ETV Bharat / state

ಇಂಗ್ಲೆಂಡ್​​​ನಿಂದ ಶಿವಮೊಗ್ಗಕ್ಕೆ ಬಂದ 23 ಜನರ ಐಸೋಲೇಷನ್: ಡಿಸಿ ಸ್ಪಷ್ಟನೆ - 23 people from the UK to Shimoga

ಇಂಗ್ಲೆಂಡ್​ನಿಂದ ಬಂದ 23 ಮಂದಿಯನ್ನು ಐಸೋಲೇಷನ್ ಮಾಡಿ ಇವರಿಗೆ ಸರ್ಕಾರದ ಮಾರ್ಗಸೂಚಿಯನ್ನು ತಿಳಿಸಲಾಗಿದೆ. ಎಲ್ಲರೂ ಒಂದು ವಾರದ ಹಿಂದೆ ಶಿವಮೊಗ್ಗಕ್ಕೆ ಬಂದಿದ್ದರು. ನಂತರ ಸರ್ಕಾರ ನೀಡಿದ ಮಾಹಿತಿ ಮೇರೆಗೆ ಅವರನ್ನು ಹುಡುಕಿ, ಗಂಟಲು ದ್ರವದ ಮಾದರಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಡಿಸಿ ಶಿವಕುಮಾರ್
ಡಿಸಿ ಶಿವಕುಮಾರ್
author img

By

Published : Dec 23, 2020, 3:26 PM IST

ಶಿವಮೊಗ್ಗ: ಇಂಗ್ಲೆಂಡ್​​ನಿಂದ ಶಿವಮೊಗ್ಗ ಜಿಲ್ಲೆಗೆ ಇದುವರೆಗೂ ಒಂದು ಮಗು ಸೇರಿದಂತೆ 23 ಜನ ಆಗಮಿಸಿದ್ದಾರೆ. ಇವರೆಲ್ಲರ ಗಂಟಲು ದ್ರವದ ಮಾದರಿಯನ್ನು ಪಡೆದು ಪರೀಕ್ಷೆಗೆ ಒಳಪಡಿಸಲಾಗಿದೆ. 8 ಜನರ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಸಂಜೆ 6 ಗಂಟೆಗೆ ಲಭ್ಯವಾಗಲಿದೆ. ಅವರದ್ದು ಸಹ ನೆಗೆಟಿವ್ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಂಗ್ಲೆಂಡ್​ನಿಂದ ಬಂದ 23 ಮಂದಿಯನ್ನು ಐಸೋಲೇಷನ್ ಮಾಡಿ ಇವರಿಗೆ ಸರ್ಕಾರದ ಮಾರ್ಗಸೂಚಿಯನ್ನು ತಿಳಿಸಲಾಗಿದೆ. ಎಲ್ಲರೂ ಒಂದು ವಾರದ ಹಿಂದೆ ಶಿವಮೊಗ್ಗಕ್ಕೆ ಬಂದಿದ್ದರು. ನಂತರ ಸರ್ಕಾರ ನೀಡಿದ ಮಾಹಿತಿ ಮೇರೆಗೆ ಅವರನ್ನು ಹುಡುಕಿ, ಗಂಟಲು ದ್ರವದ ಮಾದರಿ ಪಡೆಯಲಾಗಿದೆ. ಎಲ್ಲರನ್ನು ಈ ಹಿಂದೆ ಏರ್​ಪೋರ್ಟ್​ನಲ್ಲಿ ಪರೀಕ್ಷೆ ಮಾಡಲಾಗಿದೆ. ಆದರೂ ಸಹ ಮತ್ತೊಮ್ಮೆ ಅವರ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷೆ ನಡೆಸಲಾಗಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಇದನ್ನೂ ಓದಿ.. ಶಿವಮೊಗ್ಗದಲ್ಲಿ ಮೆಡಿಕಲ್​ ವಿದ್ಯಾರ್ಥಿನಿ ಆತ್ಮಹತ್ಯೆ

ಈಗಾಗಲೇ ಶಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರು ಸೇರಿದಂತೆ ಎಲ್ಲರನ್ನು ಪತ್ತೆ ಹಚ್ಚಲಾಗಿದೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ಹತೋಟಿಯಲ್ಲಿದೆ. ಆದರೂ ಸಾರ್ವಜನಿಕರು ನಿರ್ಲಕ್ಷ್ಯ ತೋರದೆ ಕೋವಿಡ್ ನಿಯಮ ಪಾಲಿಸಬೇಕಿದೆ ಎಂದು ವಿನಂತಿ ಮಾಡಿಕೊಂಡರು.

ರಾತ್ರಿ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದ್ದು, ಯಾವ ರೀತಿಯ ಮಾರ್ಗಸೂಚಿ ನೀಡುತ್ತದೆ ಎಂಬುದನ್ನು ನೋಡಿ ಅನುಸರಿಸಲಾಗುವುದು ಎಂದರು.

ಶಿವಮೊಗ್ಗ: ಇಂಗ್ಲೆಂಡ್​​ನಿಂದ ಶಿವಮೊಗ್ಗ ಜಿಲ್ಲೆಗೆ ಇದುವರೆಗೂ ಒಂದು ಮಗು ಸೇರಿದಂತೆ 23 ಜನ ಆಗಮಿಸಿದ್ದಾರೆ. ಇವರೆಲ್ಲರ ಗಂಟಲು ದ್ರವದ ಮಾದರಿಯನ್ನು ಪಡೆದು ಪರೀಕ್ಷೆಗೆ ಒಳಪಡಿಸಲಾಗಿದೆ. 8 ಜನರ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಸಂಜೆ 6 ಗಂಟೆಗೆ ಲಭ್ಯವಾಗಲಿದೆ. ಅವರದ್ದು ಸಹ ನೆಗೆಟಿವ್ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಂಗ್ಲೆಂಡ್​ನಿಂದ ಬಂದ 23 ಮಂದಿಯನ್ನು ಐಸೋಲೇಷನ್ ಮಾಡಿ ಇವರಿಗೆ ಸರ್ಕಾರದ ಮಾರ್ಗಸೂಚಿಯನ್ನು ತಿಳಿಸಲಾಗಿದೆ. ಎಲ್ಲರೂ ಒಂದು ವಾರದ ಹಿಂದೆ ಶಿವಮೊಗ್ಗಕ್ಕೆ ಬಂದಿದ್ದರು. ನಂತರ ಸರ್ಕಾರ ನೀಡಿದ ಮಾಹಿತಿ ಮೇರೆಗೆ ಅವರನ್ನು ಹುಡುಕಿ, ಗಂಟಲು ದ್ರವದ ಮಾದರಿ ಪಡೆಯಲಾಗಿದೆ. ಎಲ್ಲರನ್ನು ಈ ಹಿಂದೆ ಏರ್​ಪೋರ್ಟ್​ನಲ್ಲಿ ಪರೀಕ್ಷೆ ಮಾಡಲಾಗಿದೆ. ಆದರೂ ಸಹ ಮತ್ತೊಮ್ಮೆ ಅವರ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷೆ ನಡೆಸಲಾಗಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಇದನ್ನೂ ಓದಿ.. ಶಿವಮೊಗ್ಗದಲ್ಲಿ ಮೆಡಿಕಲ್​ ವಿದ್ಯಾರ್ಥಿನಿ ಆತ್ಮಹತ್ಯೆ

ಈಗಾಗಲೇ ಶಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರು ಸೇರಿದಂತೆ ಎಲ್ಲರನ್ನು ಪತ್ತೆ ಹಚ್ಚಲಾಗಿದೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ಹತೋಟಿಯಲ್ಲಿದೆ. ಆದರೂ ಸಾರ್ವಜನಿಕರು ನಿರ್ಲಕ್ಷ್ಯ ತೋರದೆ ಕೋವಿಡ್ ನಿಯಮ ಪಾಲಿಸಬೇಕಿದೆ ಎಂದು ವಿನಂತಿ ಮಾಡಿಕೊಂಡರು.

ರಾತ್ರಿ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದ್ದು, ಯಾವ ರೀತಿಯ ಮಾರ್ಗಸೂಚಿ ನೀಡುತ್ತದೆ ಎಂಬುದನ್ನು ನೋಡಿ ಅನುಸರಿಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.