೂ ಸಂಘಟನೆಯ ಹರ್ಷ ಕಾಮತ್​, ದೋ ಕೇಶವಮೂರ್ತಿ, ಡಾ.ತೇಜಸ್ವಿ ಸೇರಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೃಹತ್‌ ಶೋಭಾಯಾತ್ರೆ: ಶಿವಮೊಗ್ಗದಲ್ಲಿ ನಡೆಯುತ್ತಿರುವ ಪ್ರಾಂತ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಜಿಲ್ಲೆಗಳಿಂದ ಸುಮಾರು 4000 ಕಾರ್ಯಕರ್ತರು ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದಲೇ ಕಾರ್ಯಕ್ರಮ ಪ್ರಾರಂಭವಾಗಿದ್ದು, ಸಂಜೆ ಬೃಹತ್‌ ಶೋಭಾಯಾತ್ರೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಜರುಗಲಿದೆ. ಇದಕ್ಕೆ ಮುಖ್ಯ ಅತಿಥಿಯಾಗಿ ಉದ್ಯಮಿ ರಾಮ್ ಮನೋಹರ್ ಶಾಂತವೇರಿ ಅವರು ಪಾಲ್ಗೊಳ್ಳುವರು. ಪ್ರಾಸ್ತಾವಿಕ ಭಾಷಣವನ್ನು ಜಗದೀಶ್ ಕಾರಂತ್ ಮಾಡಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಸಾದ್ವಿ ಪ್ರಜ್ಞಾಸಿಂಗ್ ಠಾಕೂರ್ ಮಾಡಲಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಭಾನುವಾರ ಹಿಂದು ಜಾಗರಣ ವೇದಿಕೆ ಪ್ರಾಂತ ಸಮ್ಮೇಳನ: ಸಾದ್ವಿ ಪ್ರಜ್ಞಾ ಸಿಂಗ್ ಭಾಗಿ

ಶೋಭಾಯಾತ್ರೆಯು ಎಸ್.ಪಿ.ಎಂ ರಸ್ತೆಯಿಂದ ಸಾಗಿ ಬಳಿಕ ರಾಮಣ್ಣಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಎ.ಎ.ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತದ ಮೂಲಕ ಎನ್.ಇ.ಎಸ್ ಮೈದಾನ ತಲುಪಲಿದೆ.

ಕೇಸರಿಮಯವಾದ ಶಿವಮೊಗ್ಗ: 3ನೇ ತ್ರೈಮಾಸಿಕ ಪ್ರಾಂತ ಸಮ್ಮೇಳನದ ಅಂಗವಾಗಿ ಶಿವಮೊಗ್ಗವನ್ನು ಸಂಪೂರ್ಣ ಕೇಸರಿಮಯ ಮಾಡಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಾವುಟಗಳು, ಹಿಂದೂ ಹುತಾತ್ಮ ಕಾರ್ಯಕರ್ತರ ಭಾವಚಿತ್ರಗಳು ರಾರಾಜಿಸುತ್ತಿವೆ. ಹಿಂದೂ ಸಮಾವೇಶ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ನಗರಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಬಿಗಿ ಪೊಲೀಸ್​ ಬಂದೋಬಸ್ತ್ ಆಯೋಜಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮೊದಲ ಬಾರಿಗೆ ಹನುಮ ಜಯಂತಿ ಶೋಭಾಯಾತ್ರೆ: ಸಹಸ್ರಾರು ಮಂದಿ ಭಾಗಿ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಿಂದೂ ಧರ್ಮದ ಕಹಳೆ ಮೊಳಗಿದೆ. ಜಗತ್ತಿನ ಶ್ರೇಷ್ಠ ಋಷಿ ಪರಂಪರೆಯ ಪ್ರತಿನಿಧಿಗಳು ಹಿಂದೂಗಳು. ನಮ್ಮ ಪೂರ್ವಜರು ಯುದ್ಧ ಮಾಡಿದವರಲ್ಲ. ಬದಲಾಗಿ ಜಗತ್ತಿನ ಕಲ್ಯಾಣಕ್ಕಾಗಿ ಜೀವನ ಕಳೆದವರು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಜ್ಞಾ ಪ್ರವಾಹ ಅಖಿಲ ಭಾರತ ಸಹ ಸಂಯೋಜಕ ರಘುನಂದನ್ ಅವರು ಹೇಳಿದರು.

ನಗರದ ಎನ್ಇಎಸ್ ಮೈದಾನದಲ್ಲಿ ಆಯೋಜಿಸಿರುವ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ 3ನೇ ತ್ರೈಮಾಸಿಕ ಪ್ರಾಂತೀಯ ಕಾರ್ಯಕರ್ತರ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದ ನಮ್ಮ ಪೂರ್ವಜರು ಯುದ್ಧ ಮಾಡಿದವರಲ್ಲ. ಬದಲಾಗಿ, ಜಗತ್ತಿನ ಕಲ್ಯಾಣಕ್ಕೆ ತಮ್ಮ ಜೀವನವನ್ನೇ ಮುಡುಪಿಟ್ಟವರು. ವಸುದೈವ ಕುಟುಂಬದ ಚಿಂತನೆ ಕೊಟ್ಟಿದ್ದು ನಮ್ಮ ಹಿಂದೂ ಧರ್ಮದ ಸಮಾಜ. ಆದ್ರೆ, 25 ಸಾವಿರ ದೇವಸ್ಥಾನಗಳನ್ನು ಒಡೆದು ಹಾಕಿ ಜನರಿಗೆ ಮೋಸ ಮಾಡಿದವರು ಯಾರು ಎಂದು ಪ್ರಶ್ನಿಸಿದರು. ಈ ವೇಳೆ ಹಿಂದೂ ಸಂಘಟನೆಯ ಹರ್ಷ ಕಾಮತ್​, ದೋ ಕೇಶವಮೂರ್ತಿ, ಡಾ.ತೇಜಸ್ವಿ ಸೇರಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೃಹತ್‌ ಶೋಭಾಯಾತ್ರೆ: ಶಿವಮೊಗ್ಗದಲ್ಲಿ ನಡೆಯುತ್ತಿರುವ ಪ್ರಾಂತ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಜಿಲ್ಲೆಗಳಿಂದ ಸುಮಾರು 4000 ಕಾರ್ಯಕರ್ತರು ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದಲೇ ಕಾರ್ಯಕ್ರಮ ಪ್ರಾರಂಭವಾಗಿದ್ದು, ಸಂಜೆ ಬೃಹತ್‌ ಶೋಭಾಯಾತ್ರೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಜರುಗಲಿದೆ. ಇದಕ್ಕೆ ಮುಖ್ಯ ಅತಿಥಿಯಾಗಿ ಉದ್ಯಮಿ ರಾಮ್ ಮನೋಹರ್ ಶಾಂತವೇರಿ ಅವರು ಪಾಲ್ಗೊಳ್ಳುವರು. ಪ್ರಾಸ್ತಾವಿಕ ಭಾಷಣವನ್ನು ಜಗದೀಶ್ ಕಾರಂತ್ ಮಾಡಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಸಾದ್ವಿ ಪ್ರಜ್ಞಾಸಿಂಗ್ ಠಾಕೂರ್ ಮಾಡಲಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಭಾನುವಾರ ಹಿಂದು ಜಾಗರಣ ವೇದಿಕೆ ಪ್ರಾಂತ ಸಮ್ಮೇಳನ: ಸಾದ್ವಿ ಪ್ರಜ್ಞಾ ಸಿಂಗ್ ಭಾಗಿ

ಶೋಭಾಯಾತ್ರೆಯು ಎಸ್.ಪಿ.ಎಂ ರಸ್ತೆಯಿಂದ ಸಾಗಿ ಬಳಿಕ ರಾಮಣ್ಣಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಎ.ಎ.ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತದ ಮೂಲಕ ಎನ್.ಇ.ಎಸ್ ಮೈದಾನ ತಲುಪಲಿದೆ.

ಕೇಸರಿಮಯವಾದ ಶಿವಮೊಗ್ಗ: 3ನೇ ತ್ರೈಮಾಸಿಕ ಪ್ರಾಂತ ಸಮ್ಮೇಳನದ ಅಂಗವಾಗಿ ಶಿವಮೊಗ್ಗವನ್ನು ಸಂಪೂರ್ಣ ಕೇಸರಿಮಯ ಮಾಡಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಾವುಟಗಳು, ಹಿಂದೂ ಹುತಾತ್ಮ ಕಾರ್ಯಕರ್ತರ ಭಾವಚಿತ್ರಗಳು ರಾರಾಜಿಸುತ್ತಿವೆ. ಹಿಂದೂ ಸಮಾವೇಶ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ನಗರಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಬಿಗಿ ಪೊಲೀಸ್​ ಬಂದೋಬಸ್ತ್ ಆಯೋಜಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮೊದಲ ಬಾರಿಗೆ ಹನುಮ ಜಯಂತಿ ಶೋಭಾಯಾತ್ರೆ: ಸಹಸ್ರಾರು ಮಂದಿ ಭಾಗಿ

Last Updated : Dec 25, 2022, 4:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.