ETV Bharat / state

ಜನತಾ ದರ್ಶನ ಕಾರ್ಯಕ್ರಮದಿಂದ ಜನರ ಸಮಸ್ಯೆ ಅರಿತು, ಆಡಳಿತದಲ್ಲಿ ಹಿಡಿತ ಹೊಂದಲು ಸಹಕಾರಿ ಆಗಲಿದೆ: ಸಚಿವ ಮಧು ಬಂಗಾರಪ್ಪ

author img

By ETV Bharat Karnataka Team

Published : Sep 25, 2023, 4:26 PM IST

ಜನತಾ ದರ್ಶನಾ ಕಾರ್ಯಕ್ರಮದಿಂದ ಜನ ಸಮಾನ್ಯರ ಸಮಸ್ಯೆಯನ್ನು ಅರಿಯಲು ಸಾಧ್ಯವಾಗುತ್ತದೆ. ಇಲ್ಲಿ ಜನರ ಅಹವಾಲು ಮಾತ್ರವಲ್ಲದೆ ಅಹವಾಲಿಗೆ ಕಾನೂನುಬದ್ಧವಾಗಿ ಉತ್ತರ ನೀಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

janatha-darshana-program-at-shivamogga
ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಹೇಳಿಕೆ

ಶಿವಮೊಗ್ಗ : ಜನತಾ ದರ್ಶನ ಕಾರ್ಯಕ್ರಮವು ಜನ ಸಾಮಾನ್ಯರ ಸಮಸ್ಯೆ ಅರಿತು ಆಡಳಿತದಲ್ಲಿ ಹಿಡಿತ ಹೊಂದಲು ಸಹಕಾರಿ ಆಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನಗೆ ಹೊಸದಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, "ಅಧಿಕಾರಿಗಳೇ ನಿಮ್ಮಲ್ಲಿಗೆ" ಎಂಬ ಒಂದು ಕಾರ್ಯಕ್ರಮ ಮಾಡಿದ್ದರು. ನಾನು ಇದನ್ನು ಸೊರಬದಲ್ಲಿ ನಡೆಸಿದ್ದೆ. ಅಧಿಕಾರಿಗಳು ತಾಲೂಕು ಮಟ್ಟಕ್ಕೆ ಹೋಗಬೇಕೆಂದು ಈ ಕಾರ್ಯಕ್ರಮ ನಡೆಸಿದ್ದರು. ಇಂದಿನ ಜನತಾ ದರ್ಶನ ಅದರ ಮುಂದುವರೆದ ಭಾಗ ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಸಿದಾಗ ಜನರ ಸಮಸ್ಯೆಗಳನ್ನು ಅಲಿಸಲು ಸುಲಭವಾಗುತ್ತದೆ. ಇಲ್ಲಿ ಅಹವಾಲು ತೆಗೆದುಕೊಳ್ಳುವುದು ಅಷ್ಟೆ ಅಲ್ಲ, ಅಹವಾಲಿಗೆ ಕಾನೂನು ಬದ್ಧವಾಗಿ ಉತ್ತರ ನೀಡುವುದು ಮುಖ್ಯವಾಗುತ್ತದೆ. ಸಿಎಂ ಆದೇಶದಂತೆ ರಾಜ್ಯಾದ್ಯಂತ ಕಾರ್ಯಕ್ರಮ ನಡೆಸಲಾಗುತ್ತಿದೆ. ಮುಂದೆ ಶಾಸಕರುಗಳು ಕೂಡ ಈ ಕಾರ್ಯಕ್ರಮ ನಡೆಸಬಹುದು. ಅಧಿಕಾರಿಗಳು ಜನರಲ್ಲಿಗೆ ಹೋದಾಗ ಸಮಸ್ಯೆ ಪರಿಹರಿಸಲು ಸಾಧ್ಯವಾಗುತ್ತದೆ. ಆಡಳಿತ ಹಿಡಿತ ಹಿಡಿತ ಸಾಧಿಸಲು ಸಹಕಾರಿಯಾಗುತ್ತದೆ. ಜನ ಸಾಮಾನ್ಯರಿಗೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿದೆ ಎಂದು ಅನ್ನಿಸಬೇಕು. ಇದು ಒಳ್ಳೆಯ ಕೆಲಸ. ಎಲ್ಲಾ ಕಡೆ ಇಂತಹ ಕಾರ್ಯಕ್ರಮ ಆಗಬೇಕಿದೆ ಎಂದರು.

ಆಡಳಿತದಲ್ಲಿ ಹಿಡಿತ ತರಲು ಇಂತಹ ಕಾರ್ಯಕ್ರಮ ಬೇಕು ಎಂದು ಸಿಎಂ ಅವರಿಗೆ ಅನ್ನಿಸಿರಬಹುದು. ಆದ್ದರಿಂದ ಇಂತಹ ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ. ಸಾಮಾನ್ಯ ಜನರು ನಮಗೆ ಮತ ಹಾಕಿದ್ದಾರೆ. ಜನರ ಜೊತೆಗೆ ನಾವು ಇದ್ದರೆ ಆಡಳಿತ ಸಹಜವಾಗಿಯೇ ಸರಿ ಆಗುತ್ತದೆ. ಜೊತೆಗೆ ಅಧಿಕಾರಿ ವರ್ಗದವರು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಒಂದು ವೇದಿಕೆ ಆಗಲಿದೆ ಎಂದು ಸಚಿವರು ತಿಳಿಸಿದರು.

ಕಾವೇರಿ ನದಿ ನೀರು ವಿವಾದ: ಬಂದ್ ಮಾಡುವುದು, ಪ್ರತಿಭಟನೆ ನಡೆಸುವುದು ಅವರವರ ಹಕ್ಕು. ಆದ್ರೆ ಸಾಮಾನ್ಯ ಜನರಿಗೆ ಹಾಗೂ ಆಸ್ತಿಗೆ ಹಾನಿಯನ್ನುಂಟು ಮಾಡದ ಹಾಗೆ ಪ್ರತಿಭಟನೆ ನಡೆಸಬೇಕಾಗುತ್ತದೆ. ಕರ್ನಾಟಕ ರಾಜ್ಯ ಬಹಳ ಸಂಕಷ್ಟದಲ್ಲಿದೆ. ಸುಪ್ರಿಂ ಕೋರ್ಟ್ ನೀವೇ ತೀರ್ಮಾನ ಮಾಡಿ ಎಂದು ಹೇಳುತ್ತದೆ. ಕಾವೇರಿ ನೀರು ಹಂಚಿಕೆ ಪ್ರಾಧಿಕಾರದವರು ಮನಸ್ಸಿಗೆ ಬಂದ ಹಾಗೆ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿನ ವಸ್ತು ಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬೇಕೆಂಬ ಪ್ರಾಧಿಕಾರದ ಆದೇಶವನ್ನು ಅವರು ಖಂಡಿಸಿದರು.

ಕೇಂದ್ರ ಸರ್ಕಾರ ವಾಸ್ತವ ಸ್ಥಿತಿ ಅರಿಯಬೇಕು : ಅಲ್ಲದೆ ಭದ್ರಾ ನದಿ ನೀರು ಬಿಡುಗಡೆ ವಿಷಯದಲ್ಲೂ ಇದೇ ರೀತಿ ಆಗಿದೆ. ನಾಳೆಯಿಂದ ‌ನೀರು 10 ದಿನ ನೀರು ಹರಿಸಬೇಕಿದೆ. ಮತ್ತೆ ಬಂದ್ ಮಾಡಬೇಕಿದೆ. ದಾವಣಗೆರೆಯಲ್ಲಿ ನೀರು ಬಿಡಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿನವರು ರೈತರು, ಇಲ್ಲಿನವರು ರೈತರು. ನೀರು ಬಿಟ್ಟರೆ, ಮುಂದೆ ಕುಡಿಯಲು ನೀರು ಸಹ ಇರುವುದಿಲ್ಲ. ಕಾವೇರಿ ಹಾಗೂ ಭದ್ರಾ ಒಂದೇ ರೀತಿಯ ಸಮಸ್ಯೆಯಾಗಿದೆ. ಕಾವೇರಿ ಅಂತಾರಾಜ್ಯ ಸಮಸ್ಯೆ ಆದ್ರೆ, ಭದ್ರಾ ಎರಡು ಜಿಲ್ಲೆಗಳ ಸಮಸ್ಯೆ ಎಂದು ತಿಳಿಸಿದರು. ಈ ಕುರಿತು ಸಿಎಂ ಕ್ಯಾಬಿನೆಟ್​​ನಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ವಾಸ್ತವ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಹೊಸ ಮದ್ಯದಂಗಡಿಗೆ ಪರವಾನಗಿ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದವರು ಟೀಕಿಸುವುದಕ್ಕೆ ನಾನು ಉತ್ತರ ನೀಡಲು ಆಗಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಎಲ್ಲವನ್ನೂ ಹಂತ ಹಂತವಾಗಿ ನೋಡಿಕೊಂಡು ಮಾಡುತ್ತಾರೆ. ಮದ್ಯಂದಗಡಿಯ ಕುರಿತು ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಕಾವೇರಿ ವಿಚಾರದಲ್ಲಿ ನಮ್ಮ ತಂದೆಯವರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಆ ಭಾಗದ ಜನರ ಹೃದಯದಲ್ಲಿ ನಮ್ಮ ತಂದೆಯವರು ಇದ್ದಾರೆ. ಅದನ್ನು ಯಾರು ಕಲ್ಮಶ ಮಾಡಲು ಆಗಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.

ಸ್ಮಾರ್ಟ್ ಸಿಟಿ ಸೇರಿದಂತೆ ಇತರೆ ಕಾಮಗಾರಿಗಳ ಕುರಿತು ತನಿಖೆಗೆ ಆದೇಶ ನೀಡಿದ್ದಕ್ಕೆ ಈಶ್ವರಪ್ಪ ಹೇಳಿಕೆಗೆ, ಗುತ್ತಿಗೆದಾರರು ಈಶ್ವರಪ್ಪನವರ ಮನೆ ಬಾಗಿಲಿಗೆ ಹೋಗಿದ್ರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : 'ಜನತಾ ದರ್ಶನ' ವೇದಿಕೆಯಲ್ಲಿ ಸಂಸದ ಮುನಿಸ್ವಾಮಿ, ಶಾಸಕ ನಾರಾಯಣಸ್ವಾಮಿ ಜಟಾಪಟಿ

ಸಚಿವ ಮಧು ಬಂಗಾರಪ್ಪ ಹೇಳಿಕೆ

ಶಿವಮೊಗ್ಗ : ಜನತಾ ದರ್ಶನ ಕಾರ್ಯಕ್ರಮವು ಜನ ಸಾಮಾನ್ಯರ ಸಮಸ್ಯೆ ಅರಿತು ಆಡಳಿತದಲ್ಲಿ ಹಿಡಿತ ಹೊಂದಲು ಸಹಕಾರಿ ಆಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನಗೆ ಹೊಸದಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, "ಅಧಿಕಾರಿಗಳೇ ನಿಮ್ಮಲ್ಲಿಗೆ" ಎಂಬ ಒಂದು ಕಾರ್ಯಕ್ರಮ ಮಾಡಿದ್ದರು. ನಾನು ಇದನ್ನು ಸೊರಬದಲ್ಲಿ ನಡೆಸಿದ್ದೆ. ಅಧಿಕಾರಿಗಳು ತಾಲೂಕು ಮಟ್ಟಕ್ಕೆ ಹೋಗಬೇಕೆಂದು ಈ ಕಾರ್ಯಕ್ರಮ ನಡೆಸಿದ್ದರು. ಇಂದಿನ ಜನತಾ ದರ್ಶನ ಅದರ ಮುಂದುವರೆದ ಭಾಗ ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ನಡೆಸಿದಾಗ ಜನರ ಸಮಸ್ಯೆಗಳನ್ನು ಅಲಿಸಲು ಸುಲಭವಾಗುತ್ತದೆ. ಇಲ್ಲಿ ಅಹವಾಲು ತೆಗೆದುಕೊಳ್ಳುವುದು ಅಷ್ಟೆ ಅಲ್ಲ, ಅಹವಾಲಿಗೆ ಕಾನೂನು ಬದ್ಧವಾಗಿ ಉತ್ತರ ನೀಡುವುದು ಮುಖ್ಯವಾಗುತ್ತದೆ. ಸಿಎಂ ಆದೇಶದಂತೆ ರಾಜ್ಯಾದ್ಯಂತ ಕಾರ್ಯಕ್ರಮ ನಡೆಸಲಾಗುತ್ತಿದೆ. ಮುಂದೆ ಶಾಸಕರುಗಳು ಕೂಡ ಈ ಕಾರ್ಯಕ್ರಮ ನಡೆಸಬಹುದು. ಅಧಿಕಾರಿಗಳು ಜನರಲ್ಲಿಗೆ ಹೋದಾಗ ಸಮಸ್ಯೆ ಪರಿಹರಿಸಲು ಸಾಧ್ಯವಾಗುತ್ತದೆ. ಆಡಳಿತ ಹಿಡಿತ ಹಿಡಿತ ಸಾಧಿಸಲು ಸಹಕಾರಿಯಾಗುತ್ತದೆ. ಜನ ಸಾಮಾನ್ಯರಿಗೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿದೆ ಎಂದು ಅನ್ನಿಸಬೇಕು. ಇದು ಒಳ್ಳೆಯ ಕೆಲಸ. ಎಲ್ಲಾ ಕಡೆ ಇಂತಹ ಕಾರ್ಯಕ್ರಮ ಆಗಬೇಕಿದೆ ಎಂದರು.

ಆಡಳಿತದಲ್ಲಿ ಹಿಡಿತ ತರಲು ಇಂತಹ ಕಾರ್ಯಕ್ರಮ ಬೇಕು ಎಂದು ಸಿಎಂ ಅವರಿಗೆ ಅನ್ನಿಸಿರಬಹುದು. ಆದ್ದರಿಂದ ಇಂತಹ ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ. ಸಾಮಾನ್ಯ ಜನರು ನಮಗೆ ಮತ ಹಾಕಿದ್ದಾರೆ. ಜನರ ಜೊತೆಗೆ ನಾವು ಇದ್ದರೆ ಆಡಳಿತ ಸಹಜವಾಗಿಯೇ ಸರಿ ಆಗುತ್ತದೆ. ಜೊತೆಗೆ ಅಧಿಕಾರಿ ವರ್ಗದವರು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಒಂದು ವೇದಿಕೆ ಆಗಲಿದೆ ಎಂದು ಸಚಿವರು ತಿಳಿಸಿದರು.

ಕಾವೇರಿ ನದಿ ನೀರು ವಿವಾದ: ಬಂದ್ ಮಾಡುವುದು, ಪ್ರತಿಭಟನೆ ನಡೆಸುವುದು ಅವರವರ ಹಕ್ಕು. ಆದ್ರೆ ಸಾಮಾನ್ಯ ಜನರಿಗೆ ಹಾಗೂ ಆಸ್ತಿಗೆ ಹಾನಿಯನ್ನುಂಟು ಮಾಡದ ಹಾಗೆ ಪ್ರತಿಭಟನೆ ನಡೆಸಬೇಕಾಗುತ್ತದೆ. ಕರ್ನಾಟಕ ರಾಜ್ಯ ಬಹಳ ಸಂಕಷ್ಟದಲ್ಲಿದೆ. ಸುಪ್ರಿಂ ಕೋರ್ಟ್ ನೀವೇ ತೀರ್ಮಾನ ಮಾಡಿ ಎಂದು ಹೇಳುತ್ತದೆ. ಕಾವೇರಿ ನೀರು ಹಂಚಿಕೆ ಪ್ರಾಧಿಕಾರದವರು ಮನಸ್ಸಿಗೆ ಬಂದ ಹಾಗೆ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿನ ವಸ್ತು ಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬೇಕೆಂಬ ಪ್ರಾಧಿಕಾರದ ಆದೇಶವನ್ನು ಅವರು ಖಂಡಿಸಿದರು.

ಕೇಂದ್ರ ಸರ್ಕಾರ ವಾಸ್ತವ ಸ್ಥಿತಿ ಅರಿಯಬೇಕು : ಅಲ್ಲದೆ ಭದ್ರಾ ನದಿ ನೀರು ಬಿಡುಗಡೆ ವಿಷಯದಲ್ಲೂ ಇದೇ ರೀತಿ ಆಗಿದೆ. ನಾಳೆಯಿಂದ ‌ನೀರು 10 ದಿನ ನೀರು ಹರಿಸಬೇಕಿದೆ. ಮತ್ತೆ ಬಂದ್ ಮಾಡಬೇಕಿದೆ. ದಾವಣಗೆರೆಯಲ್ಲಿ ನೀರು ಬಿಡಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿನವರು ರೈತರು, ಇಲ್ಲಿನವರು ರೈತರು. ನೀರು ಬಿಟ್ಟರೆ, ಮುಂದೆ ಕುಡಿಯಲು ನೀರು ಸಹ ಇರುವುದಿಲ್ಲ. ಕಾವೇರಿ ಹಾಗೂ ಭದ್ರಾ ಒಂದೇ ರೀತಿಯ ಸಮಸ್ಯೆಯಾಗಿದೆ. ಕಾವೇರಿ ಅಂತಾರಾಜ್ಯ ಸಮಸ್ಯೆ ಆದ್ರೆ, ಭದ್ರಾ ಎರಡು ಜಿಲ್ಲೆಗಳ ಸಮಸ್ಯೆ ಎಂದು ತಿಳಿಸಿದರು. ಈ ಕುರಿತು ಸಿಎಂ ಕ್ಯಾಬಿನೆಟ್​​ನಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ವಾಸ್ತವ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಹೊಸ ಮದ್ಯದಂಗಡಿಗೆ ಪರವಾನಗಿ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದವರು ಟೀಕಿಸುವುದಕ್ಕೆ ನಾನು ಉತ್ತರ ನೀಡಲು ಆಗಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಎಲ್ಲವನ್ನೂ ಹಂತ ಹಂತವಾಗಿ ನೋಡಿಕೊಂಡು ಮಾಡುತ್ತಾರೆ. ಮದ್ಯಂದಗಡಿಯ ಕುರಿತು ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಕಾವೇರಿ ವಿಚಾರದಲ್ಲಿ ನಮ್ಮ ತಂದೆಯವರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಆ ಭಾಗದ ಜನರ ಹೃದಯದಲ್ಲಿ ನಮ್ಮ ತಂದೆಯವರು ಇದ್ದಾರೆ. ಅದನ್ನು ಯಾರು ಕಲ್ಮಶ ಮಾಡಲು ಆಗಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.

ಸ್ಮಾರ್ಟ್ ಸಿಟಿ ಸೇರಿದಂತೆ ಇತರೆ ಕಾಮಗಾರಿಗಳ ಕುರಿತು ತನಿಖೆಗೆ ಆದೇಶ ನೀಡಿದ್ದಕ್ಕೆ ಈಶ್ವರಪ್ಪ ಹೇಳಿಕೆಗೆ, ಗುತ್ತಿಗೆದಾರರು ಈಶ್ವರಪ್ಪನವರ ಮನೆ ಬಾಗಿಲಿಗೆ ಹೋಗಿದ್ರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : 'ಜನತಾ ದರ್ಶನ' ವೇದಿಕೆಯಲ್ಲಿ ಸಂಸದ ಮುನಿಸ್ವಾಮಿ, ಶಾಸಕ ನಾರಾಯಣಸ್ವಾಮಿ ಜಟಾಪಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.